AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು

ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಹಿನ್ನೆಲೆ ಲಾರಿಯೊಂದನ್ನು ಜಪ್ತಿ ಮಾಡಿದ್ದರು. ಈ ಲಾರಿಯನ್ನು ಎಲೆಕ್ಟ್ರಾನಿಕ್ ಆರ್​ಟಿಒ ಕಚೇರಿ ಆವರಣದಲ್ಲಿ ಇಡಲಾಗಿತ್ತು. ಈ ಬಗ್ಗೆ ಬೆಳಗ್ಗೆ ವಿಚಾರಿಸೋಣ ಎಂದು ಮಾಲೀಕ ಹೇಳಿದ್ದರಿಂದ ಇದೇ ಲಾರಿಯಲ್ಲಿ ಚಾಲಕ ಮಲಗಿದ್ದರು. ಆದರೆ, ಬೆಳಗ್ಗೆ ನೋಡುವಾಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ಎಲೆಕ್ಟ್ರೋನಿಕ್ ಸಿಟಿ RTO ಅಧಿಕಾರಿಗಳು ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ರಾಮು, ಆನೇಕಲ್​
| Edited By: Rakesh Nayak Manchi|

Updated on:Jan 16, 2024 | 5:38 PM

Share

ಆನೇಕಲ್, ಜ.16: ಜಪ್ತಿ ಮಾಡಿ ಕಚೇರಿ ಆವರಣದಲ್ಲಿ ಇಟ್ಟಿದ್ದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಹುಸ್ಕೂರಿನಲ್ಲಿರುವ ಆರ್​ಟಿಒ (RTO) ಕಚೇರಿಯಲ್ಲಿ ನಡೆದಿದೆ. ವಸಂತ್ ಕುಮಾರ್ ಮೃತಪಟ್ಟ ಚಾಲಕ.

ಜನವರಿ 9 ರಂದು ಪೀಣ್ಯ 2ನೇ ಹಂತದಿಂದ ವಸಂತ್ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಆಗಿರುವುದು ತಿಳಿದುಬಂದಿದೆ. ಹೀಗಾಗಿ ಇನ್​ಸ್ಪೆಕ್ಟರ್ ಮತ್ತು ಸಿಬ್ಬಂದಿ ಲಾರಿಯನ್ನು ಜಪ್ತಿ ಮಾಡಿ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಒ ಕಚೇರಿಯಲ್ಲಿಟ್ಟಿದ್ದರು.

ಇದನ್ನೂ ಓದಿ: ಆಸ್ಕರ್ ವಿಜೇತ ‘ಪ್ಯಾರಸೈಟ್’ ಸಿನಿಮಾದ ನಟ ಅನುಮಾನಾಸ್ಪದ ಸಾವು

ಲಾರಿ ಜಪ್ತಿ ಮಾಡಿದ ಬಗ್ಗೆ ಚಾಲಕ ವಸಂತ್ ತನ್ನ ಮಾಲೀಕನಿಗೆ ಮಾಹಿತಿ‌ ನೀಡಿದ್ದಾರೆ. ಈ ವೇಳೆ, ಬೆಳಗ್ಗೆ ನೋಡಿಕೊಳ್ಳೋಣ ಎಂದು ಹೇಳಿದ್ದರು. ಹೀಗಾಗಿ ರಾತ್ರಿ ವಸಂತ್ ಜಪ್ತಿ ಮಾಡಿದ್ದ ಲಾರಿಯಲ್ಲೇ ಮಲಗಿದ್ದರು. ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಆರ್​ಟಿಒ ಸಿಬ್ಬಂದಿ ದೂರು ನೀಡಿದ್ದು, ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಯುಡಿಆರ್ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 16 January 24

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ