AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು

ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಹಿನ್ನೆಲೆ ಲಾರಿಯೊಂದನ್ನು ಜಪ್ತಿ ಮಾಡಿದ್ದರು. ಈ ಲಾರಿಯನ್ನು ಎಲೆಕ್ಟ್ರಾನಿಕ್ ಆರ್​ಟಿಒ ಕಚೇರಿ ಆವರಣದಲ್ಲಿ ಇಡಲಾಗಿತ್ತು. ಈ ಬಗ್ಗೆ ಬೆಳಗ್ಗೆ ವಿಚಾರಿಸೋಣ ಎಂದು ಮಾಲೀಕ ಹೇಳಿದ್ದರಿಂದ ಇದೇ ಲಾರಿಯಲ್ಲಿ ಚಾಲಕ ಮಲಗಿದ್ದರು. ಆದರೆ, ಬೆಳಗ್ಗೆ ನೋಡುವಾಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ಎಲೆಕ್ಟ್ರೋನಿಕ್ ಸಿಟಿ RTO ಅಧಿಕಾರಿಗಳು ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ರಾಮು, ಆನೇಕಲ್​
| Edited By: |

Updated on:Jan 16, 2024 | 5:38 PM

Share

ಆನೇಕಲ್, ಜ.16: ಜಪ್ತಿ ಮಾಡಿ ಕಚೇರಿ ಆವರಣದಲ್ಲಿ ಇಟ್ಟಿದ್ದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಹುಸ್ಕೂರಿನಲ್ಲಿರುವ ಆರ್​ಟಿಒ (RTO) ಕಚೇರಿಯಲ್ಲಿ ನಡೆದಿದೆ. ವಸಂತ್ ಕುಮಾರ್ ಮೃತಪಟ್ಟ ಚಾಲಕ.

ಜನವರಿ 9 ರಂದು ಪೀಣ್ಯ 2ನೇ ಹಂತದಿಂದ ವಸಂತ್ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಆಗಿರುವುದು ತಿಳಿದುಬಂದಿದೆ. ಹೀಗಾಗಿ ಇನ್​ಸ್ಪೆಕ್ಟರ್ ಮತ್ತು ಸಿಬ್ಬಂದಿ ಲಾರಿಯನ್ನು ಜಪ್ತಿ ಮಾಡಿ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಒ ಕಚೇರಿಯಲ್ಲಿಟ್ಟಿದ್ದರು.

ಇದನ್ನೂ ಓದಿ: ಆಸ್ಕರ್ ವಿಜೇತ ‘ಪ್ಯಾರಸೈಟ್’ ಸಿನಿಮಾದ ನಟ ಅನುಮಾನಾಸ್ಪದ ಸಾವು

ಲಾರಿ ಜಪ್ತಿ ಮಾಡಿದ ಬಗ್ಗೆ ಚಾಲಕ ವಸಂತ್ ತನ್ನ ಮಾಲೀಕನಿಗೆ ಮಾಹಿತಿ‌ ನೀಡಿದ್ದಾರೆ. ಈ ವೇಳೆ, ಬೆಳಗ್ಗೆ ನೋಡಿಕೊಳ್ಳೋಣ ಎಂದು ಹೇಳಿದ್ದರು. ಹೀಗಾಗಿ ರಾತ್ರಿ ವಸಂತ್ ಜಪ್ತಿ ಮಾಡಿದ್ದ ಲಾರಿಯಲ್ಲೇ ಮಲಗಿದ್ದರು. ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಆರ್​ಟಿಒ ಸಿಬ್ಬಂದಿ ದೂರು ನೀಡಿದ್ದು, ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಯುಡಿಆರ್ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 16 January 24

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?