AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ದಿವಂಗತ ನಟ ಡಾ.ಪುನೀತ್ ರಾಜ್​ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
Rakesh Nayak Manchi
Rakesh Nayak Manchi|

Updated on:Mar 23, 2023 | 9:39 PM

Share

ಮುಖ್ಯಾಂಶಗಳು

  • ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ
  • ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
  • 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪ್ಪು ಪ್ರತಿಮೆ ಅನಾವರಣ

ಬೆಂಗಳೂರು: ದಿವಂಗತ ನಟ ಡಾ.ಪುನೀತ್ ರಾಜ್​ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು (Dr Puneeth Rajkumar Multispeciality Hospital) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯೊಳಗೆ ಸ್ಥಾಪಿಸಲಾಗಿರುವ ಪುನೀತ್ ಪುತ್ಥಳಿಯನ್ನು ಕೂಡ ಮುಖ್ಯಮಂತ್ರಿಯವರು ಅನಾವರಣಗೊಳಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಉದ್ಘಾಟನೆ ವೇಳೆ ನಟ, ಪುನೀತ್ ಸಹೋದರ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar), ವಸತಿ ಸಚಿವ ವಿ. ಸೋಮಣ್ಣ (V. Somanna), ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಂ‌ಎಲ್‌ಸಿ ಅ ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲರ ಸಹಕಾರದಿಂದ ಬೆಂಗಳೂರಿಗೆ ಉತ್ತಮ ಹೆಸರು ಬರಲಿದೆ. ಈಗಾಗಲೇ ಬೆಂಗಳೂರಿಗೆ ಬ್ರಾಂಡ್ ಹೆಸರಿದ್ದು, ಬ್ರ್ಯಾಂಡ್ ಬೆಂಗಳೂರು ಹೆಸರನ್ನು ಯಾರೂ ಕೆಡಿಸಲು ಆಗುವುದಿಲ್ಲ. ಬೇರೆ ನಗರಗಳಿಗೆ ಹೋಲಿಸಿಕೊಂಡರೆ ಬೆಂಗಳೂರು ಹತ್ತು ಪಟ್ಟು ಹೆಚ್ಚು ಅಭಿವೃದ್ಧಿ ಆಗಿದೆ ಎಂದರು. ಇದೇ ವೇಳೆ ಸೋಮಣ್ಣ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ ಅವರು, ಸೋಮಣ್ಣ ಅವರು ಅಧಿಕಾರದ ಕೆಲಸ ಮಾಡಿಲ್ಲ, ಅವರು ಸದಾ ಜನರ ಕೆಲಸ ಮಾಡಿದವರು. ಅದು ಇದು ಅಭಿವೃದ್ಧಿ ಅಂತ ಬಂದು ಹೋಗುತ್ತಿರುತ್ತಾರೆ. ಸ್ಲಂ ಜನಕ್ಕೆ ಮನೆ ಕೊಡಬೇಕು ಅಂತ ಬರುತ್ತಾರೆ. ಗೋವಿಂದರಾಜನಗರಕ್ಕೆ ಸೋಮಣ್ಣ ಬರುವ ಮುನ್ನ ಹೇಗಿತ್ತು? ಈಗ ಹೇಗಿದೆ ಅಂತ ನೋಡಬೇಕು ಎಂದರು.

ಇದನ್ನೂ ಓದಿ: Yadgir: ಬೊಮ್ಮಾಯಿ ತಾವೇ ಸಿಎಂ ಆಗುತ್ತೇನೆಂದು ಹೇಳಿದ್ದನ್ನು ಮಾಧ್ಯಮದವರು ಗಮನಕ್ಕೆ ತಂದಾಗ ತೇಜಸ್ವೀ ಸೂರ್ಯ ಪ್ರತಿಕ್ರಿಯಿಸಲು ತಡವರಿಸಿದರು!

ಬಳಿಕ ಮಾತನಾಡಿದ ಸೋಮಣ್ಣ, ಪಂತರಪಾಳ್ಯ ವ್ಯಾಪ್ತಿಯ ಸುತ್ತಮುತ್ತಲಿನ ನಿವಾಸಿಗಳಿಗೆ ಪುನೀತ್ ಅವರ ಸ್ಮರಣೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಸ್ಥಳೀಯರ ಆಶೀರ್ವಾದವೂ ಇದೆ. ಸಾಮಾನ್ಯ ಜನರ ಒಡನಾಡಿಯಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ನಾಯಂಡಹಳ್ಳಿ ಕೆರೆಯನ್ನು ಅಭಿವೃದ್ದಿಗೊಳಿಸಿದ್ದೇವೆ ಎಂದು ತಿಳಿಸಿದರು. ನಾನು ಏಳೆಂಟು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ ಅನುಭವ ಇದೆ. ಬಸವರಾಜ ಬೊಮ್ಮಾಯಿ ಅವರ ತಂದೆ ಜೊತೆಗೂ ಕೆಲಸ ಮಾಡಿದ್ದೇನೆ. ಆದರೆ ಬೊಮ್ಮಾಯಿಯಷ್ಟು ಜನಪರ ಸಿಎಂ ನಾನು ನೋಡಿಯೇ ಇಲ್ಲ ಎಂದು ಹೇಳುವ ಮೂಲಕ ಸೋಮಣ್ಣ ಅವರು ಬೊಮ್ಮಾಯಿಯನ್ನು ಹಾಡಿ ಹೊಗಳಿದರು.

ಇದೇ ವೇಳೆ ಮಾತನಾಡಿದ ನಟ ರಾಘವೇಂದ್ರ ರಾಜ್​ಕುಮಾರ್ ಅವರು ಪುನೀತ್ ರಾಜ್​ಕುಮಾರ್ ಸವಿನೆನಪಿನಲ್ಲಿ ಇಂತಹ ಆಸ್ಪತ್ರೆಯನ್ನು ಕಟ್ಟಿಸಿದ ಸಚಿವ ಸೋಮಣ್ಣ ಅವರಿಗೆ ಧನ್ಯವಾಗಳನ್ನು ಅರ್ಪಿಸಿದರು. ಈ ಆಸ್ಪತ್ರೆಯನ್ನು ದೇವಸ್ಥಾನ ಎಂದು ಭಾವಿಸಿ ಶುಚಿಯಾಗಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Thu, 23 March 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ