AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ರೈಲ್ವೆ ಹಳಿಯಲ್ಲಿ ಕಂತೆ ಕಂತೆ ಡಾಲರ್​​ ಪತ್ತೆ ಕೇಸ್; ಇಬ್ಬರು ಆರೋಪಿಗಳ ಬಂಧನ, ಡಾಲರ್​ ಹಿಂದಿದೆ ರೋಚಕ ಕಥೆ

ಹೆಬ್ಬಾಳ ರೈಲ್ವೆ ನಿಲ್ದಾಣ ಬಳಿಯ ಹಳಿಯಲ್ಲಿ ಕಂತೆ ಕಂತೆ ಡಾಲರ್(Doller) ​​ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು(Amruthahalli Police)  ಬಂಧಿಸಿದ್ದಾರೆ. ಶರವಣ, ಬಿದನ್​​ನನ್ನು ಆರೋಪಿಗಳು.

ಹೆಬ್ಬಾಳ ರೈಲ್ವೆ ಹಳಿಯಲ್ಲಿ ಕಂತೆ ಕಂತೆ ಡಾಲರ್​​ ಪತ್ತೆ ಕೇಸ್; ಇಬ್ಬರು ಆರೋಪಿಗಳ ಬಂಧನ, ಡಾಲರ್​ ಹಿಂದಿದೆ ರೋಚಕ ಕಥೆ
ಬಂಧಿತ ಆರೋಪಿಗಳು
Shivaprasad B
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 16, 2023 | 6:08 PM

Share

ಬೆಂಗಳೂರು, ನ.16: ಹೆಬ್ಬಾಳ ರೈಲ್ವೆ ನಿಲ್ದಾಣ ಬಳಿಯ ಹಳಿಯಲ್ಲಿ ಕಂತೆ ಕಂತೆ ಡಾಲರ್(Doller) ​​ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು(Amruthahalli Police)  ಬಂಧಿಸಿದ್ದಾರೆ. ಶರವಣ, ಬಿದನ್​​ನನ್ನು ಆರೋಪಿಗಳು. ಹಳಿಯಲ್ಲಿ ಸಿಕ್ಕ ಡಾಲರ್ಸ್​ನ್ನು ಪೊಲೀಸರಿಗೆ ​​ ಒಪ್ಪಿಸಿದ್ದ ಸಾಮಾಜಿಕ ಕಾರ್ಯಕರ್ತ  ಕಲೀಮುಲ್ಲಗೆ ಬಂಧಿತರು ಅಪಹರಿಸಿದ್ದರು. ಈ ಕೇಸ್​ಗೆ ಸಂಬಂಧಪಟ್ಟಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿ, ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.

ಘಟನೆ ವಿವರ

ನವೆಂಬರ್ 1 ರಂದು ಚಿಂದಿ ಆಯುವ ವ್ಯಕ್ತಿಗೆ ಡಾಲರ್ಸ್ ನೋಟು ಸಿಕ್ಕಿತ್ತು. 100ರ ಮುಖಬೆಲೆಯ 23 ಕಂತೆಗಳಲ್ಲಿ 30 ಮಿಲಿಯನ್ ಡಾಲರ್​ನ್ನು​ ಗುತ್ತಿಗೆದಾರ ತೊಹಿಬುಲ್​ ಇಸ್ಲಾಂಗೆ ಆತ ನೀಡಿದ್ದ. ಇದನ್ನು ನೋಡಿದ ಗುತ್ತಿಗೆದಾರ ಕೂಡಲೇ ಕರೆ ಮಾಡಿ ವಿಷಯ ತಿಳಿಸಿ ಸಾಮಾಜಿಕ ಕಾರ್ಯಕರ್ತ ಕಲೀಮುಲ್ಲಗೆ ಕೊಟ್ಟಿದ್ದ,  ಆತ ಡಾಲರ್​ಗಳ ಕಂತೆಯನ್ನು ಪೊಲೀಸ್​ ಕಮಿಷನರ್​​ಗೆ ಒಪ್ಪಿಸಿದ್ದ. ಇದಾದ ಬಳಿಕ ಖದೀಮರು ಇವರಿಬ್ಬರು ಅಪಹರಣ ಮಾಡಿದ್ದರು.

ಇದನ್ನೂ ಓದಿ:ಗೆಳೆಯನನ್ನೇ ಕೊಲೆಗೈದ ಯುವಕ; ದೂರದ ಊರಿನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸಿದ ಮಂಡ್ಯ ಪೊಲೀಸರು

ಪೊಲೀಸ್​ ಠಾಣೆಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಕಲೀಮುಲ್ಲ

ಬಪ್ಪಾ ಎಂಬುವವರಿಗೆ ಡಾಲರ್ಸ್ ಸಿಕ್ಕಿರುವ ವಿಷಯ ತಿಳಿದಿದ್ದ ಆರೋಪಿಗಳು, ನವೆಂಬರ್ 7ರಂದು ಆತನನ್ನು ಐವರು ಸೇರಿ ಅಪಹರಿಸಿದ್ದರು. ಆದರೆ, ಅದು ಆತನ ಬಳಿ ಇಲ್ಲವೆಂದು ತಿಳಿದ ಮೇಲೆ ನವೆಂಬರ್​ 8ರ ಮಧ್ಯರಾತ್ರಿ ಸಾಮಾಜಿಕ ಕಾರ್ಯಕರ್ತ ಕಲೀಮುಲ್ಲನನ್ನು ಅಪಹರಿಸಿ ಡಾಲರ್ಸ್ ಕೊಡುವಂತೆ ಕೇಳಿ ಬೆದರಿಕೆ ಹಾಕಿದ್ದರು. ಅದನ್ನು ತೆಗೆದುಕೊಂಡು ಫಾರಿನ್ ಎಕ್ಸ್​ಚೇಂಜ್​ನಲ್ಲಿ ರೂಪಾಯಿಗೆ ಕನ್ವರ್ಟ್ ಮಾಡಿಸಿ ಹಂಚಿಕೊಳ್ಳಲು ಪ್ಲಾನ್ ಮಾಡಿದ್ದರು. ಆದ್ರೆ, ಸಿಕ್ಕ ಡಾಲರ್ಸ್​ನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ವಿಷಯ ತಿಳಿದು ನಿರಾಸೆಗೊಂಡಿದ್ದರು. ಈ ಬಗ್ಗೆ ಕಲೀಮುಲ್ಲ ಅವರು ಅಮೃತಹಳ್ಳಿ ಪೊಲೀಸ್​ ಠಾಣೆಗೆ ದೂರು ನೀಡಿದ್ದರು, ಇದೀಗ ದೂರಿನನ್ವಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ