AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ ಎಚ್ಚರ: ನಿದ್ದೆ, ಬೆಳಿಗ್ಗೆ ತಿಂಡಿ ಬಿಟ್ರೆ ಅಪಾಯ ಫಿಕ್ಸ್​​!; ಬೆಚ್ಚಿ ಬೀಳಿಸುತ್ತೆ ಇತ್ತೀಚಿನ ಮಾಹಿತಿ

ಉದ್ಯೋಗಸ್ಥರು ಸಮಯದ ಕೊರತೆಯಿಂದ ನಿದ್ದೆ ಮತ್ತು ಬೆಳಗ್ಗಿನ ಉಪಹಾರವನ್ನು ತ್ಯಜಿಸುತ್ತಿದ್ದಾರೆ. ಇದು ಯುವಜನರಲ್ಲಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಿಗೆ, ಆಸ್ಪತ್ರೆ ದಾಖಲಾತಿಗಳಿಗೆ ಕಾರಣವಾಗುತ್ತಿದೆ.  ಖಾಲಿ ಹೊಟ್ಟೆಯಲ್ಲಿ ಪ್ರಯಾಣಿಸುವುದರಿಂದ ಅಸ್ವಸ್ಥರಾಗುವ ಪ್ರಕರಣಗಳು ಹೆಚ್ಚಾಗಿವೆ. ಅಷ್ಟಕ್ಕೂ ಈ ರೀತಿ ಆಗಲು ಕಾರಣ ಏನು? ಈ ಸಮಸ್ಯೆ ಆಗದಂತೆ ಯಾವ ರೀತಿಯ ಮುಂಜಾಗೃತೆ ವಹಿಸಬೇಕು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿಗರೇ ಎಚ್ಚರ ಎಚ್ಚರ: ನಿದ್ದೆ, ಬೆಳಿಗ್ಗೆ ತಿಂಡಿ ಬಿಟ್ರೆ ಅಪಾಯ ಫಿಕ್ಸ್​​!; ಬೆಚ್ಚಿ ಬೀಳಿಸುತ್ತೆ ಇತ್ತೀಚಿನ ಮಾಹಿತಿ
ಸಾಂದರ್ಭಿಕ ಚಿತ್ರ
Vinay Kashappanavar
| Updated By: ಪ್ರಸನ್ನ ಹೆಗಡೆ|

Updated on:Dec 03, 2025 | 6:30 PM

Share

ಬೆಂಗಳೂರು, ಡಿಸೆಂಬರ್​​ 03: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ ನೆಲೆಸಿರುವ ಬಹುತೇಕರು ಉದ್ಯೋಗಸ್ಥರು. ಹೀಗಾಗಿ ಇಲ್ಲಿರುವ ಅನೇಕರಿಗೆ ಕೆಲಸ ಹೊರತುಪಡಿಸಿ ಯಾವುದಕ್ಕೂ ಟೈಮ್​​ ಸಿಗಲ್ಲ. ಆಫೀಸ್​​ ಟೈಂ ಹೊರತಾಗಿ ಟ್ರಾಫಿಕ್​​ ಸಮಸ್ಯೆಯ ಕಾರಣಕ್ಕೆ ಅಧಿಕ ಸಮಯವನ್ನು ಮಾರ್ಗದಲ್ಲೇ ಕಳೆಯಬೇಕಾದ ಸ್ಥಿತಿ ಹಲವರದ್ದು. ಹೀಗಾಗಿಯೇ ಕಡಿಮೆ ನಿದ್ದೆ, ಬೆಳಗ್ಗಿನ ಉಪಹಾರವನ್ನು ಸೇವಿಸದೇ ಇರೋದು ಅನೇಕರ ಜೀವನಶೈಲಿಯಾಗಿ ಹೋಗಿದೆ. ಆದರೆ ಇತ್ತೀಚಿನ ಅಂಕಿ ಅಂಶವೊಂದು ಇಂಥವರಿಗೆ ಎಚ್ಚರಿಕೆಯ ಗಂಟೆ ಎಂಬಂತಿದೆ.

ಕಡಿಮೆ ನಿದ್ದೆಯ ಜೊತೆಗೆ ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳತ್ತ ಮುಖಮಾಡುವವರ ಪೈಕಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಅದರಲ್ಲೂ ಯುವ ಜನತೆಯೇ ಇವರಲ್ಲಿ ಹೆಚ್ಚು ಎನ್ನುವುದು ಆಘಾತಕಾರಿ ವಿಷಯ. ಖಾಲಿ ಹೊಟ್ಟೆಯಲ್ಲಿ ಪ್ರಯಾಣಿಸಿ ತಲೆ ತಿರುಗಿ ಬೀಳುವವರ ಸಂಖ್ಯೆ ನಮ್ಮ ಮೆಟ್ರೋದಲ್ಲೇ 300ರ ಗಡಿ ದಾಟಿದೆ. ಇದು ಕಳೆದ ಮೂರು ತಿಂಗಳ ಅವಧಿಯ ಅಂಕಿ-ಅಂಶವಾಗಿದ್ದು, ಬಸ್​​ ಸೇರಿ ಇತರ ವಾಹನಗಳಲ್ಲಿ ಸಂಚರಿಸು ವೇಳೆ ನಡೆದ ಈ ರೀತಿಯ ಘಟನೆಗಳು ಅದೆಷ್ಟೋ.

ಇದನ್ನೂ ಓದಿ: ಈ ಪಾನೀಯವನ್ನು ಕುಡಿಯುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆ 5 ನಿಮಿಷಗಳಲ್ಲಿ ಕಡಿಮೆ

ತಲೆಸುತ್ತು ಸಮಸ್ಯೆ ತಡೆಯುವುದು ಹೇಗೆ?

  • ಕಡಿಮೆ ನಿದ್ರೆ ಮಾಡೋದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರಯಾಣ ಬೇಡ
  • ಪ್ರಯಾಣಕ್ಕೂ ಮುನ್ನ ಕಡ್ಡಾಯವಾಗಿ ಬ್ರೇಕ್​​ಫಾಸ್ಟ್​​ ಸೇವಿಸಿ
  • ಮನೆಯಿಂದ ಹೊರಡುವ ವೇಳೆಗ ಕನಿಷ್ಠ ಬಾಳೆಹಣ್ಣು, ಡ್ರೈಫೂಟ್ಸ್​​, ಕಾಳುಗಳನ್ನು ಸೇವಿಸಿ
  • ಉಸಿರುಗಟ್ಟಿಸುವಂತಹ ಉಡುಪಗಳನ್ನ ಸಾಧ್ಯವಾದಷ್ಟು ಧರಿಸಬೇಡಿ

ಇನ್ನು ನಿದ್ದೆಗೆಟ್ಟು ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳಿಗೆ ತೆರಳುವ ಮಂದಿಗೆ ವೈದ್ಯರೂ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಿರುವ ನಿದ್ದೆ ಮತ್ತು ಬ್ರೇಕ್​​ಫಾಸ್ಟ್​​ ಸ್ಕಿಪ್​​ ಮಾಡುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಇದರ ಜೊತೆಗೆ ನಿಂತುಕೊಂಡು ಪ್ರಯಾಣ ಮಾಡಿದರೆ ಆಯಾಸಗೊಂಡು, ಅಸ್ವಸ್ಥರಾಗುವ ಸಾಧ್ಯತೆ ಹೆಚ್ಚಿರುತ್ತೆ. ಹೀಗಾಗಿ ಕನಿಷ್ಠ 6 ಗಂಟೆಯಾದರೂ ನಿದ್ದೆಯ ಜೊತೆಗೆ ಸರಿಯಾದ ಸಮಯಕ್ಕೆ ಬೆಳಗ್ಗಿನ ಉಪಹಾರ ಸೇವಿಸುವಂತೆ ಡಾ. ದೇವಿಂದ್ರಪ್ಪ ಸಲಹೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:19 pm, Wed, 3 December 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ