AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ರೈಲ್ವೆ ಹಳಿಯಲ್ಲಿ ಕಂತೆ ಕಂತೆ ಡಾಲರ್​​ ಪತ್ತೆ ಕೇಸ್; ಇಬ್ಬರು ಆರೋಪಿಗಳ ಬಂಧನ, ಡಾಲರ್​ ಹಿಂದಿದೆ ರೋಚಕ ಕಥೆ

ಹೆಬ್ಬಾಳ ರೈಲ್ವೆ ನಿಲ್ದಾಣ ಬಳಿಯ ಹಳಿಯಲ್ಲಿ ಕಂತೆ ಕಂತೆ ಡಾಲರ್(Doller) ​​ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು(Amruthahalli Police)  ಬಂಧಿಸಿದ್ದಾರೆ. ಶರವಣ, ಬಿದನ್​​ನನ್ನು ಆರೋಪಿಗಳು.

ಹೆಬ್ಬಾಳ ರೈಲ್ವೆ ಹಳಿಯಲ್ಲಿ ಕಂತೆ ಕಂತೆ ಡಾಲರ್​​ ಪತ್ತೆ ಕೇಸ್; ಇಬ್ಬರು ಆರೋಪಿಗಳ ಬಂಧನ, ಡಾಲರ್​ ಹಿಂದಿದೆ ರೋಚಕ ಕಥೆ
ಬಂಧಿತ ಆರೋಪಿಗಳು
Shivaprasad B
| Edited By: |

Updated on: Nov 16, 2023 | 6:08 PM

Share

ಬೆಂಗಳೂರು, ನ.16: ಹೆಬ್ಬಾಳ ರೈಲ್ವೆ ನಿಲ್ದಾಣ ಬಳಿಯ ಹಳಿಯಲ್ಲಿ ಕಂತೆ ಕಂತೆ ಡಾಲರ್(Doller) ​​ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು(Amruthahalli Police)  ಬಂಧಿಸಿದ್ದಾರೆ. ಶರವಣ, ಬಿದನ್​​ನನ್ನು ಆರೋಪಿಗಳು. ಹಳಿಯಲ್ಲಿ ಸಿಕ್ಕ ಡಾಲರ್ಸ್​ನ್ನು ಪೊಲೀಸರಿಗೆ ​​ ಒಪ್ಪಿಸಿದ್ದ ಸಾಮಾಜಿಕ ಕಾರ್ಯಕರ್ತ  ಕಲೀಮುಲ್ಲಗೆ ಬಂಧಿತರು ಅಪಹರಿಸಿದ್ದರು. ಈ ಕೇಸ್​ಗೆ ಸಂಬಂಧಪಟ್ಟಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿ, ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.

ಘಟನೆ ವಿವರ

ನವೆಂಬರ್ 1 ರಂದು ಚಿಂದಿ ಆಯುವ ವ್ಯಕ್ತಿಗೆ ಡಾಲರ್ಸ್ ನೋಟು ಸಿಕ್ಕಿತ್ತು. 100ರ ಮುಖಬೆಲೆಯ 23 ಕಂತೆಗಳಲ್ಲಿ 30 ಮಿಲಿಯನ್ ಡಾಲರ್​ನ್ನು​ ಗುತ್ತಿಗೆದಾರ ತೊಹಿಬುಲ್​ ಇಸ್ಲಾಂಗೆ ಆತ ನೀಡಿದ್ದ. ಇದನ್ನು ನೋಡಿದ ಗುತ್ತಿಗೆದಾರ ಕೂಡಲೇ ಕರೆ ಮಾಡಿ ವಿಷಯ ತಿಳಿಸಿ ಸಾಮಾಜಿಕ ಕಾರ್ಯಕರ್ತ ಕಲೀಮುಲ್ಲಗೆ ಕೊಟ್ಟಿದ್ದ,  ಆತ ಡಾಲರ್​ಗಳ ಕಂತೆಯನ್ನು ಪೊಲೀಸ್​ ಕಮಿಷನರ್​​ಗೆ ಒಪ್ಪಿಸಿದ್ದ. ಇದಾದ ಬಳಿಕ ಖದೀಮರು ಇವರಿಬ್ಬರು ಅಪಹರಣ ಮಾಡಿದ್ದರು.

ಇದನ್ನೂ ಓದಿ:ಗೆಳೆಯನನ್ನೇ ಕೊಲೆಗೈದ ಯುವಕ; ದೂರದ ಊರಿನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸಿದ ಮಂಡ್ಯ ಪೊಲೀಸರು

ಪೊಲೀಸ್​ ಠಾಣೆಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಕಲೀಮುಲ್ಲ

ಬಪ್ಪಾ ಎಂಬುವವರಿಗೆ ಡಾಲರ್ಸ್ ಸಿಕ್ಕಿರುವ ವಿಷಯ ತಿಳಿದಿದ್ದ ಆರೋಪಿಗಳು, ನವೆಂಬರ್ 7ರಂದು ಆತನನ್ನು ಐವರು ಸೇರಿ ಅಪಹರಿಸಿದ್ದರು. ಆದರೆ, ಅದು ಆತನ ಬಳಿ ಇಲ್ಲವೆಂದು ತಿಳಿದ ಮೇಲೆ ನವೆಂಬರ್​ 8ರ ಮಧ್ಯರಾತ್ರಿ ಸಾಮಾಜಿಕ ಕಾರ್ಯಕರ್ತ ಕಲೀಮುಲ್ಲನನ್ನು ಅಪಹರಿಸಿ ಡಾಲರ್ಸ್ ಕೊಡುವಂತೆ ಕೇಳಿ ಬೆದರಿಕೆ ಹಾಕಿದ್ದರು. ಅದನ್ನು ತೆಗೆದುಕೊಂಡು ಫಾರಿನ್ ಎಕ್ಸ್​ಚೇಂಜ್​ನಲ್ಲಿ ರೂಪಾಯಿಗೆ ಕನ್ವರ್ಟ್ ಮಾಡಿಸಿ ಹಂಚಿಕೊಳ್ಳಲು ಪ್ಲಾನ್ ಮಾಡಿದ್ದರು. ಆದ್ರೆ, ಸಿಕ್ಕ ಡಾಲರ್ಸ್​ನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ವಿಷಯ ತಿಳಿದು ನಿರಾಸೆಗೊಂಡಿದ್ದರು. ಈ ಬಗ್ಗೆ ಕಲೀಮುಲ್ಲ ಅವರು ಅಮೃತಹಳ್ಳಿ ಪೊಲೀಸ್​ ಠಾಣೆಗೆ ದೂರು ನೀಡಿದ್ದರು, ಇದೀಗ ದೂರಿನನ್ವಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!