AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌

ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌
ಪ್ರಾತಿನಿಧಿಕ ಚಿತ್ರImage Credit source: en.m.wikipedia
ಪ್ರಸನ್ನ ಗಾಂವ್ಕರ್​
| Edited By: |

Updated on:Oct 26, 2023 | 8:46 PM

Share

ಬೆಂಗಳೂರು, ಅಕ್ಟೋಬರ್​​​ 26: ವರ್ಗಾವಣೆಗೆ ಡೋಂಟ್ ಕೇರ್ ಎಂದ 27 ಅಧಿಕಾರಿಗಳಿಗೆ ಗೇಟ್‌ಪಾಸ್​ (suspension) ನೀಡಲಾಗಿದೆ. ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿನೆ ನೀಡಲಾಗಿದೆ.

ಎರಡು ವರ್ಷಗಳಿಗೊಮ್ಮೆ ವರ್ಗಾವಣೆ: ಗೃಹಸಚಿವ ಡಾ.ಜಿ.ಪರಮೇಶ್ವರ

ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಇತ್ತೀಚಿಗೆ ಮಾತನಾಡಿದ್ದು, ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದಿದ್ದರು.

ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:37 pm, Thu, 26 October 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!