AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ವಿರುದ್ಧ ದೂರು ನೀಡಿದರೆಂದು ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕ ಅರೆಸ್ಟ್

ಶ್ವಾನ ಮಾಲೀಕ ದೂರು ನೀಡಿದ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಸದ್ಯ ಘಟನೆ ಸಂಬಂಧ ನಾಯಿ ಮಾಲೀಕನನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ನಂಜುಂಡ ಬಾಬು ಬಂಧಿತ ಆರೋಪಿ. ಕೊತ್ತನೂರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ಜೂನ್ 13ರಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ಸಾಕು ನಾಯಿ ಕಚ್ಚಿತ್ತು.

ತನ್ನ ವಿರುದ್ಧ ದೂರು ನೀಡಿದರೆಂದು ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕ ಅರೆಸ್ಟ್
ನಂಜುಂಡ ಬಾಬು
ಜಗದೀಶ ಬಿ.
| Edited By: ಆಯೇಷಾ ಬಾನು|

Updated on:Oct 26, 2023 | 11:37 AM

Share

ಬೆಂಗಳೂರು, ಅ.26: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿಯೊಂದು (Dog) ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದ ರೊಚ್ಚಿಗೆದ್ದ ಶ್ವಾನ ಮಾಲೀಕ ದೂರು ನೀಡಿದ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಸದ್ಯ ಘಟನೆ ಸಂಬಂಧ ನಾಯಿ ಮಾಲೀಕನನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ನಂಜುಂಡ ಬಾಬು ಬಂಧಿತ ಆರೋಪಿ.

ಕೊತ್ತನೂರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ಜೂನ್ 13ರಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ಸಾಕು ನಾಯಿ ಕಚ್ಚಿತ್ತು. ಈ ಸಂಬಂಧ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು. ದೂರು ಕೊಟ್ಟವರ ಸುಮ್ಮನೆ ಬಿಡುವುದಿಲ್ಲ ಎಂದು ನಾಯಿ ಮಾಲೀಕ ಬೆದರಿಕೆ ಹಾಕಿದ್ದ. ಅಲ್ಲದೆ ದೂರುದಾರೆ ಮಹಿಳೆ ಹಾಗೂ ಶ್ವಾನ ಮಾಲೀಕನ ನಡುವೆ ಚೀಟಿ ವ್ಯವಹಾರವಿತ್ತು. ನಾಯಿ ಕಚ್ಚಿದ ಹಿನ್ನಲೆ ಚೀಟಿ ಹಣವನ್ನು ಮಹಿಳೆ ಆಸ್ಪತ್ರೆ ಚಿಕಿತ್ಸೆಗೆಂದು ಬಳಸಿಕೊಂಡಿದ್ದಳು. ಇದಾದ ಬಳಿಕ ಶ್ವಾನ ಮಾಲೀಕ ದೂರುದಾರರ ಮನೆಯ ಬಳಿ ಇದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ್ದರು. ಸದ್ಯ ಗಾಡಿಗಳು ಸುಟ್ಟ ಹಿನ್ನಲೆ ಕೊತ್ತನೂರು ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ನಾಯಿ ಕಚ್ಚಿದ್ದಕ್ಕೆ ಮಹಿಳೆಯಿಂದ ದೂರು, ಕೋಪದಲ್ಲಿ ಆಕೆಯ ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕ

ಘಟನೆ ವಿವರ

ಜೂ.13 ರಂದು ಪುಷ್ಪಾ ಅವರು ಕೆಲಸಕ್ಕೆಂದು ಹೋಗುವಾಗ ಸಾಕು ಶ್ವಾನವೊಂದು ದಾಳಿ ಮಾಡಿತ್ತು. ಸಾಕು ನಾಯಿ ದಾಳಿಯನ್ನು ಕಣ್ಣಾರೆ ಕಂಡ ಬಾಬು ಮತ್ತು ಗಾಯತ್ರಿ, ಪುಷ್ಪಾ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡುವಂತೆ ಪುಷ್ಪಾ ಮತ್ತು ಅವರ ಮಗನನ್ನು ಬಾಬು ಮತ್ತು ಗಾಯತ್ರಿ ಒತ್ತಾಯಿಸಿದ್ದರು. ಬಳಿಕ ಈ ಬಗ್ಗೆ ಮಹಿಳೆ ನಾಯಿಯ ಮಾಲೀಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಶ್ವಾನ ಮಾಲೀಕ ನಂಜುಂಡ ಬಾಬು ದೂರುದಾರರ ಬೈಕ್​ಗಳಿಗೆ ಬೆಂಕಿ ಇಟ್ಟಿದ್ದರು. ಪುಷ್ಪಾ ಮತ್ತು ಆಕೆ ಮಗನಿಗೆ ಸೇರಿದ ವಾಹನಕ್ಕೆ ಬೆಂಕಿ ಇಟ್ಟಿದ್ದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:33 am, Thu, 26 October 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ