AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು

ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಹಿನ್ನೆಲೆ ಲಾರಿಯೊಂದನ್ನು ಜಪ್ತಿ ಮಾಡಿದ್ದರು. ಈ ಲಾರಿಯನ್ನು ಎಲೆಕ್ಟ್ರಾನಿಕ್ ಆರ್​ಟಿಒ ಕಚೇರಿ ಆವರಣದಲ್ಲಿ ಇಡಲಾಗಿತ್ತು. ಈ ಬಗ್ಗೆ ಬೆಳಗ್ಗೆ ವಿಚಾರಿಸೋಣ ಎಂದು ಮಾಲೀಕ ಹೇಳಿದ್ದರಿಂದ ಇದೇ ಲಾರಿಯಲ್ಲಿ ಚಾಲಕ ಮಲಗಿದ್ದರು. ಆದರೆ, ಬೆಳಗ್ಗೆ ನೋಡುವಾಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ಎಲೆಕ್ಟ್ರೋನಿಕ್ ಸಿಟಿ RTO ಅಧಿಕಾರಿಗಳು ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ರಾಮು, ಆನೇಕಲ್​
| Edited By: |

Updated on:Jan 16, 2024 | 5:38 PM

Share

ಆನೇಕಲ್, ಜ.16: ಜಪ್ತಿ ಮಾಡಿ ಕಚೇರಿ ಆವರಣದಲ್ಲಿ ಇಟ್ಟಿದ್ದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಹುಸ್ಕೂರಿನಲ್ಲಿರುವ ಆರ್​ಟಿಒ (RTO) ಕಚೇರಿಯಲ್ಲಿ ನಡೆದಿದೆ. ವಸಂತ್ ಕುಮಾರ್ ಮೃತಪಟ್ಟ ಚಾಲಕ.

ಜನವರಿ 9 ರಂದು ಪೀಣ್ಯ 2ನೇ ಹಂತದಿಂದ ವಸಂತ್ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಆಗಿರುವುದು ತಿಳಿದುಬಂದಿದೆ. ಹೀಗಾಗಿ ಇನ್​ಸ್ಪೆಕ್ಟರ್ ಮತ್ತು ಸಿಬ್ಬಂದಿ ಲಾರಿಯನ್ನು ಜಪ್ತಿ ಮಾಡಿ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಒ ಕಚೇರಿಯಲ್ಲಿಟ್ಟಿದ್ದರು.

ಇದನ್ನೂ ಓದಿ: ಆಸ್ಕರ್ ವಿಜೇತ ‘ಪ್ಯಾರಸೈಟ್’ ಸಿನಿಮಾದ ನಟ ಅನುಮಾನಾಸ್ಪದ ಸಾವು

ಲಾರಿ ಜಪ್ತಿ ಮಾಡಿದ ಬಗ್ಗೆ ಚಾಲಕ ವಸಂತ್ ತನ್ನ ಮಾಲೀಕನಿಗೆ ಮಾಹಿತಿ‌ ನೀಡಿದ್ದಾರೆ. ಈ ವೇಳೆ, ಬೆಳಗ್ಗೆ ನೋಡಿಕೊಳ್ಳೋಣ ಎಂದು ಹೇಳಿದ್ದರು. ಹೀಗಾಗಿ ರಾತ್ರಿ ವಸಂತ್ ಜಪ್ತಿ ಮಾಡಿದ್ದ ಲಾರಿಯಲ್ಲೇ ಮಲಗಿದ್ದರು. ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಆರ್​ಟಿಒ ಸಿಬ್ಬಂದಿ ದೂರು ನೀಡಿದ್ದು, ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಯುಡಿಆರ್ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 16 January 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?