AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್​ ಜಾಮ್​ನಲ್ಲೇ ಕಾರಲ್ಲಿ ಕುಳಿತು ಪಿಜ್ಜಾಗೆ ಆರ್ಡರ್ ಮಾಡಿದ ಚಾಲಕ; ವಿಡಿಯೋ ವೈರಲ್

ಸಿಲಿಕಾನ್ ಸಿಟಿಯ ಔಟರ್ ರಿಂಗ್ ರಸ್ತೆಯಲ್ಲಿ ಬುಧವಾರ ಟ್ರಾಫಿಕ್ ಜಾಮ್ ಆಗಿತ್ತು. ಸುಮಾರು 4-5 ಗಂಟೆಗಳ ಕಾಲ ಸ್ಲೋ ಮೂವಿಂಗ್ ಟ್ರಾಫಿಕ್ ಇತ್ತು. ಪರಿಣಾಮವಾಗಿ ವಾಹನಗಳು ಗಂಟೆಗಟ್ಟಲೆ ನಿಂತಲ್ಲೇ ನಿಂತಿದ್ದವು. ವೈಟ್ ಫೀಲ್ಡ್, ಐಟಿಪಿಎಲ್, ಮಾರತಹಳ್ಳಿ, ಬೆಳ್ಳಂದೂರು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಟ್ರಾಫಿಕ್​​ನಲ್ಲೇ ಕಾರು ಚಾಲಕರೊಬ್ಬರು ಪಿಜ್ಜಾ ಆರ್ಡರ್ ಮಾಡಿದ್ದಾರೆ!

ಬೆಂಗಳೂರು ಟ್ರಾಫಿಕ್​ ಜಾಮ್​ನಲ್ಲೇ ಕಾರಲ್ಲಿ ಕುಳಿತು ಪಿಜ್ಜಾಗೆ ಆರ್ಡರ್ ಮಾಡಿದ ಚಾಲಕ; ವಿಡಿಯೋ ವೈರಲ್
ಬೆಂಗಳೂರು ಟ್ರಾಫಿಕ್​ ಜಾಮ್​ನಲ್ಲೇ ಕಾರಲ್ಲಿ ಕುಳಿತು ಪಿಜ್ಜಾಗೆ ಆರ್ಡರ್ ಮಾಡಿದ ಚಾಲಕ; ವಿಡಿಯೋ ವೈರಲ್
Jagadisha B
| Edited By: |

Updated on: Sep 28, 2023 | 7:29 PM

Share

ಬೆಂಗಳೂರು, ಸೆಪ್ಟೆಂಬರ್ 28: ಸಾಲು ಸಾಲು ರಜೆಯ ಕಾರಣ ಜನ ಊರುಗಳತ್ತ ಮುಖಮಾಡಿದ್ದರಿಂದ ಬುಧವಾರ ಬೆಂಗಳೂರಿನ ವಿವಿಧೆಡೆ ಸಂಚಾರ ದಟ್ಟಣೆ ಉಂಟಾಗಿದ್ದು (Bangalore traffic jam) ಭಾರೀ ಸುದ್ದಿಯಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಬೆಂಗಳೂರಿನ ಟ್ರಾಫಿಕ್ ಜಾಮ್ ಮತ್ತು ನಿಧಾನಗತಿಯ ಸಂಚಾರದ ಬಗ್ಗೆ ಬಹಳಷ್ಟು ಚರ್ಚೆಯಾಗಿತ್ತು. ಕೆಲವೇ ಕಿಲೋಮೀಟರ್ ದೂರ ಕ್ರಮಿಸಲೂ ಸವಾರರು ಗಂಟೆಗಟ್ಟಲೆ ಸಮಯ ವಿನಿಯೋಗಿಸಬೇಕಾಗಿ ಬಂದಿತ್ತು. ಇದೇ ವೇಳೆ, ಟ್ರಾಫಿಕ್ ಜಾಮ್​ನಲ್ಲಿ ಸಿಕ್ಕಿಹಾಕಿಕೊಂಡ ಕಾರು ಚಾಲಕರೊಬ್ಬರು ಲೈವ್ ಲೊಕೇಷನ್ ಆಧಾರದಲ್ಲಿ ಪಿಜ್ಜಾಗೆ ಆರ್ಡರ್ ಮಾಡಿ ತರಿಸಿಕೊಂಡ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಸಿಲಿಕಾನ್ ಸಿಟಿಯ ಔಟರ್ ರಿಂಗ್ ರಸ್ತೆಯಲ್ಲಿ ಬುಧವಾರ ಟ್ರಾಫಿಕ್ ಜಾಮ್ ಆಗಿತ್ತು. ಸುಮಾರು 4-5 ಗಂಟೆಗಳ ಕಾಲ ಸ್ಲೋ ಮೂವಿಂಗ್ ಟ್ರಾಫಿಕ್ ಇತ್ತು. ಪರಿಣಾಮವಾಗಿ ವಾಹನಗಳು ಗಂಟೆಗಟ್ಟಲೆ ನಿಂತಲ್ಲೇ ನಿಂತಿದ್ದವು. ವೈಟ್ ಫೀಲ್ಡ್, ಐಟಿಪಿಎಲ್, ಮಾರತಹಳ್ಳಿ, ಬೆಳ್ಳಂದೂರು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಟ್ರಾಫಿಕ್​​ನಲ್ಲೇ ಕಾರು ಚಾಲಕರೊಬ್ಬರು ಪಿಜ್ಜಾ ಆರ್ಡರ್ ಮಾಡಿದ್ದಾರೆ!

ಕಾರು ಚಾಲಕ ಲೈವ್ ಲೊಕೇಷನ್ ಹಾಕಿ ಪಿಜ್ಜಾ ಆರ್ಡರ್ ಮಾಡಿದ್ದಾರೆ. ಅವರಿಗೆ, ಲೈವ್ ಲೊಕೇಷನ್ ನೋಡಿಕೊಂಡು ಸಿಬ್ಬಂದಿ ಪಿಜ್ಜಾ ತಂದು ಕೊಟ್ಟಿದ್ದಾರೆ. ಪಿಜ್ಜಾ ತಂದು ಕೊಡೋ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಸೆ. 27ರ ಸಂಜೆ ನಾಲ್ಕು ಗಂಟೆಗೆ ಶಾಲೆ ಬಿಟ್ಟ ಮಕ್ಕಳು ಮನೆಗೆ ತಲುಪಿದ್ದು ರಾತ್ರಿ ಎಂಟಕ್ಕೆ !!

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಮಾಡಲಾಗಿರುವ ಪೋಸ್ಟ್

ಕಮ್ರಾನ್ ಎಂಬವರು ವಿಡಿಯೋವನ್ನು ಶೇರ್ ಮಾಡಿದ್ದು, ‘ರಿಶಿವತ್ಸ್ ಅವರು ಬೆಂಗಳೂರು ಟ್ರಾಫಿಕ್​ನಲ್ಲಿ ಸಿಲುಕಿದ್ದಾಗ ಡೊಮಿನೋಸ್​ನಿಂದ ಪಿಜ್ಜಾ ಆರ್ಡರ್ ಮಾಡಿದರು. ಲೈವ್ ಲೊಕೇಷನ್ ನೀಡಿದ್ದರು. ಸಂಚಾರ ದಟ್ಟಣೆಯ ಮಧ್ಯೆಯೇ ಡೊಮಿನೋಸ್ ಸಿಬ್ಬಂದಿ ಅವರಿಗೆ ಪಿಜ್ಜಾ ಕೊಟ್ಟು ಹೋದರು’ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೋಗೆ ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್