AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರು ತಲುಪಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

ಜನವರಿ 24 ರಂದು ಶಾಂಘೈ ಬಂದರಿನಿಂದ ಸಮುದ್ರ ಮಾರ್ಗವಾಗಿ ಕಳುಹಿಸಲಾದ ಮೆಟ್ರೋ ಟ್ರೈನ್ ಫೆಬ್ರವರಿ 6 ರಂದು ಚೀನಾದಿಂದ ಚೆನ್ನೈ ಬಂದರಿಗೆ ಬಂದು ತಲುಪಿತ್ತು. ಸದ್ಯ ಈಗ ಚೆನ್ನೈ ಬಂದರಿನಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಬಂದು ತಲುಪಿದೆ. ಈ ಚಾಲಕ ರಹಿತ ರೈಲು ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ನಲ್ಲಿ ಸಂಚರಿಸಲಿದೆ.

ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Feb 14, 2024 | 10:16 AM

Share

ಬೆಂಗಳೂರು, ಫೆ.14: ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ (Driverless Metro) ರೈಲು ಬೆಂಗಳೂರು ತಲುಪಿದೆ. ಇಂದು ಬೆಳಿಗ್ಗೆ 3.30 ಕ್ಕೆ ಚೆನ್ನೈ ಬಂದರಿನಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ ರಹಿತ ನಮ್ಮ ಮೆಟ್ರೋ ರೈಲು (Namma Metro) ಬಂದು ತಲುಪಿದೆ. ಆರು ಬೋಗಿಗಳನ್ನು ಟ್ರೇಲರ್‌ಗಳ ಮೂಲಕ ಸಾಗಿಸಲಾಗಿದೆ. ಈ ಚಾಲಕ ರಹಿತ ರೈಲು ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ನಲ್ಲಿ ಸಂಚರಿಸಲಿದೆ. ಪ್ರತಿ ಕೋಚ್ 38.7 ಮೆಟ್ರಿಕ್ ಟನ್ ತೂಕವಿದೆ.

ಜನವರಿ 24 ರಂದು ಶಾಂಘೈ ಬಂದರಿನಿಂದ ಸಮುದ್ರ ಮಾರ್ಗವಾಗಿ ಕಳುಹಿಸಲಾದ ಮೆಟ್ರೋ ಟ್ರೈನ್ ಫೆಬ್ರವರಿ 6 ರಂದು ಚೀನಾದಿಂದ ಚೆನ್ನೈ ಬಂದರಿಗೆ ಬಂದು ತಲುಪಿತ್ತು. ಬಳಿಕ ಕಸ್ಟಮ್ಸ್ ಕ್ಲಿಯರೆನ್ಸ್ ನಂತರ, ಈ ರೈಲನ್ನು ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತರಲಾಗಿದೆ. ಚೀನಾ-ಮಾಲೀಕತ್ವದ ಸಿಆರ್‌ಆರ್‌ಸಿ ನಾನ್‌ಜಿಂಗ್ ಪುಜೆನ್ ಕಂ. ಲಿಮಿಟೆಡ್‌ನಿಂದ ತಯಾರಿಸಲ್ಪಟ್ಟ ಈ ರೈಲು, ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ಗೆ ಪ್ರಾಯೋಗಿಕ ಸಂಚಾರ ನಡೆಸುತ್ತದೆ.

ಇದನ್ನೂ ಓದಿ: ಚೀನಾದಿಂದ ಬೆಂಗಳೂರಿನತ್ತ ಹೊರಟ ಚಾಲಕ ರಹಿತ ಮೆಟ್ರೋ, ಹೊಸ ಇತಿಹಾಸ ರಚಿಸಲು ಹಳದಿ ಕಾರಿಡಾರ್ ಸಜ್ಜು

ಚಾಲಕ ಇಲ್ಲದಿದ್ದರೂ ಈಗಾಗಲೇ ಅಳವಡಿಸಲಾದ ಪ್ರೋಗ್ರಾಂ ಆಧಾರದ ಮೇಲೆ ರೈಲು ಸಂಚರಿಸಲಿದೆ. ರೈಲಿನ ಸಂಚಾರವನ್ನು ಕಂಟ್ರೋಲ್‌ ರೂಮ್​ನಲ್ಲಿ ನಿಗಾ ವಹಿಸಲಾಗುತ್ತದೆ. ಚಾಲಕ ಇಲ್ಲದೇ ಈ ಮೆಟ್ರೋ ಗಂಟೆಗೆ 80 ಕಿ.ಮೀ. ವೇಗದಲ್ಲಿ ಚಲಿಸಲಿದೆ. 25 ಕೆವಿ ಸಾಮರ್ಥ್ಯದ ವಿದ್ಯುತ್‌ ಸಹಾಯದಿಂದ ಸಂಚರಿಸುತ್ತದೆ. ಸಿಸಿಟಿವಿ ಕ್ಯಾಮೆರಾಗಳನ್ನೂ ಬೋಗಿಗಳಲ್ಲಿ ಅಳವಡಿಸಲಾಗಿದೆ. ಇನ್ನು ಸಂಚಾರದಲ್ಲಿ ಸಮಸ್ಯೆ ಉಂಟಾದರೆ ತಕ್ಷಣ ಓಸಿಸಿಗೆ ಸಂದೇಶ ರವಾನೆ ಆಗಲಿದೆ. ಆಗ ತಕ್ಷಣ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತೆ.

ಬೆಂಗಳೂರು ತಲುಪಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:15 am, Wed, 14 February 24

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!