AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ: ತುಂಡು ಬಟ್ಟೆ ಧರಿಸಿಕೊಂಡು ಬಂದ್ರೆ ದೇವಾಲಯದೊಳಗೆ ನೋ ಎಂಟ್ರಿ

ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ  ಇಂದಿನಿಂದ ಅಭಿಯಾನ ನಡೆಸಲಿದೆ.

ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ: ತುಂಡು ಬಟ್ಟೆ ಧರಿಸಿಕೊಂಡು ಬಂದ್ರೆ ದೇವಾಲಯದೊಳಗೆ ನೋ ಎಂಟ್ರಿ
ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ
TV9 Web
| Edited By: ವಿವೇಕ ಬಿರಾದಾರ|

Updated on:Jan 10, 2024 | 9:43 AM

Share

ಬೆಂಗಳೂರು, ಜನವರಿ 10: ಇಂದಿನಿಂದ ರಾಜಧಾನಿಯ (Bengaluru) ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ (Dress Code) ಜಾರಿಯಾಗುತ್ತಿದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ  ಇಂದಿನಿಂದ ಅಭಿಯಾನ ನಡೆಸಲಿದೆ. ಇಂದು (ಜ.10) ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ.

ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಿದೆ.

ದೇವಾಲಯದ ಒಳಗೆ ವಸ್ತ್ರಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈ ಹಿಂದೆ ಒತ್ತಾಯಿಸಿತ್ತು. ಇದಕ್ಕೆ ಹಿಂದೂ ಸಂಘಟನೆಗು ಬೆಂಬಲ ವ್ಯಕ್ತಪಡಿಸಿದ್ದವು. ದೇವಾಲಯಗಳ ಒಳಗೆ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದೇವರ ದರ್ಶನಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದವು.

ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಈ ಸಂಬಂಧ ಕಳೆದ ತಿಂಗಳು ರಾಜ್ಯದ ಎಲ್ಲ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ನಡೆಸಿದ್ದರು. ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು. ಹೀಗಾಗಿ ಇಂದಿನಿಂದ ಬೆಂಗಳೂರಿನ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.

ಈ ವಸ್ತ್ರಸಂಹಿತೆ ಪ್ರಕಾರ ಪುರುಷರು ದೇವಲಾಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್​, ಎದೆ ಕಾಣುವ ಟಿಶರ್ಟ್​ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಬಂದರೇ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗ ಹೋಗುವಂತಿಲ್ಲ. ಈ ಬಗ್ಗೆ ಬಿಗಿಯಾದ ವಸ್ತ್ರ ಸಂಹಿತೆ ಜಾರಿಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:38 am, Wed, 10 January 24

Follow Us
TV9 Web
TV9 Web

TV9 Kannada

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್