Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪತಿಯಿಂದ ಪತ್ನಿ, ಆತ್ತೆಯ ಕೊಚ್ಚಿ ಕೊಲೆ – ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸಿನಿಮಾದಲ್ಲಿ ನಟಿಸುವ ಆಸೆ, ವಂಚನೆ

ಳೆನೀರು ವ್ಯಾಪಾರಿ ರವಿ ಎಂಬಾತ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಏಳೆನೀರು ಕೊಚ್ಚುವ ಮಚ್ಚಿನಿಂದಲೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಗೋವಿಂದರಾಜ ನಗರ ಪೊಲೀಸರು ಅರೋಪಿ ರವಿಯನ್ನು ವಶಕ್ಕೆ ಪಡೆದಿದ್ದಾರೆ.

Crime News: ಪತಿಯಿಂದ ಪತ್ನಿ, ಆತ್ತೆಯ ಕೊಚ್ಚಿ ಕೊಲೆ - ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸಿನಿಮಾದಲ್ಲಿ ನಟಿಸುವ ಆಸೆ, ವಂಚನೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 22, 2022 | 12:43 PM

ಬೆಂಗಳೂರು: ಬೆಂಗಳೂರಿನ ಗೋವಿಂದರಾಜನಗರದಲ್ಲಿ ಪತಿಯಿಂದಲೇ ಪತ್ನಿ ಮತ್ತು ಆತ್ತೆಯ ಬರ್ಬರ ಹತ್ಯೆಗಳಾಗಿವೆ. ಸರೋಜಮ್ಮ ಮತ್ತು ಸಾವಿತ್ರಿ ಹತ್ಯೆಗೀಡಾದವರು. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಾವಿತ್ರಿ ಪತಿ, ಎಳೆನೀರು ವ್ಯಾಪಾರಿ ರವಿ ಎಂಬಾತ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಏಳೆನೀರು ಕೊಚ್ಚುವ ಮಚ್ಚಿನಿಂದಲೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಗೋವಿಂದರಾಜ ನಗರ ಪೊಲೀಸರು ಅರೋಪಿ ರವಿಯನ್ನು ವಶಕ್ಕೆ ಪಡೆದಿದ್ದಾರೆ.

ಅನೈತಿಕ ಸಂಬಂಧಕ್ಕೆ ಬೇಸತ್ತಿದ್ದ ಪತಿ: ಹೆಂಡತಿಯ ಅನೈತಿಕ ಸಂಬಂಧಕ್ಕೆ ಬೇಸತ್ತಿದ್ದ ರವಿಕುಮಾರ್ ಪದೇ ಪದೇ ಹೆಂಡತಿಗೆ ಬದ್ಧಿವಾದ ಹೇಳಿದ್ದ. ಹೆಂಡತಿ ತನ್ನ ಚಾಳಿಯನ್ನ ತಿದ್ದಕೊಳ್ಳದ ಹಿನ್ನೆಲೆ ಮೊದಲು ವಾಸ ಮಾಡಿದ್ದ ಮನೆಯನ್ನು ಖಾಲಿ ಮಾಡಿ ಬೇರೆ ಕಡೆ ಮನೆ ಮಾಡಿದ್ದ. ಬಳಿಕವೂ ಹೆಂಡತಿಯು ತನ್ನ ಹಳೆಯ ಗೆಳಯನ ಸಹವಾಸ ಬಿಟ್ಟಿರಲಿಲ್ಲ. ಇದರಿಂದ ಬೇಸತ್ತು, ಇಂದು ಮಕ್ಕಳನ್ನು ಸ್ವತಃ ತಾನೇ ಸ್ಕೂಲ್ ಗೆ ಬಿಟ್ಟಿದ್ದಾನೆ. ಸ್ಕೂಲ್ ಗೆ ಬಿಟ್ಟು ಬಂದು ಮನೆಗೆ ವಾಪಸಾದಾಗ ಜಗಳ ಪ್ರಾರಂಭವಾಗಿದೆ. ಬಳಿಕ ಎಳೆ ನೀರು ಕೊಚ್ಚುವ ಮಚ್ಚಿನಿಂದಲೇ ಹೆಂಡತಿ ಮತ್ತು ತಾಯಿ ಇಬ್ಬರನ್ನೂ ಕೊಚ್ಚಿಕೊಂದಿದ್ದಾನೆ. ಕೊಲೆ ಮಾಡಿದ ಆರೋಪಿ, ತಾನೇ ತನ್ನ ಸ್ಕೂಟರ್ ಮೂಲಕ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ಹೋಗಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹಾಜರಾಗಿ ಹೆಂಡತಿ ಹತ್ಯೆಯ ವಿಚಾರ ಹೇಳಿದ್ದಾನೆ.

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸಿನಿಮಾದಲ್ಲಿ ನಟಿಸುವ ಆಸೆ, ವಂಚನೆ; ಆರೋಪಿ ಅರೆಸ್ಟ್ ನೆಲಮಂಗಲ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸಿನಿಮಾದಲ್ಲಿ ನಟಿಸಲು ಚಾನ್ಸ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿಯಲ್ಲಿ ಈ ಪ್ರಕರಣ ನಡೆದಿದೆ. ವಂಚಿಸಿದ್ದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಓಂ ಸಾಯಿ ಮಹದೇವ (25) ಎಂಬ ಯುವಕನನ್ನು ಬಂಧಿಸಲಾಗಿದೆ. ಬಾಲಕಿಯಿಂದ 3 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ಅರೋಪಿ ವಂಚಿಸಿರುವುದಾಗಿ ಹೇಳಲಾಗಿದೆ.

ನಟಿಯಾಗುವ ಆಸೆಗಾಗಿ ಮನೆಯಲ್ಲಿದ್ದ ಚಿನ್ನಾಭರಣ, ಹಣ ತೆಗೆದುಕೊಂಡು ಬಾಲಕಿಯು ಆರೋಪಿ ವಂಚಕ ಮಹದೇವನಿಗೆ ಕೊಟ್ಟಿದ್ದಾಳೆ. ಆದರೆ ಕಾಲಾಂತರದಲ್ಲಿ ಹಣವೂ ಇಲ್ಲ, ನಟನೆಯೂ ಇಲ್ಲ ಎಂಬುದು ಸಂತ್ರಸ್ತ ಬಾಲಕಿಯ ಅರಿವಿಗೆ ಬಂದಿದೆ. ವಿಷಯ ತಿಳಿದು ಬಾಲಕಿಯ ಪೋಷಕರು ತಕ್ಷಣ ದಾಬಸ್ ಪೇಟೆ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಸಂತ್ರಸ್ತ ಬಾಲಕಿ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ. ದೂರಿನ ಆಧಾರದ ಮೇಲೆ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಪ ತಟ್ಟುವ ಭೀತಿ: ಬಡವರ ಕಾರು ಕದಿಯುವುದಿಲ್ಲವಂತೆ ಈ ಡಿಫ್ರೆಂಟ್ ಕಳ್ಳ! ಬ್ಯಾಟರಾಯನಪುರ: ಬಡವರ ಕಾರ್ ಎಗರಿಸಿದರೇ ಶಾಪ ತಟ್ಟುತ್ತೇ ಅನ್ನೊ ಮನೋಸ್ಥಿತಿಯಲ್ಲಿದ್ದಾನೆ ಇಲ್ಲೊಬ್ಬ ಡಿಫ್ರೆಂಟ್ ಕಳ್ಳ! ಹಾಗಾಗಿ ಅವನು ಶೂರೂಂ ಮುಂಭಾಗದ ಕಾರ್ ಗಳನ್ನೇ ಎಗರಿಸುತಿದ್ದ. ಆದರೀಗ ಆ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ ಅನ್ನೀ. ಬಂಧಿತ ಆರೋಪಿಯ ಹೆಸರು ಪಿಳಕಲ್ ನಜೀರ್ ಅಂತಾ. ಮೂಲತಃ ಕೇರಳದವ. ಕೆಲ ತಿಂಗಳಿನಿಂದ ಬೆಂಗಳೂರಿನಲ್ಲಿ ವಾಸವಿದ್ದಾನೆ.

ಬ್ಯಾಟರಾಯನಪುರದ ಶೋರೂಂ ಬಳಿ ಕಾರ್ ಎಗರಿಸಿದ್ದ ಕಳ್ಳ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 21 ಲಕ್ಷ ರೂಪಾಯಿ ಮೌಲ್ಯದ ಒಂದು ಕಾರ್, ಎರಡು ಬೈಕ್ ವಶಕ್ಕೆ ಪಡೆದಿದ್ದಾರೆ. ಇದೇ ಮಾದರಿ 15ಕ್ಕೂ ಹೆಚ್ಚು ಕೃತ್ಯಗಳನ್ನು ಎಸಗಿದ್ದಾನೆ ಇದೇ ಆರೋಪಿ.

ಕಾರ್ ಶೋರೂಂಗಳ ಬಳಿ ಎಂಟ್ರಿ ಕೊಡುತಿದ್ದ ಕಳ್ಳ. ಆ ವೇಳೆ ಆವರಣದಲ್ಲಿ ನಿಲ್ಲಿಸಿರೋ ಕಾರ್ ಗಳ ಬಳಿ ತೆರಳುತಿದ್ದ. ಕಾರ್ ನಲ್ಲೇ ಕೀ ಬಿಟ್ಟ ಗಾಡಿಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಯಾರೂ ಇಲ್ಲದ ವೇಳೆ ಮೆಲ್ಲನೇ ಒಳಗೆ ಎಂಟ್ರಿ ಕೊಡ್ತಿದ್ದ. ಬಳಿಕ ಸೈಲೆಂಟ್ ಆಗಿ ಎಸ್ಕೇಪ್ ಆಗುತಿದ್ದ ಕಳ್ಳ. ಕಳ್ಳನ ಕಳ್ಳಾಟ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಸೆರೆಯಾದ ದೃಶ್ಯ ಆಧರಿಸಿ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ.

ನಕಲಿ ಸರ್ಫ್ ಎಕ್ಸೆಲ್ ಹಾಗೂ ಗುಡ್ ನೈಟ್ ಲಿಕ್ವಿಡ್ ! ಬೆಂಗಳೂರು: ನಕಲಿ ಬ್ರ್ಯಾಂಡ್​ ಕಂಪನಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 5 ಲಕ್ಷ ರೂಪಾಯಿ ಮೌಲ್ಯದ ನಕಲಿ ಬ್ರ್ಯಾಂಡ್​ ಉತ್ಪನ್ನಗಳನ್ನು ಸೀಜ್ ಮಾಡಿದ್ದಾರೆ. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಕಲಿ ಸರ್ಫ್ ಎಕ್ಸೆಲ್ ಹಾಗೂ ಗುಡ್ ನೈಟ್ ಲಿಕ್ವಿಡ್ ಗೋಡೊನ್ ಮೇಲೆ ದಾಳಿ ನಡೆಸಿ, ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಬ್ರಾಂಡ್ ಕಂಪನಿಗಳ ಪ್ರಾಡಕ್ಟ್ ಗಳನ್ನ ನಕಲಿ ಮಾಡುತ್ತಿದ್ದರು. ಆರೋಪಿಗಳು ನಕಲಿ ಸರ್ಫ್ ಎಕ್ಸೆಲ್ ತಯಾರು ಮಾಡಲು ಸಣ್ಣ ಫ್ಯಾಕ್ಟರಿಯನ್ನೇ ನಡೆಸುತ್ತಿದ್ದರು.

Published On - 11:28 am, Tue, 22 February 22

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್