AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ 3 ಲಕ್ಷ ಬೀದಿನಾಯಿ, ಲಾಕ್​ಡೌನ್​ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ?

ನಾಯಿಗಳ ಹಾವಳಿ ಜಾಸ್ತಿಯಾಗಿದೆ ಎಂದು ನಾಗರಿಕರು ದೂರುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬ್ಯುಸಿ ಅಂತಾ ಹೇಳಿ ಕೈಕಟ್ಟಿಕೊಂಡು ಕುಳಿತಿದ್ದಾರೆ. ಇನ್ನು, ಮನುಷ್ಯರಿಗೆ ಏನಾದರಾಗಲಿ ಬೀದಿಯಲ್ಲಿ ಬಿದ್ದಿರುವ ಲಕ್ಷಾಂತರ ನಾಯಿಗಳಿಗೆ ಅನ್ನ-ನೀರು ಕೊಡಿ ಅಂತಾ ಸೋ ಕಾಲ್ಡ್​ ಪ್ರಾಣಿಪ್ರಿಯರು ಮೊರೆಯಿಟ್ಟಿದ್ದಾರೆ. ಆದರೆ ರಾಜಧಾನಿಯಲ್ಲಿ ನಿನ್ನೆ ತಡರಾತ್ರಿ ಆಗಿರುವ ಅನಾಹುತವನ್ನು ಕಂಡು ಬಿಬಿಎಂಪಿ ಮತ್ತು ಪ್ರಾಣಿಪ್ರಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ನಗರದಲ್ಲಿ 3 ಲಕ್ಷ ಬೀದಿನಾಯಿ, ಲಾಕ್​ಡೌನ್​ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ?
ನಗರದಲ್ಲಿ 3 ಲಕ್ಷ ಬೀದಿನಾಯಿಗಳು, ಲಾಕ್ ಡೌನ್ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2021 | 9:42 AM

Share

ಬೆಂಗಳೂರು: ರಾಜಧಾನಿ ನಿವಾಸಿಗಳ ನಾಗರಿಕ ಸಮಸ್ಯೆಗಳ ಕೊರೊನಾ ಸಮ್ಮುಖದಲ್ಲಿ ದಿನೇದಿನೆ ಕಾಡುತ್ತಲೇ ಇವೆ. ಒಂದೆಡೆ ಕೊರೊನಾದಿಂದ ಇಡೀ ಬೆಂಗಳೂರು ಬೀಗ ಹಾಕಿಕೊಂಡು ಮಲಗಿರುವಾಗ ಬೀದಿ ನಾಯಿಗಳು ಎಚ್ಚೆತ್ತು ಕುಳಿತಿವೆ. ಖಾಲಿ ಬೀದಿಗಳಲ್ಲಿ ಅವುಗಳದ್ದೇ ಅಧಿಪತ್ಯವಾಗಿದೆ. ಬೀದಿಗೆ ನಾಲ್ಕು ನಾಯಿಗಳ ಲೆಕ್ಕದಲ್ಲಿ ಲಕ್ಷಾಂತರ ಬೀದಿನಾಯಿಗಳು ವಾಸಿಸುತ್ತಿವೆ. ಅಂದಾಜು 3 ಲಕ್ಷಕ್ಕೂಹೆಚ್ಚು ಬೀದಿ ನಾಯಿಗಳು ಬೆಂಗಳೂರಿನಲ್ಲಿ ಇವೆ.

ಈ ಮಧ್ಯೆ ನಾಯಿಗಳ ಹಾವಳಿ ಜಾಸ್ತಿಯಾಗಿದೆ ಎಂದು ನಾಗರಿಕರು ದೂರುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬ್ಯುಸಿ ಅಂತಾ ಹೇಳಿ ಕೈಕಟ್ಟಿಕೊಂಡು ಕುಳಿತಿದ್ದಾರೆ. ಇನ್ನು, ಮನುಷ್ಯರಿಗೆ ಏನಾದರಾಗಲಿ ಬೀದಿಯಲ್ಲಿ ಬಿದ್ದಿರುವ ಲಕ್ಷಾಂತರ ನಾಯಿಗಳಿಗೆ ಅನ್ನ-ನೀರು ಕೊಡಿ ಅಂತಾ ಸೋ ಕಾಲ್ಡ್​ ಪ್ರಾಣಿಪ್ರಿಯರು ಮೊರೆಯಿಟ್ಟಿದ್ದಾರೆ. ಆದರೆ ರಾಜಧಾನಿಯಲ್ಲಿ ನಿನ್ನೆ ತಡರಾತ್ರಿ ಆಗಿರುವ ಅನಾಹುತವನ್ನು ಕಂಡು ಬಿಬಿಎಂಪಿ ಮತ್ತು ಪ್ರಾಣಿಪ್ರಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ನಿನ್ನೆ ತಡರಾತ್ರಿ ನರಭಕ್ಷಕ ನಾಯಿಗಳ ದಾಳಿಗೆ ನಿರ್ಗತಿಕ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಊಟ ಸಿಗದೇ ನಾಯಿಗಳು ಮನುಷ್ಯರ ಮೇಲೆ ದಾಳಿಗಿಳಿಯುತ್ತಿವೆ ಎನ್ನಲಾಗಿದೆ. ಶುಕ್ರವಾರ ರಾತ್ರಿ 11.30 ರ ಸುಮಾರಿಗೆ ಶಶಿಧರ್ ಲೇಔಟ್ ನ ದ್ವಾರಕಾ ನಗರದಲ್ಲಿ 60 ವರ್ಷದ ವೃದ್ಧೆಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

ಮೊದಲು ರಾತ್ರಿ 9.30ರಲ್ಲಿ ಇವೇ ನಾಯಿಗಳು ಅಟ್ಯಾಕ್ ಮಾಡಿವೆ. ಈ ವೇಳೆ ಅಲ್ಲಿದ್ದವರು ನಾಯಿಗಳನ್ನು ಓಡಿಸಿದ್ದರು. ಆದರೆ ಬಳಿಕ 11.30ರ ಸುಮಾರಿಗೆ ಮತ್ತೆ ಆ ನಾಯಿಗಳು ದಾಳಿ ನಡೆಸಿವೆ. ದಾಳಿಯಿಂದ ವೃದ್ಧೆ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ. ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ‌.

(dog bite in rajarajeshwari nagar bengaluru during coronavirus lockdown older woman died)

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಸಾಕು ನಾಯಿ ವೈಟ್​ ಹೌಸ್​ ಕೆಲಸಗಾರನಿಗೆ ಕಚ್ಚಿದ್ದು ಈಗ ಅಂತರಾಷ್ಟ್ರೀಯ ಸುದ್ದಿ!

Published On - 9:37 am, Sat, 15 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು