AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ 3 ಲಕ್ಷ ಬೀದಿನಾಯಿ, ಲಾಕ್​ಡೌನ್​ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ?

ನಾಯಿಗಳ ಹಾವಳಿ ಜಾಸ್ತಿಯಾಗಿದೆ ಎಂದು ನಾಗರಿಕರು ದೂರುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬ್ಯುಸಿ ಅಂತಾ ಹೇಳಿ ಕೈಕಟ್ಟಿಕೊಂಡು ಕುಳಿತಿದ್ದಾರೆ. ಇನ್ನು, ಮನುಷ್ಯರಿಗೆ ಏನಾದರಾಗಲಿ ಬೀದಿಯಲ್ಲಿ ಬಿದ್ದಿರುವ ಲಕ್ಷಾಂತರ ನಾಯಿಗಳಿಗೆ ಅನ್ನ-ನೀರು ಕೊಡಿ ಅಂತಾ ಸೋ ಕಾಲ್ಡ್​ ಪ್ರಾಣಿಪ್ರಿಯರು ಮೊರೆಯಿಟ್ಟಿದ್ದಾರೆ. ಆದರೆ ರಾಜಧಾನಿಯಲ್ಲಿ ನಿನ್ನೆ ತಡರಾತ್ರಿ ಆಗಿರುವ ಅನಾಹುತವನ್ನು ಕಂಡು ಬಿಬಿಎಂಪಿ ಮತ್ತು ಪ್ರಾಣಿಪ್ರಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ನಗರದಲ್ಲಿ 3 ಲಕ್ಷ ಬೀದಿನಾಯಿ, ಲಾಕ್​ಡೌನ್​ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ?
ನಗರದಲ್ಲಿ 3 ಲಕ್ಷ ಬೀದಿನಾಯಿಗಳು, ಲಾಕ್ ಡೌನ್ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ?
ಸಾಧು ಶ್ರೀನಾಥ್​
|

Updated on:May 15, 2021 | 9:42 AM

Share

ಬೆಂಗಳೂರು: ರಾಜಧಾನಿ ನಿವಾಸಿಗಳ ನಾಗರಿಕ ಸಮಸ್ಯೆಗಳ ಕೊರೊನಾ ಸಮ್ಮುಖದಲ್ಲಿ ದಿನೇದಿನೆ ಕಾಡುತ್ತಲೇ ಇವೆ. ಒಂದೆಡೆ ಕೊರೊನಾದಿಂದ ಇಡೀ ಬೆಂಗಳೂರು ಬೀಗ ಹಾಕಿಕೊಂಡು ಮಲಗಿರುವಾಗ ಬೀದಿ ನಾಯಿಗಳು ಎಚ್ಚೆತ್ತು ಕುಳಿತಿವೆ. ಖಾಲಿ ಬೀದಿಗಳಲ್ಲಿ ಅವುಗಳದ್ದೇ ಅಧಿಪತ್ಯವಾಗಿದೆ. ಬೀದಿಗೆ ನಾಲ್ಕು ನಾಯಿಗಳ ಲೆಕ್ಕದಲ್ಲಿ ಲಕ್ಷಾಂತರ ಬೀದಿನಾಯಿಗಳು ವಾಸಿಸುತ್ತಿವೆ. ಅಂದಾಜು 3 ಲಕ್ಷಕ್ಕೂಹೆಚ್ಚು ಬೀದಿ ನಾಯಿಗಳು ಬೆಂಗಳೂರಿನಲ್ಲಿ ಇವೆ.

ಈ ಮಧ್ಯೆ ನಾಯಿಗಳ ಹಾವಳಿ ಜಾಸ್ತಿಯಾಗಿದೆ ಎಂದು ನಾಗರಿಕರು ದೂರುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬ್ಯುಸಿ ಅಂತಾ ಹೇಳಿ ಕೈಕಟ್ಟಿಕೊಂಡು ಕುಳಿತಿದ್ದಾರೆ. ಇನ್ನು, ಮನುಷ್ಯರಿಗೆ ಏನಾದರಾಗಲಿ ಬೀದಿಯಲ್ಲಿ ಬಿದ್ದಿರುವ ಲಕ್ಷಾಂತರ ನಾಯಿಗಳಿಗೆ ಅನ್ನ-ನೀರು ಕೊಡಿ ಅಂತಾ ಸೋ ಕಾಲ್ಡ್​ ಪ್ರಾಣಿಪ್ರಿಯರು ಮೊರೆಯಿಟ್ಟಿದ್ದಾರೆ. ಆದರೆ ರಾಜಧಾನಿಯಲ್ಲಿ ನಿನ್ನೆ ತಡರಾತ್ರಿ ಆಗಿರುವ ಅನಾಹುತವನ್ನು ಕಂಡು ಬಿಬಿಎಂಪಿ ಮತ್ತು ಪ್ರಾಣಿಪ್ರಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ನಿನ್ನೆ ತಡರಾತ್ರಿ ನರಭಕ್ಷಕ ನಾಯಿಗಳ ದಾಳಿಗೆ ನಿರ್ಗತಿಕ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಊಟ ಸಿಗದೇ ನಾಯಿಗಳು ಮನುಷ್ಯರ ಮೇಲೆ ದಾಳಿಗಿಳಿಯುತ್ತಿವೆ ಎನ್ನಲಾಗಿದೆ. ಶುಕ್ರವಾರ ರಾತ್ರಿ 11.30 ರ ಸುಮಾರಿಗೆ ಶಶಿಧರ್ ಲೇಔಟ್ ನ ದ್ವಾರಕಾ ನಗರದಲ್ಲಿ 60 ವರ್ಷದ ವೃದ್ಧೆಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

ಮೊದಲು ರಾತ್ರಿ 9.30ರಲ್ಲಿ ಇವೇ ನಾಯಿಗಳು ಅಟ್ಯಾಕ್ ಮಾಡಿವೆ. ಈ ವೇಳೆ ಅಲ್ಲಿದ್ದವರು ನಾಯಿಗಳನ್ನು ಓಡಿಸಿದ್ದರು. ಆದರೆ ಬಳಿಕ 11.30ರ ಸುಮಾರಿಗೆ ಮತ್ತೆ ಆ ನಾಯಿಗಳು ದಾಳಿ ನಡೆಸಿವೆ. ದಾಳಿಯಿಂದ ವೃದ್ಧೆ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ. ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ‌.

(dog bite in rajarajeshwari nagar bengaluru during coronavirus lockdown older woman died)

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಸಾಕು ನಾಯಿ ವೈಟ್​ ಹೌಸ್​ ಕೆಲಸಗಾರನಿಗೆ ಕಚ್ಚಿದ್ದು ಈಗ ಅಂತರಾಷ್ಟ್ರೀಯ ಸುದ್ದಿ!

Published On - 9:37 am, Sat, 15 May 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ