AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌

ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌
ಪ್ರಾತಿನಿಧಿಕ ಚಿತ್ರImage Credit source: en.m.wikipedia
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Oct 26, 2023 | 8:46 PM

ಬೆಂಗಳೂರು, ಅಕ್ಟೋಬರ್​​​ 26: ವರ್ಗಾವಣೆಗೆ ಡೋಂಟ್ ಕೇರ್ ಎಂದ 27 ಅಧಿಕಾರಿಗಳಿಗೆ ಗೇಟ್‌ಪಾಸ್​ (suspension) ನೀಡಲಾಗಿದೆ. ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿನೆ ನೀಡಲಾಗಿದೆ.

ಎರಡು ವರ್ಷಗಳಿಗೊಮ್ಮೆ ವರ್ಗಾವಣೆ: ಗೃಹಸಚಿವ ಡಾ.ಜಿ.ಪರಮೇಶ್ವರ

ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಇತ್ತೀಚಿಗೆ ಮಾತನಾಡಿದ್ದು, ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದಿದ್ದರು.

ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:37 pm, Thu, 26 October 23

ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ