AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮನೆಗೆ ಬರಲಿದೆ ಔಷಧ ಪೆಟ್ಟಿಗೆ; 30 ವರ್ಷ ಮೇಲ್ಪಟ್ಟವರಿಗೆ ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ

ಕರ್ನಾಟಕದಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದ ಜನರಿಗೆ ಶೀಘ್ರದಲ್ಲಿಯೇ ಮನೆ ಮನೆಗೆ ತೆರಳಿ ಸಾಂಕ್ರಮಿಕವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆಯನ್ನು ಮಾಡಲಾಗುತ್ತದೆ. ರಾಜ್ಯ ಸರ್ಕಾರವು ‘ಗೃಹ ಆರೋಗ್ಯ’ (Gruha Arogya Scheme) ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ

ಮನೆ ಮನೆಗೆ ಬರಲಿದೆ ಔಷಧ ಪೆಟ್ಟಿಗೆ; 30 ವರ್ಷ ಮೇಲ್ಪಟ್ಟವರಿಗೆ ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ
ಗೃಹ ಆರೋಗ್ಯ
ಆಯೇಷಾ ಬಾನು
|

Updated on: Nov 12, 2023 | 7:09 AM

Share

ಬೆಂಗಳೂರು, ನ.12: ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನರ ವಿಶ್ವಾಸ ಗಳಿಸುತ್ತಿರುವ ಕಾಂಗ್ರೆಸ್ (Congress) ಸರ್ಕಾರ ಮತ್ತೊಂದು ಯೋಜನೆ ಜಾರಿ ಮಾಡಲು ಮುಂದಾಗಿದೆ. ಕರ್ನಾಟಕದಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದ ಜನರಿಗೆ ಶೀಘ್ರದಲ್ಲಿಯೇ ಮನೆ ಮನೆಗೆ ತೆರಳಿ ಸಾಂಕ್ರಮಿಕವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆಯನ್ನು ಮಾಡಲಾಗುತ್ತದೆ. ರಾಜ್ಯ ಸರ್ಕಾರವು ‘ಗೃಹ ಆರೋಗ್ಯ’ (Gruha Arogya Scheme) ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಸಿಗಬೇಕಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ರಾಮನಗರ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ ವರ್ಷದ ಜನವರಿ ವೇಳೆಗೆ ಮೊದಲ ಹಂತದ ತಪಾಸಣೆ ಮತ್ತು ಔಷಧ ಖರೀದಿ ಆರಂಭಿಸುವ ನಿರೀಕ್ಷೆಯಿದೆ.

ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿಂದ ಧನಸಹಾಯ ಪಡೆದ ಈ ಯೋಜನೆಯ ಅಡಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ (CHO), ಆಶಾ ಕಾರ್ಯಕರ್ತರು ಮತ್ತು ಪ್ರಾಥಮಿಕ ಆರೋಗ್ಯ ಅಧಿಕಾರಿಗಳನ್ನು ಒಳಗೊಂಡಂತೆ ಎರಡರಿಂದ ನಾಲ್ಕು ಜನರ ತಂಡಗಳು ಪ್ರತಿ ಮನೆ-ಮನೆಗೆ ತೆರಳಿ ತಪಾಸಣೆ ನಡೆಸಿ ಮತ್ತು ಜಾಗೃತಿ ಮೂಡಿಸಲಿದೆ. ಈ ತಂಡ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಗರ್ಭಕಂಠ, ಸ್ತನ ಮತ್ತು ಬಾಯಿಯ ಕ್ಯಾನ್ಸರ್‌ಗಳ ಬಗ್ಗೆ ಜಾಗೃತಿ ಮೂಡಿಸಲಿದೆ.

ಯೋಜನೆಗೆ ಅನುಮೋದನೆ ದೊರೆತ ನಂತರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯದ 69.15 ಕೋಟಿ ರೂಪಾಯಿ ಮೌಲ್ಯದ ಅನುದಾನ ಮತ್ತು 15 ನೇ ಹಣಕಾಸು ಆಯೋಗದ 13.27 ಕೋಟಿ ರೂಪಾಯಿ ಮೌಲ್ಯದ ಅನುದಾನದೊಂದಿಗೆ ಅಗತ್ಯ ಔಷಧ ಮತ್ತು ಪರೀಕ್ಷಾ ಸಾಧನಗಳನ್ನು ಖರೀದಿಸಲಿದೆ.

ಸರಿಸುಮಾರು 16 ವಾರಗಳಲ್ಲಿ, ಪ್ರತಿ ಆರೋಗ್ಯ ಮತ್ತು ಕಲ್ಯಾಣ ಕೇಂದ್ರದಿಂದ (HWC) ಈ ತಂಡಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ತಲಾ 20 ಮನೆಗಳಿಗೆ ಭೇಟಿ ನೀಡುತ್ತವೆ, ಈ ಅವಧಿಯಲ್ಲಿ ಪ್ರತಿ HWC ಅಡಿಯಲ್ಲಿ ಸುಮಾರು 1,000 ಮನೆಗಳನ್ನು ಒಳಗೊಂಡಿದೆ.

ಉದಾಹರಣೆಗೆ, ಅಧಿಕಾರಿಗಳು ನಿವಾಸಿಗಳಲ್ಲಿ ಕ್ಯಾನ್ಸರ್ ಸಾಧ್ಯತೆಯನ್ನು ಪತ್ತೆ ಮಾಡಿದರೆ, ದೃಢೀಕರಣ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರ ಅಥವಾ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಅಂತೆಯೇ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಶಂಕಿತ ಪ್ರಕರಣಗಳನ್ನು ಹೊಂದಿರುವ ಜನರು ವೈದ್ಯರಿಂದ ಮಾಹಿತಿಯನ್ನು ಪಡೆಯುತ್ತಾರೆ ಮತ್ತು ರೋಗ ದೃಢಪಟ್ಟರೆ, ಮೂರು ತಿಂಗಳವರೆಗೆ ಔಷಧಿಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: ಬಿಡದಿ ಮತ್ತು ತುಮಕೂರು ಎರಡು ಕಡೆನೂ ಮೆಟ್ರೋ ಆಗಬೇಕು: ಜಿ.ಪರಮೇಶ್ವರ, ಗೃಹ ಸಚಿವ

CHO ಗಳು NCD (ಸಾಂಕ್ರಾಮಿಕವಲ್ಲದ ರೋಗಗಳು) ಪೋರ್ಟಲ್‌ನಲ್ಲಿ ಯಾವುದೇ ಸಕಾರಾತ್ಮಕ ಪ್ರಕರಣಗಳನ್ನು ತಮ್ಮ ABHA ID ಗಳೊಂದಿಗೆ ನವೀಕರಿಸುತ್ತಾರೆ. ಮತ್ತು ಈ ರೋಗಗಳಿರುವ ಜನರ ಡೇಟಾಬೇಸ್ ಅನ್ನು ರಚಿಸಲು ಮತ್ತು ಅವರಿಗೆ ಅಗತ್ಯ ಔಷಧಿಗಳನ್ನು ನೀಡಲು ಸಹಾಯ ಮಾಡುತ್ತಾರೆ. ಅವರು ಮನೆಗಳ ಹೊರಗೆ ಬಣ್ಣ-ಕೋಡೆಡ್ ಗೃಹ ಆರೋಗ್ಯ ಸ್ಟಿಕ್ಕರ್‌ಗಳನ್ನು ಸಹ ಹಾಕುತ್ತಾರೆ, ಇದು ನಿವಾಸಿಗಳ ಆರೋಗ್ಯ ಸ್ಥಿತಿಯನ್ನು ಸಹ ಸೂಚಿಸುತ್ತದೆ.

ಎಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹಂತ ಹಂತವಾಗಿ ತರಬೇತಿ ನೀಡಲಾಗುವುದು, ಡಿಸೆಂಬರ್‌ನಲ್ಲಿ ರಾಜ್ಯ ಮಟ್ಟದ ತರಬೇತಿಯನ್ನು ಪ್ರಾರಂಭಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಮಟ್ಟದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಸಮೀಕ್ಷಾ ಅಧಿಕಾರಿಗಳು, ಕಾರ್ಯಕ್ರಮ ಸಂಯೋಜಕರು ಮತ್ತು ಇತರ ಅಧಿಕಾರಿಗಳಿಗೆ ಎನ್‌ಎಚ್‌ಎಂ ಪ್ರಚಾರ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ತರಬೇತಿ ನೀಡಲಾಗುತ್ತದೆ. ನಂತರ ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು, ಸಿಎಚ್‌ಒಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗೆ ತರಬೇತಿ ನೀಡಲಾಗುವುದು.

ಮೊದಲ ಹಂತದಲ್ಲಿ ನಾಲ್ಕು ವಿಭಾಗಗಳಲ್ಲಿ ಎಂಟು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗುತ್ತದೆ. ಬೆಂಗಳೂರು ವಿಭಾಗದಲ್ಲಿ ರಾಮನಗರ ಮತ್ತು ತುಮಕೂರು ಬೆಳಗಾವಿ ಮತ್ತು ಗದಗ ಇರಲಿದೆ. ಬೆಳಗಾವಿ ವಿಭಾಗದಲ್ಲಿ ಬಳ್ಳಾರಿ ಮತ್ತು ಯಾದಗಿರಿ, ಕಲಬುರಗಿ ವಿಭಾಗದಲ್ಲಿ ದಕ್ಷಿಣ ಕನ್ನಡ ಮತ್ತು ಮೈಸೂರು ವಿಭಾಗದಲ್ಲಿ ಮೈಸೂರು ಇದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ