ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌

ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌
ಪ್ರಾತಿನಿಧಿಕ ಚಿತ್ರ
Image Credit source: en.m.wikipedia
Edited By:

Updated on: Oct 26, 2023 | 8:46 PM

ಬೆಂಗಳೂರು, ಅಕ್ಟೋಬರ್​​​ 26: ವರ್ಗಾವಣೆಗೆ ಡೋಂಟ್ ಕೇರ್ ಎಂದ 27 ಅಧಿಕಾರಿಗಳಿಗೆ ಗೇಟ್‌ಪಾಸ್​ (suspension) ನೀಡಲಾಗಿದೆ. ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿನೆ ನೀಡಲಾಗಿದೆ.

ಎರಡು ವರ್ಷಗಳಿಗೊಮ್ಮೆ ವರ್ಗಾವಣೆ: ಗೃಹಸಚಿವ ಡಾ.ಜಿ.ಪರಮೇಶ್ವರ

ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಇತ್ತೀಚಿಗೆ ಮಾತನಾಡಿದ್ದು, ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದಿದ್ದರು.

ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:37 pm, Thu, 26 October 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us