AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ: ತುಂಡು ಬಟ್ಟೆ ಧರಿಸಿಕೊಂಡು ಬಂದ್ರೆ ದೇವಾಲಯದೊಳಗೆ ನೋ ಎಂಟ್ರಿ

ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ  ಇಂದಿನಿಂದ ಅಭಿಯಾನ ನಡೆಸಲಿದೆ.

ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ: ತುಂಡು ಬಟ್ಟೆ ಧರಿಸಿಕೊಂಡು ಬಂದ್ರೆ ದೇವಾಲಯದೊಳಗೆ ನೋ ಎಂಟ್ರಿ
ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ
TV9 Web
| Edited By: |

Updated on:Jan 10, 2024 | 9:43 AM

Share

ಬೆಂಗಳೂರು, ಜನವರಿ 10: ಇಂದಿನಿಂದ ರಾಜಧಾನಿಯ (Bengaluru) ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ (Dress Code) ಜಾರಿಯಾಗುತ್ತಿದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ  ಇಂದಿನಿಂದ ಅಭಿಯಾನ ನಡೆಸಲಿದೆ. ಇಂದು (ಜ.10) ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ.

ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಿದೆ.

ದೇವಾಲಯದ ಒಳಗೆ ವಸ್ತ್ರಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈ ಹಿಂದೆ ಒತ್ತಾಯಿಸಿತ್ತು. ಇದಕ್ಕೆ ಹಿಂದೂ ಸಂಘಟನೆಗು ಬೆಂಬಲ ವ್ಯಕ್ತಪಡಿಸಿದ್ದವು. ದೇವಾಲಯಗಳ ಒಳಗೆ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದೇವರ ದರ್ಶನಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದವು.

ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಈ ಸಂಬಂಧ ಕಳೆದ ತಿಂಗಳು ರಾಜ್ಯದ ಎಲ್ಲ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ನಡೆಸಿದ್ದರು. ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು. ಹೀಗಾಗಿ ಇಂದಿನಿಂದ ಬೆಂಗಳೂರಿನ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.

ಈ ವಸ್ತ್ರಸಂಹಿತೆ ಪ್ರಕಾರ ಪುರುಷರು ದೇವಲಾಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್​, ಎದೆ ಕಾಣುವ ಟಿಶರ್ಟ್​ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಬಂದರೇ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗ ಹೋಗುವಂತಿಲ್ಲ. ಈ ಬಗ್ಗೆ ಬಿಗಿಯಾದ ವಸ್ತ್ರ ಸಂಹಿತೆ ಜಾರಿಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:38 am, Wed, 10 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್