AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರ ಕಣ್ಣೀರು ಒರೆಸುವ ಮನಸ್ಥಿತಿಯೇ ದೊಡ್ಡ ಕಾಲರ್, ಸಿಎಂ ವೈಟ್ ಕಾಲರ್ ಹೇಳಿಕೆಗೆ ಡಾ ಮಂಜುನಾಥ್ ಟಾಂಗ್

ಮಾ.28 ರಂದು ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ನಾಮಪತ್ರ ಸಲ್ಲಿಕೆ ದಿನ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ, ‘ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್​ ಬೇಕೋ?, ಬಿಜೆಪಿಯ ವೈಟ್​ ಕಾಲರ್​ ಅಭ್ಯರ್ಥಿ ಮಂಜುನಾಥ್(C. N. Manjunath) ಬೇಕೋ ಎಂದು ಮತದಾರರಿಗೆ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಖಡಕ್​ ಟಾಂಗ್​ ನೀಡಿದ್ದಾರೆ.

ಬಡವರ ಕಣ್ಣೀರು ಒರೆಸುವ ಮನಸ್ಥಿತಿಯೇ ದೊಡ್ಡ ಕಾಲರ್, ಸಿಎಂ ವೈಟ್ ಕಾಲರ್ ಹೇಳಿಕೆಗೆ ಡಾ ಮಂಜುನಾಥ್ ಟಾಂಗ್
ಡಾ.ಮಂಜುನಾಥ್​
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 01, 2024 | 2:40 PM

Share

ಬೆಂಗಳೂರು, ಏ.01: ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಅಭ್ಯರ್ಥಿಗಳು ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಮಾ.28 ರಂದು ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ನಾಮಪತ್ರ ಸಲ್ಲಿಕೆ ದಿನ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ, ‘ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್​ ಬೇಕೋ?, ಬಿಜೆಪಿಯ ವೈಟ್​ ಕಾಲರ್​ ಅಭ್ಯರ್ಥಿ ಮಂಜುನಾಥ್(C. N. Manjunath) ಬೇಕೋ ಎಂದು ಮತದಾರರಿಗೆ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್, ‘ಬಡವರ ಕಣ್ಣೀರು ಒರೆಸುವುದೇ ದೊಡ್ಡ ಕಾಲರ್ ಎನ್ನುವ ಮೂಲಕ ಟಾಂಗ್​ ಕೊಟ್ಟಿದ್ದಾರೆ.

‘ನಿತ್ಯ 10 ಸಾವಿರ ಹೆಜ್ಜೆ ಹಾಕುವುದು ನನ್ನ ದಿನಚರಿಯಾಗಿದ್ದು, ಅದರಲ್ಲಿ 5 ಸಾವಿರ ಹೆಜ್ಜೆ ಆಸ್ಪತ್ರೆಯಲ್ಲೇ ಹಾಕುತ್ತಿದ್ದೆ. ನಾನು ಎಸಿ ರೂಂನಲ್ಲಿ ಕೂರುತ್ತಿರಲಿಲ್ಲ. ಬಡವರು, ರೈತರು ಸೇರಿದಂತೆ ಶೇಕಡಾ 80% ರಷ್ಟು ಗ್ರಾಮೀಣ ಜನರಿಗೆ ಚಿಕಿತ್ಸೆ ನೀಡಿದ್ದೇನೆ. ಇನ್ನು ನಾನು ನಿರ್ದೇಶಕನಾಗಿದ್ದಾಗ ಏರ್ ಕಂಡೀಷನ್ ಕೊಠಡಿಯಲ್ಲಿ ಕೂತಿರಲಿಲ್ಲ. ಪ್ರತಿದಿನ ಆಸ್ಪತ್ರೆಯಲ್ಲಿ ಜನತಾ ದರ್ಶನವನ್ನೇ ಮಾಡುತ್ತಿದ್ದೆ. ಇದೇನೂ ಹೊಸದಲ್ಲ, ಬಡವರ ಕಣ್ಣೀರು ಒರೆಸುವ ಮನಸ್ಥಿತಿಯೇ ದೊಡ್ಡ ಕಾಲರ್ ಎಂದಿದ್ದಾರೆ.

ಇದನ್ನೂ ಓದಿ:ಪಳಗಿದ ರಾಜಕಾರಣಿಯಂತೆ ಮಾತಾಡುವ ಅನುಸೂಯ ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗೆ ಮಾತಿನೇಟು ಕೊಟ್ಟರು!

ಇನ್ನು ಈಗಾಗಲೇ ಬಿ ಫಾರಂ ಪಡೆದಿದ್ದೇನೆ, ಏಪ್ರಿಲ್ 4ರಂದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ‘ನನ್ನ ಸುಧೀರ್ಘ ಅವಧಿಯಲ್ಲಿ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟಿದ್ದೇನೆ. ನಾನು‌ ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಹತ್ತಿರ ಇದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ