AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣ; ಕಲುಷಿತ ನೀರು ಕುಡಿದ ಮಕ್ಕಳು, ಮಹಿಳೆಯರಿಗೆ ವಾಂತಿ-ಭೇದಿ

ಕುಡಿಯುವ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿದ್ದು ತಿಳಿಯದೆ ನಾಗಪ್ಪ ಬೀದಿಯ ಜನರು ಕಲುಷಿತವಾಗಿರುವ ನೀರು ಕುಡಿದ ಹಿನ್ನೆಲೆಯಲ್ಲಿ ಕೆಲ ಮಕ್ಕಳು, ಮಹಿಳೆಯರು, ಹಿರಿಯರಿಗೆ ವಾಂತಿ, ಭೇದಿ ಜೊತೆಗೆ ಆರೋಗ್ಯ ಸಮಸ್ಯೆ ಎದುರಾಗಿದೆ.

ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣ; ಕಲುಷಿತ ನೀರು ಕುಡಿದ ಮಕ್ಕಳು, ಮಹಿಳೆಯರಿಗೆ ವಾಂತಿ-ಭೇದಿ
ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣ; ಕಲುಷಿತ ನೀರು ಕುಡಿದ ಮಕ್ಕಳು, ಮಹಿಳೆಯರಿಗೆ ವಾಂತಿ-ಭೇದಿ
TV9 Web
| Edited By: ಆಯೇಷಾ ಬಾನು|

Updated on: Oct 27, 2021 | 2:25 PM

Share

ಬೆಂಗಳೂರು: ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಪ್ರಾಣಕ್ಕೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿಯ ನಾಗಪ್ಪ ಬೀದಿಯಲ್ಲಿ ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣವಾಗಿದ್ದು ಕೆಲವರಿಗೆ ವಾಂತಿ, ಭೇದಿ ಜೊತೆಗೆ ಆರೋಗ್ಯ ಸಮಸ್ಯೆ ಎದುರಾಗಿದೆ.

ಕುಡಿಯುವ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿದ್ದು ತಿಳಿಯದೆ ನಾಗಪ್ಪ ಬೀದಿಯ ಜನರು ಕಲುಷಿತವಾಗಿರುವ ನೀರು ಕುಡಿದ ಹಿನ್ನೆಲೆಯಲ್ಲಿ ಕೆಲ ಮಕ್ಕಳು, ಮಹಿಳೆಯರು, ಹಿರಿಯರಿಗೆ ವಾಂತಿ, ಭೇದಿ ಜೊತೆಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಕಲುಷಿತ ನೀರನ್ನು ಬಾಟಲಿಯಲ್ಲಿ ತೆಗೆದುಕೊಂಡು ಹೋಗಿ ಅಧಿಕಾರಿಗಳಿಗೆ ತೋರಿಸಿದರೂ ಯಾವುದೇ ಕ್ರಮವಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ 15 ದಿನಗಳಿಂದ ಜಲಮಂಡಳಿ ಪೂರೈಸುತ್ತಿರುವ ನೀರಿನಲ್ಲಿ ಒಳಚರಂಡಿಯ ನೀರು ಮಿಶ್ರಣವಾಗುತ್ತಿದೆ. ಎರಡು ದಿನಗಳಿಂದ ನೀರಿನಲ್ಲಿ ದುರ್ವಾಸನೆ ಬರ್ತಿದ್ದು ಒಂದು ತೊಟ್ಟು ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ. ಕಲುಷಿತ ನೀರನ್ನ, ಕುಮಾರ ಪಾರ್ಕ್ ಸೇವಾ ಠಾಣೆ ಈಶಾನ್ಯ 2, ಉಪ ವಿಭಾಗಕ್ಕೆ ನೀಡಿದ್ರೂ ಯಾವ ಪ್ರಯೋಜನವೂ ಆಗಿಲ್ಲ. ಮೇಲಾಧಿಕಾರಿಗಳ ಗಮನಕ್ಕೆ ತರದೇ ಕಲುಷಿತ ನೀರನ್ನು ತುಂಬಿಸಿಕೊಂಡು ಹೋಗಿದ್ದ ಬಾಟಲಿಯನ್ನು ಅಲ್ಲಿನ ಸಿಬ್ಬಂದಿ ಆಚೆಗೆ ಎಸೆದ್ರು. ಕಲುಷಿತ ನೀರು ಕುಡಿದ ಕೆಲ ಮಹಿಳೆಯರಿಗೆ ವಾಂತಿ ಶುರುವಾಗಿದೆ ಎಂದು ಸ್ಥಳೀಯರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದು ಜಲಮಂಡಳಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Swachh Bharat Mission Urban 2.0 ಸ್ವಚ್ಛ ಭಾರತ ಮಿಷನ್-ಅರ್ಬನ್, ಅಮೃತ್ ಯೋಜನೆಯ ಎರಡನೇ ಹಂತಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್