AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ದಿವಂಗತ ನಟ ಡಾ.ಪುನೀತ್ ರಾಜ್​ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
Rakesh Nayak Manchi
|

Updated on:Mar 23, 2023 | 9:39 PM

Share

ಬೆಂಗಳೂರು: ದಿವಂಗತ ನಟ ಡಾ.ಪುನೀತ್ ರಾಜ್​ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು (Dr Puneeth Rajkumar Multispeciality Hospital) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯೊಳಗೆ ಸ್ಥಾಪಿಸಲಾಗಿರುವ ಪುನೀತ್ ಪುತ್ಥಳಿಯನ್ನು ಕೂಡ ಮುಖ್ಯಮಂತ್ರಿಯವರು ಅನಾವರಣಗೊಳಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಉದ್ಘಾಟನೆ ವೇಳೆ ನಟ, ಪುನೀತ್ ಸಹೋದರ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar), ವಸತಿ ಸಚಿವ ವಿ. ಸೋಮಣ್ಣ (V. Somanna), ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಂ‌ಎಲ್‌ಸಿ ಅ ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲರ ಸಹಕಾರದಿಂದ ಬೆಂಗಳೂರಿಗೆ ಉತ್ತಮ ಹೆಸರು ಬರಲಿದೆ. ಈಗಾಗಲೇ ಬೆಂಗಳೂರಿಗೆ ಬ್ರಾಂಡ್ ಹೆಸರಿದ್ದು, ಬ್ರ್ಯಾಂಡ್ ಬೆಂಗಳೂರು ಹೆಸರನ್ನು ಯಾರೂ ಕೆಡಿಸಲು ಆಗುವುದಿಲ್ಲ. ಬೇರೆ ನಗರಗಳಿಗೆ ಹೋಲಿಸಿಕೊಂಡರೆ ಬೆಂಗಳೂರು ಹತ್ತು ಪಟ್ಟು ಹೆಚ್ಚು ಅಭಿವೃದ್ಧಿ ಆಗಿದೆ ಎಂದರು. ಇದೇ ವೇಳೆ ಸೋಮಣ್ಣ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ ಅವರು, ಸೋಮಣ್ಣ ಅವರು ಅಧಿಕಾರದ ಕೆಲಸ ಮಾಡಿಲ್ಲ, ಅವರು ಸದಾ ಜನರ ಕೆಲಸ ಮಾಡಿದವರು. ಅದು ಇದು ಅಭಿವೃದ್ಧಿ ಅಂತ ಬಂದು ಹೋಗುತ್ತಿರುತ್ತಾರೆ. ಸ್ಲಂ ಜನಕ್ಕೆ ಮನೆ ಕೊಡಬೇಕು ಅಂತ ಬರುತ್ತಾರೆ. ಗೋವಿಂದರಾಜನಗರಕ್ಕೆ ಸೋಮಣ್ಣ ಬರುವ ಮುನ್ನ ಹೇಗಿತ್ತು? ಈಗ ಹೇಗಿದೆ ಅಂತ ನೋಡಬೇಕು ಎಂದರು.

ಇದನ್ನೂ ಓದಿ: Yadgir: ಬೊಮ್ಮಾಯಿ ತಾವೇ ಸಿಎಂ ಆಗುತ್ತೇನೆಂದು ಹೇಳಿದ್ದನ್ನು ಮಾಧ್ಯಮದವರು ಗಮನಕ್ಕೆ ತಂದಾಗ ತೇಜಸ್ವೀ ಸೂರ್ಯ ಪ್ರತಿಕ್ರಿಯಿಸಲು ತಡವರಿಸಿದರು!

ಬಳಿಕ ಮಾತನಾಡಿದ ಸೋಮಣ್ಣ, ಪಂತರಪಾಳ್ಯ ವ್ಯಾಪ್ತಿಯ ಸುತ್ತಮುತ್ತಲಿನ ನಿವಾಸಿಗಳಿಗೆ ಪುನೀತ್ ಅವರ ಸ್ಮರಣೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಸ್ಥಳೀಯರ ಆಶೀರ್ವಾದವೂ ಇದೆ. ಸಾಮಾನ್ಯ ಜನರ ಒಡನಾಡಿಯಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ನಾಯಂಡಹಳ್ಳಿ ಕೆರೆಯನ್ನು ಅಭಿವೃದ್ದಿಗೊಳಿಸಿದ್ದೇವೆ ಎಂದು ತಿಳಿಸಿದರು. ನಾನು ಏಳೆಂಟು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ ಅನುಭವ ಇದೆ. ಬಸವರಾಜ ಬೊಮ್ಮಾಯಿ ಅವರ ತಂದೆ ಜೊತೆಗೂ ಕೆಲಸ ಮಾಡಿದ್ದೇನೆ. ಆದರೆ ಬೊಮ್ಮಾಯಿಯಷ್ಟು ಜನಪರ ಸಿಎಂ ನಾನು ನೋಡಿಯೇ ಇಲ್ಲ ಎಂದು ಹೇಳುವ ಮೂಲಕ ಸೋಮಣ್ಣ ಅವರು ಬೊಮ್ಮಾಯಿಯನ್ನು ಹಾಡಿ ಹೊಗಳಿದರು.

ಇದೇ ವೇಳೆ ಮಾತನಾಡಿದ ನಟ ರಾಘವೇಂದ್ರ ರಾಜ್​ಕುಮಾರ್ ಅವರು ಪುನೀತ್ ರಾಜ್​ಕುಮಾರ್ ಸವಿನೆನಪಿನಲ್ಲಿ ಇಂತಹ ಆಸ್ಪತ್ರೆಯನ್ನು ಕಟ್ಟಿಸಿದ ಸಚಿವ ಸೋಮಣ್ಣ ಅವರಿಗೆ ಧನ್ಯವಾಗಳನ್ನು ಅರ್ಪಿಸಿದರು. ಈ ಆಸ್ಪತ್ರೆಯನ್ನು ದೇವಸ್ಥಾನ ಎಂದು ಭಾವಿಸಿ ಶುಚಿಯಾಗಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Thu, 23 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ