AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡಬಲ್ ಮರ್ಡರ್; ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಎರಡು ಕೊಲೆಗಳು ನಡೆದಿವೆ. ಬೆಂಗಳೂರಿನ ಸುಂಕದಕಟ್ಟೆ ಬಳಿ ಪ್ರಿಯಕರನೇ ಮಹಿಳೆಯ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ. ಮತ್ತೊಂದೆಡೆ ಬಾನಸವಾಡಿಯಲ್ಲಿ ಮಾಜಿ ರೌಡಿ ಶೀಟರ್​ನನ್ನು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಡಬಲ್ ಮರ್ಡರ್; ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ
ಸುಂಕದಕಟ್ಟೆ ಬಳಿ ಮಹಿಳೆ ಕೊಲೆ
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on:May 08, 2024 | 7:21 AM

Share

ಬೆಂಗಳೂರು, ಮೇ.08: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಿನ್ನೆ ಎರಡು ಕೊಲೆಗೆ (Murder) ಸಾಕ್ಷಿಯಾಗಿದೆ. ಒಂದು ಕಡೆ ಮಾಜಿ ರೌಡಿಶೀಟರ್ ನನ್ನ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ್ರೆ, ಮತ್ತೊಂದೆಡೆ ಗಂಡ ಬಿಟ್ಟು ಬಾಯ್ ಫ್ರೆಂಡ್ ಜೊತೆಗೆ ಬಣ್ಣದ ನಗರಿಗೆ ಬಂದು ಬದುಕು ಕಟ್ಟಿಕೊಂಡ ಮಹಿಳೆ ಪ್ರಿಯಕರನ ಕೈನಿಂದಲೇ ಹೆಣವಾಗಿ ಹೋಗಿದ್ದಾಳೆ.

ಪ್ರಿಯರನಿಂದಲೇ ಹೆಣವಾದಳು ಪ್ರೇಯಸಿ

ವಿದ್ಯಾ ಎಂಬ 30 ವರ್ಷದ ಮಹಿಳೆ ರಾಮನಗರ ಜಿಲ್ಲೆಯ ಮಾಗಡಿ ಸಮೀಪದ ಹೊಸದೊಡ್ಡಿ ನಿವಾಸಿ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ 4 ವರ್ಷದ ಹಿಂದೆ ಗಂಡ ಬಿಟ್ಟು ತನ್ನದೇ ಊರಿನ ಶಾಂತಕುಮಾರ್ ಎಂಬುವವರ ಜೊತೆಗೆ ಪ್ರೀತಿ ಹುಟ್ಟಿ ಬೆಂಗಳೂರಿಗೆ ಬಂದು ಕಾಮಾಕ್ಷಿಪಾಳ್ಯದಲ್ಲಿ ನೆಲೆಸಿದ್ದಳು. ಕೆಲ ದಿನಗಳಿಂದ ಇಬ್ಬರ ಮಧ್ಯೆ ಮನಸ್ತಾಪವೂ ಉಂಟಾಗಿತ್ತು. ಹೀಗಾಗಿ ವಿದ್ಯಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಾ ಪ್ರತ್ಯೇಕವಾಗಿ ಮನೆ ಮಾಡಿಕೊಂಡು ಸುಂಕದಕಟ್ಟೆಯ ಸೊಲ್ಲಾಪುರಂ ಲೇಔಟ್​ನಲ್ಲಿ ವಾಸವಿದ್ಳು. ಇದು ಅದ್ಯಾಕೊ ಶಾಂತಕುಮಾರ್ ಗೆ ಈಕೆ ಮತ್ತೊಬ್ಬನ ಜೊತೆಗೆ ಸಲುಗೆ ಬೆಳೆಸಿಕೊಂಡಿದ್ದಾಳೆ ಅನ್ನೋ ಅನುಮಾನ ಮೂಡಿತ್ತು. ಹಾಗಾಗಿ ವಿದ್ಯಾಳನ್ನು ಭೇಟಿಯಾಗಿ ರಾತ್ರಿ 9.30 ಕ್ಕೆ ವಿದ್ಯಾ ಹಾಗೂ ಶಾಂತಕುಮಾರ್ ಇಬ್ಬರೂ ಬಾಡಿಗೆ ಮನೆಗೆ ಬಂದಿದ್ದು ಶಾಂತಕುಮಾರ್ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿ ಆಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರೊ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ

ಮಾಜಿ ರೌಡಿಶೀಟರ್ ಅಟ್ಟಾಡಿಸಿ ಬರ್ಬರ ಹತ್ಯೆ

ನಿನ್ನೆ ಸಂಜೆ 7.30 ರ ಸಮಯ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಜಿ ರೌಡಿ ಶೀಟರ್ ಕಾರ್ತಿಕೇಯನ್ ನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಾಂಗು ಮಚ್ಚುಗಳಿಂದ ಕೊಚ್ಚಿ ಕೊಂದಿದ್ದಾರೆ. ಅಷ್ಟಕ್ಕೂ ಈ ಕಾರ್ತಿಕೇಯನ್ ಹಲವು ವರ್ಷಗಳಿಂದ ರೌಡಿಶೀಟರ್ ಆಗಿದ್ದವನು. ಇತ್ತೀಚೆಗಷ್ಟೇ ರೌಡಿಶೀಟರ್ ಕ್ಲೋಸ್ ಮಾಡಿಸಿಕೊಂಡಿದ್ದ. ವಿವಾದಿತ ಜಾಗಗಳಿಗೆ ಬೇಲಿ ಹಾಕುವ ಕೆಲಸ ಮಾಡುತ್ತಿದ್ದ. ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿಕೊಂಡಿದ್ದ. ಇದೇ ವೇಳೆ ಮೈಕಲ್ ಮಂಜ ಹಾಗೂ ಸಹಚರರ ವಿರೋಧ ಕಟ್ಟಿಕೊಂಡಿದ್ದ. ಕೆಲವರಿಗೆ ಗನ್ ತೋರಿಸಿ ಬೆದರಿಕೆ ಹಾಕುತ್ತಿದ್ದ ಆರೋಪವೂ ಇತ್ತು. ಫ್ರೆಂಡ್ಸ್ ಗಳ ಬಳಿ ಲೈಸೆನ್ಸ್ ಇರೋ ಗನ್ ಪಡೆದುಕೊಂಡು ಬೆದರಿಕೆ ಹಾಕುತ್ತಿದ್ದ. ಇದರಿಂದ ರೋಸಿಹೋಗಿದ್ದ ಮೈಕಲ್ ಮಂಜು ಅಂಡ್ ಗ್ಯಾಂಗ್ ಪ್ಲಾನ್ ಮಾಡಿ ಅಟ್ಟಾಡಿಸಿ ಚಾಕು ಹಾಗೂ ಲಾಂಗ್ ನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ತನಿಖೆ ಮುಂದುವರೆದಿದೆ.‌

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:01 am, Wed, 8 May 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ