AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಂದರೆ ಕೊಡಬೇಡಿ, ಮಕ್ಕಳಿಗೆ ಟಾರ್ಚರ್ ಕೊಡುವ ಕಂಪ್ಲೇಂಟ್ಸ್ ಬಂದ್ರೆ ಬಿಇಓ, ಡಿಡಿಪಿಐ ಮೂಲಕ ತನಿಖೆ ಮಾಡಿಸ್ತೀವಿ – ಶಿಕ್ಷಣ ಸಚಿವ ನಾಗೇಶ್

ಈ ಸಂಬಂಧ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಯಾವುದೇ ಶಾಲೆಗಳಲ್ಲಿ ಇಂತಹ ಘಟನೆ ನಡೆದರೆ ಅಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ತೇವೆ. ಇಲಾಖೆ ಬಿಇಒ, ಡಿಡಿಪಿಐ ಮೂಲಕ ತನಿಖೆ ಮಾಡಿಸುತ್ತೇವೆ. ತನಿಖೆಯಲ್ಲಿ ಸಾಬೀತಾದರೆ ಇಲಾಖೆಯಿಂದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ತೊಂದರೆ ಕೊಡಬೇಡಿ, ಮಕ್ಕಳಿಗೆ ಟಾರ್ಚರ್ ಕೊಡುವ ಕಂಪ್ಲೇಂಟ್ಸ್ ಬಂದ್ರೆ ಬಿಇಓ, ಡಿಡಿಪಿಐ ಮೂಲಕ ತನಿಖೆ ಮಾಡಿಸ್ತೀವಿ - ಶಿಕ್ಷಣ ಸಚಿವ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್
TV9 Web
| Edited By: |

Updated on:May 11, 2022 | 5:23 PM

Share

ಬೆಂಗಳೂರು: ಖಾಸಗಿ ಶಾಲೆ (Private School) ಮಕ್ಕಳಿಗೆ ಮಾನಸಿಕವಾಗಿ ಚಿತ್ರ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು (Parents) ಇಂದು (ಮೇ 11) ಲಗ್ಗೆರೆಯ ನಾರಾಯಣ ಇ-ಟೆಕ್ನೊ ಶಾಲೆ ವಿರುದ್ಧ ಧರಣಿ ನಡೆಸಿದ್ದಾರೆ. ಪ್ರತಿಭಟಿಸಿದ್ದ ಪೋಷಕರ ಮಕ್ಕಳನ್ನ ಶಾಲೆ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿರುವ ಪೋಷಕರು, ಬೇರೆ ಮಕ್ಕಳಿಗೆ ಇವರ ಜೊತೆ ಸೇರದಂತೆ ಸೂಚನೆ ನೀಡುತ್ತಾರೆ. ಮಕ್ಕಳಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಇಡೀ ದಿನ ಶಾಲೆಯಲ್ಲಿ ನಿಲ್ಲಿಸಿ ಮಕ್ಕಳಿಗೆ ಶಿಕ್ಷೆ ನೀಡುತ್ತಾರೆ, ಬೈಯ್ಯುತ್ತಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಖಾಸಗಿ ಶಾಲೆ ವಿರುದ್ಧ ತಿರುಗಿ ಬಿದ್ದಿದ್ದ ಪೋಷಕರಿಗೆ ಶಾಕ್ ಪ್ರತಿಭಟಿಸಿದ್ದ ಪೋಷಕರ ಮಕ್ಕಳನ್ನ ನಾರಾಯಣ ಇ-ಟೆಕ್ನೊ ಶಾಲೆ ಟಾರ್ಗೆಟ್ ಮಾಡ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಶುಲ್ಕದ ವಿಚಾರವಾಗಿ ಖಾಸಗಿ ಶಾಲೆ, ಪೋಷಕರ ನಡುವೆ ಫೈಟ್ ನಡೆದಿದ್ದು ಶಾಲೆಯಲ್ಲಿ ಮಕ್ಕಳಿಗೆ ಮಾನಸಿಕ ಹಿಂಸೆ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಇತರೆ ಮಕ್ಕಳು ಅವರ ಜೊತೆ ಸೇರದಂತೆ ಸಹಪಾಠಿಗಳಿಗೆ ಶಾಲೆಯವರು ಸೂಚನೆ ನೀಡಿದ್ದಾರೆ. ಶಾಲೆಯಲ್ಲಿ ಮಕ್ಕಳನ್ನು ಇಡೀ ದಿನ ನಿಲ್ಲಿಸಿ ಶಿಕ್ಷೆನೀಡಿದ್ದಾರೆ. ಹೀಯಾಳಿಸುವುದು, ಹೋಂ ವರ್ಕ್ ವಿಚಾರದಲ್ಲಿ ತಗಾದೆ ಮಾಡೋದು ಸೇರಿದಂತೆ ವಿವಿಧ ರೀತಿ ಮಕ್ಕಳಿಗೆ ಕಿರುಕುಳ ನೀಡ್ತಿದ್ದಾರೆಂದು ಪೋಷಕರು ಕಿಡಿ ಕಾರಿದ್ದಾರೆ. ಈ ಸಂಬಂಧ ದೂರು ನೀಡಲು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ಪೋಷಕರು ಬಂದಿದ್ದು ಮಕ್ಕಳನ್ನ ಸಾಕ್ಷಿಯಾಗಿಟ್ಟುಕೊಂಡು ಶಾಲೆಯ ವಿರುದ್ಧ ದೂರು ನೀಡಿದ್ದಾರೆ.

ಇನ್ನು ಈ ಸಂಬಂಧ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಯಾವುದೇ ಶಾಲೆಗಳಲ್ಲಿ ಇಂತಹ ಘಟನೆ ನಡೆದರೆ ಅಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ತೇವೆ. ಇಲಾಖೆ ಬಿಇಒ, ಡಿಡಿಪಿಐ ಮೂಲಕ ತನಿಖೆ ಮಾಡಿಸುತ್ತೇವೆ. ತನಿಖೆಯಲ್ಲಿ ಸಾಬೀತಾದರೆ ಇಲಾಖೆಯಿಂದ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಮಕ್ಕಳಿಗೆ ತೊಂದರೆ ಕೊಡಬಾರದು. ಮಕ್ಕಳ ಶಿಕ್ಷಣದಲ್ಲಿ ಏರು‌ಪೇರು ಮಾಡುವ ಸಂಸ್ಥೆಗೆ ಯೋಗ್ಯವಲ್ಲ. ಮಕ್ಕಳ ಶುಲ್ಕದಿಂದಲೇ ಇನ್ಸಿಟ್ಯೂಷನ್ ಸ್ಥಾಪನೆ ಮಾಡಿರುತ್ತಾರೆ. ಯಾವುದೇ ಇನ್ಸಿಟ್ಯೂಷನ್ಗಳಲ್ಲಿ ಈ ರೀತಿಯಾಗಿ ಮಾಡಬಾರದು ಎಂದರು

ಬೆಂಗಳೂರಿನ ಇತರೆ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:23 pm, Wed, 11 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ