AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌

ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌
ಪ್ರಾತಿನಿಧಿಕ ಚಿತ್ರImage Credit source: en.m.wikipedia
ಪ್ರಸನ್ನ ಗಾಂವ್ಕರ್​
| Edited By: |

Updated on:Oct 26, 2023 | 8:46 PM

Share

ಬೆಂಗಳೂರು, ಅಕ್ಟೋಬರ್​​​ 26: ವರ್ಗಾವಣೆಗೆ ಡೋಂಟ್ ಕೇರ್ ಎಂದ 27 ಅಧಿಕಾರಿಗಳಿಗೆ ಗೇಟ್‌ಪಾಸ್​ (suspension) ನೀಡಲಾಗಿದೆ. ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿನೆ ನೀಡಲಾಗಿದೆ.

ಎರಡು ವರ್ಷಗಳಿಗೊಮ್ಮೆ ವರ್ಗಾವಣೆ: ಗೃಹಸಚಿವ ಡಾ.ಜಿ.ಪರಮೇಶ್ವರ

ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಇತ್ತೀಚಿಗೆ ಮಾತನಾಡಿದ್ದು, ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದಿದ್ದರು.

ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:37 pm, Thu, 26 October 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ