AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹ ನೋಂದಣಿಗೆ ‘ಆಧಾರ್’ ಒಂದೇ ವಯಸ್ಸಿನ ಪುರಾವೆಯಲ್ಲ ಎಂದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ!

ಬಾಲ್ಯವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಮದುವೆ ನೋಂದಣಿ ಸಮಯದಲ್ಲಿ ಆಧಾರ್ ಕಾರ್ಡ್ ಒಂದನ್ನೇ ವಯಸ್ಸಿನ ಅಂತಿಮ ಪುರಾವೆಯಾಗಿ ಸ್ವೀಕರಿಸಬಾರದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸರ್ಕಾರಕ್ಕೆ ಮನವಿ ಮಾಡಿದೆ. ವಯಸ್ಸಿನ ದೃಢೀಕರಣಕ್ಕಾಗಿ ಶಾಲಾ ಅಂಕಪಟ್ಟಿ ಹಾಗೂ ಜನನ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಆಯೋಗವು ನೋಂದಣಿ ಇಲಾಖೆಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿದೆ.

ವಿವಾಹ ನೋಂದಣಿಗೆ 'ಆಧಾರ್' ಒಂದೇ ವಯಸ್ಸಿನ ಪುರಾವೆಯಲ್ಲ ಎಂದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ!
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jul 27, 2026 | 7:24 AM

Share

ಮುಖ್ಯಾಂಶಗಳು

  • ಬಾಲ್ಯವಿವಾಹ ತಡೆಗೆ ಮದುವೆ ನೋಂದಣಿಗೆ ಸರಿಯಾದ ವಯಸ್ಸಿನ ದೃಢೀಕರಣ ಕಡ್ಡಾಯ.
  • ಆಧಾರ್ ಕಾರ್ಡ್ ಒಂದನ್ನೇ ವಯಸ್ಸಿನ ಅಂತಿಮ ಪುರಾವೆಯಾಗಿ ಸ್ವೀಕರಿಸದಂತೆ ಆಯೋಗ ಸೂಚನೆ.
  • ಶಾಲಾ ದಾಖಲೆ ಮತ್ತು ಜನನ ಪ್ರಮಾಣಪತ್ರಗಳನ್ನು ಪರಿಶೀಲಿಸಲು ಸರ್ಕಾರಕ್ಕೆ ಮನವಿ.

ಬೆಂಗಳೂರು, ಜುಲೈ 27: ಬಾಲ್ಯ ವಿವಾಹಗಳನ್ನು (Child Marriage) ಪರಿಣಾಮಕಾರಿಯಾಗಿ ತಡೆಯಲು ವಿವಾಹ ನೋಂದಣಿ ಸಮಯದಲ್ಲಿ ವಯಸ್ಸಿನ ಸರಿಯಾದ ಪರಿಶೀಲನೆ ನಡೆಸಬೇಕು ಹಾಗೂ ಆಧಾರ್ ಕಾರ್ಡ್ ಒಂದನ್ನೇ ವಯಸ್ಸಿನ ಅಂತಿಮ ಪುರಾವೆಯಾಗಿ ಪರಿಗಣಿಸಬಾರದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಸರ್ಕಾರಕ್ಕೆ ಮನವಿ ಮಾಡಿದೆ. ಬಾಲ್ಯ ವಿವಾಹ ನಿಷೇಧ ನಿಯಮಗಳು 2014 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿರುವ ಆಯೋಗ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತರಿಗೆ ಈ ಕುರಿತು ಅಧಿಕೃತ ಪತ್ರ ಬರೆದಿದೆ.

ಶಾಲಾ ದಾಖಲೆ, ಜನನ ಪ್ರಮಾಣಪತ್ರ ಕಡ್ಡಾಯಗೊಳಿಸಲು ಮನವಿ

ವಿವಾಹ ನೋಂದಣಿ ವೇಳೆ ಕೇವಲ ಆಧಾರ್ ಕಾರ್ಡ್ ಅನ್ನು ಮಾತ್ರ ವಯಸ್ಸಿನ ಪುರಾವೆಯಾಗಿ ಸ್ವೀಕರಿಸುವುದರಿಂದ ಅಪ್ರಾಪ್ತರ ವಿವಾಹಗಳು ನೋಂದಣಿಯಾಗುವ ಅಪಾಯ ಹೆಚ್ಚಿರುತ್ತದೆ ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ. ಆದ್ದರಿಂದ ಆಧಾರ್‌ಗೆ ಬದಲಾಗಿ ಅಥವಾ ಅದರೊಂದಿಗೆ ಜನನ ಪ್ರಮಾಣಪತ್ರ, ಶಾಲಾ ದಾಖಲೆಗಳು / ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯ್ನೂ ಸಹ ಸ್ವೀಕರಿಸಬೇಕು. ಅಗತ್ಯಬಿದ್ದಲ್ಲಿ ವೈದ್ಯಕೀಯ ಪ್ರಮಾಣಪತ್ರಗಳನ್ನು ವಯಸ್ಸಿನ ದೃಢೀಕರಣಕ್ಕೆ ಮೂಲ ದಾಖಲೆಗಳಾಗಿ ಸ್ವೀಕರಿಸುವಂತೆ ನೋಂದಣಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.

ಆಧಾರ್ ಗುರುತಿನ ಚೀಟಿ ಮಾತ್ರ, ವಯಸ್ಸಿನ ಅಂತಿಮ ದಾಖಲೆಯಲ್ಲ!

ಆಯೋಗದ ಪರವಾಗಿ ಮನವಿ ಸಲ್ಲಿಸಿದ ಮಾಜಿ ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ಮಾತನಾಡಿ, ಆಧಾರ್ ಕಾರ್ಡ್ ಮೂಲತಃ ವ್ಯಕ್ತಿಯ ಗುರುತಿನ ದಾಖಲೆಯಾಗಿದೆಯೇ ಹೊರತು, ವಯಸ್ಸಿನ ಪರಿಪೂರ್ಣ ಪುರಾವೆಯಲ್ಲ. ಆಧಾರ್‌ನಲ್ಲಿರುವ ಜನನ ದಿನಾಂಕವು ಸ್ವಯಂ ಘೋಷಣೆ ಅಥವಾ ಸಾಮಾನ್ಯ ದಾಖಲೆಗಳ ಮೇಲೆ ಆಧಾರಿತವಾಗಿರಬಹುದು. ಹೀಗಾಗಿ ಮದುವೆ ನೋಂದಣಿ ಅಧಿಕಾರಿಗಳು ಆಧಾರ್ ಮೇಲೆ ಮಾತ್ರ ಅವಲಂಬಿತರಾಗಬಾರದು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ ಧಾರವಾಡ: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ!

ಬಾಲ್ಯವಿವಾಹ ತಡೆಯುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ನೋಂದಣಿ ಸಿಬ್ಬಂದಿಗೆ ಈ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಆಯೋಗ ಆಗ್ರಹಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ