AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 17ರಿಂದ 19ರ ವರೆಗೆ ಬೆಂಗಳೂರು ತಾಂತ್ರಿಕ ಸಭೆ: ಕಾರ್ಯಕ್ರಮದ ವಿವರ ಇಲ್ಲಿದೆ

ಕೇವಲ ಟೆಕ್ ಸಂಸ್ಥೆಗಳಲ್ಲದೇ, ಸ್ಟಾರ್ಟಪ್ ಹಾಗೂ ಬಯೋ ಟೆಕ್ನಾಲಜಿ ಕಂಪನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಬಿಟಿಎಸ್ 2021 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಖ್ಯಸ್ಥೆ ಸೌಮ್ಯ ಸ್ವಾಮಿನಾಥಾನ್ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

ನವೆಂಬರ್ 17ರಿಂದ 19ರ ವರೆಗೆ ಬೆಂಗಳೂರು ತಾಂತ್ರಿಕ ಸಭೆ: ಕಾರ್ಯಕ್ರಮದ ವಿವರ ಇಲ್ಲಿದೆ
ಸಚಿವ ಆಶ್ವಥ್ ನಾರಾಯಣ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Nov 09, 2021 | 2:57 PM

Share

ಬೆಂಗಳೂರು: ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ ಅಂಡ್ ಟಿ ಇಲಾಖೆ ಹಾಗೂ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಸಂಯುಕ್ತ ಆಶ್ರಯದಲ್ಲಿ‌ ನಗರದಲ್ಲಿ ನವೆಂವರ್ 17 ರಿಂದ 19 ರ ವರೆಗೆ ಬೆಂಗಳೂರು ತಾಂತ್ರಿಕ‌ ಸಭೆಯನ್ನ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಕುರಿತು ಖಾಸಗಿ ಹೋಟೆಲ್​ನಲ್ಲಿ ಇಂದು (ನವೆಂಬರ್ 9) ನಡೆದ ಪತ್ರಿಕಾಗೋಷ್ಠಿಯಲ್ಲಿ ಐಟಿ, ಬಿಟಿ ಸಚಿವ ಆಶ್ವಥ್ ನಾರಾಯಣ, ಇನ್ಪೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲ ಕೃಷ್ಣ, ಬಯೋಪಾಲ್ ಸಂಸ್ಥಾಪಕಿ ಕಿರಣ್ ಮಝುಂದಾರ್ ಷಾ, ಬಿಗ್ ಬಾಸ್ಕೆಟ್ ಹೂಡಿಕೆದಾರ ಗಣೇಶ್ ಕೃಷ್ನನ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಇವಿ ರಾಮಣ್ ರೆಡ್ಡಿ ಭಾಗಿ ಆಗಿದ್ದಾರೆ.

ಬೆಂಗಳೂರು ಟೆಕ್ ಸಮಾವೇಶ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಆಹ್ವಾನಿಸಲಾಗಿದೆ. ಅವರೇ ಕಾರ್ಯಕ್ರಮವನ್ನು ಉದ್ಗಾಟಿಸಲಿದ್ದಾರೆ ಎಂದು ತಿಳಿಸಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆ ಇದ್ದು, ಕೇವಲ ಟೆಕ್ ಸಂಸ್ಥೆಗಳಲ್ಲದೇ, ಸ್ಟಾರ್ಟಪ್ ಹಾಗೂ ಬಯೋ ಟೆಕ್ನಾಲಜಿ ಕಂಪನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಬಿಟಿಎಸ್ 2021 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಖ್ಯಸ್ಥೆ ಸೌಮ್ಯ ಸ್ವಾಮಿನಾಥಾನ್ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

ಭಾರತ ಅಮೆರಿಕಾ ರಾಷ್ಟ್ರಗಳ ಪ್ರತ್ಯೇಕ ಸಮಾವೇಶ ನಡೆಯಲಿದ್ದು, ಐಟಿ, ಬಿಟಿ ಹಾಗೂ ಸ್ಟಾರ್ಟಪ್​ಗಳ ಕುರಿತು ಪಶ್ಚಿಮ, ಉತ್ತರ, ಮಧ್ಯ ಅಮೆರಿಕ ಪ್ರಾಂತ್ಯ- ಭಾರತದ ಸಮನ್ವಯತೆ ಹಾಗೂ ನೂತನ ಅವಕಾಶಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ. ನೊಬೆಲ್ ಪ್ರಶಸ್ತಿ ವಿಜೇತ ಡಾ. ವೆಂಕಟ್ ರಾಮನ್, ರಾಮಾಕೃಷ್ಣನ್, ಮೈಕ್ರೋ ಸಾಫ್ಟ್ ಅಧ್ಯಕ್ಷ ಅನಂತ್ ಮಹೇಶ್ವರಿ, ಆ್ಯಪಲ್ ಸಂಸ್ಥೆಯ ಉಪಾಧ್ಯಕ್ಷೆ ಪ್ರಿಯ ಬಾಲಾಸುಬ್ರಮಣ್ಯಂ, ಭಾರತದ ಲೇಖಕ ಚೇತನ್ ಭಗತ್ ಸೇರಿದಂತೆ ಹಲವು ಗಣ್ಯರು ಸಮಾವೇಶದಲ್ಲಿ ಭಾಗಿ‌ ಆಗಲಿದ್ದಾರೆ.

ಇದನ್ನೂ ಓದಿ: ವರ್ಕ್ ಫ್ರಮ್ ಹೋಮ್ ಪದ್ಧತಿಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ: ಸಚಿವ ಅಶ್ವತ್ಥ್ ನಾರಾಯಣ ಮಾಹಿತಿ

ಇದನ್ನೂ ಓದಿ: ಪ್ರಸಕ್ತ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ; ಸಚಿವ ಡಾ.ಅಶ್ವತ್ಥ್ ನಾರಾಯಣ ಸ್ಪಷ್ಟನೆ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?