AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಹಳಿಗಿಳಿಯಲಿದೆ ಚಾಲಕ ರಹಿತ ಮೆಟ್ರೋ ರೈಲು: ಸಿಗ್ನಲಿಂಗ್ ಟೆಸ್ಟ್ ಜೂನ್ 7ರಿಂದ ಶುರು

Driverless Metro train: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಬೇಕಾಗಿರುವ ಎಲ್ಲ ಮೂಲಸೌಕರ್ಯ ಸಿದ್ಧವಾಗಿದೆ. ಜೂನ್ 7ರಿಂದ ಸಿಗ್ನಲಿಂಗ್ ಟೆಸ್ಟ್ ಕೂಡ ನಡೆಯಲಿದ್ದು, ಚಾಲಕ ರಹಿತ ಮೆಟ್ರೋ ರೈಲು ಹಳಿಗಿಳಿಯಲು ಕ್ಷಣಗಣನೆ ಆರಂಭವಾಗಿದೆ. ಆದರೆ, ಚೀನಾದ ಕಂಪನಿಯಿಂದ ರೈಲುಗಳ ಪೂರೈಕೆ ವಿಳಂಬವಾಗುತ್ತಿರುವ ಒಂದೇ ಕಾರಣದಿಂದಾಗಿ ಚಾಲಕ ರಹಿತ ಮೆಟ್ರೋ ರೈಲು ಸಂಚಾರ ವಿಳಂಬವಾಗುತ್ತಿದೆ.

ಶೀಘ್ರವೇ ಹಳಿಗಿಳಿಯಲಿದೆ ಚಾಲಕ ರಹಿತ ಮೆಟ್ರೋ ರೈಲು: ಸಿಗ್ನಲಿಂಗ್ ಟೆಸ್ಟ್ ಜೂನ್ 7ರಿಂದ ಶುರು
ಚಾಲಕ ರಹಿತ ಮೆಟ್ರೋ ರೈಲು
ಗಣಪತಿ ಶರ್ಮಾ
|

Updated on: May 30, 2024 | 8:58 AM

Share

ಬೆಂಗಳೂರು, ಮೇ 30: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು (Driverless Metro train) ಸಂಚಾರ ಶೀಘ್ರದಲ್ಲೇ ಸನ್ನಿಹಿತವಾಗಲಿದೆ. ಟೆಸ್ಟಿಂಗ್ ಕಾರ್ಯಗಳು ಈಗಾಗಲೇ ಆರಂಭವಾಗಿದ್ದು, ಸಿಗ್ನಲಿಂಗ್ ಟೆಸ್ಟ್ ಪ್ರಕ್ರಿಯೆಗಳು ಜೂನ್ 7ರಿಂದ ಶುರುವಾಗಲಿದೆ ಎಂದು ಬಿಎಂಆರ್​​ಸಿಎಲ್ (BMRCL) ತಿಳಿಸಿದೆ. ಸಿಗ್ನಲಿಂಗ್ ಟೆಸ್ಟ್, ಸಿಗ್ನಲ್ ಮತ್ತು ರೈಲಿನ ಸಂಯೋಜನೆ ಪರೀಕ್ಷೆಗಳು ಚಾಲಕ ರಹಿತ ರೈಲಿನ ಮುಖ್ಯ ಪರೀಕ್ಷೆಯ ಭಾಗವಾಗಿದೆ ಎಂದು ಮೆಟ್ರೋದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ (Yellow Line) ಡಿಸೆಂಬರ್​​​ನಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಚಾಲಕರಹಿತ ರೈಲು ಸಂಚಾರಕ್ಕೆ ಮೂಲಸೌಕರ್ಯ ಸಿದ್ಧ

ಪ್ರತಿ 20 ನಿಮಿಷಗಳಿಗೊಮ್ಮೆ ಚಾಲಕ ರಹಿತ ಮೆಟ್ರೋ ರೈಲು ಸಂಚಾರ ನಡೆಸಲು ಬಿಎಂಆರ್​​ಸಿಎಲ್ ಯೋಜನೆ ರೂಪಿಸುತ್ತಿದೆ. ಮೊದಲಿಗೆ ಒಟ್ಟು 57 ಏಕಮುಖ ಸಂಚಾರ ಮತ್ತು ನಂತರದಲ್ಲಿ ದ್ವಿಮುಖ ಸಂಚಾರಕ್ಕೆ ಪ್ಲ್ಯಾನ್ ಮಾಡಲಾಗುತ್ತಿದೆ. ಇದಕ್ಕಾಗಿ 18.82 ಕಿಮೀ ಎತ್ತರದ ಮಾರ್ಗದಲ್ಲಿ ಮತ್ತು ಅದರಲ್ಲಿ ಬರುವ ಎಲ್ಲಾ 16 ನಿಲ್ದಾಣಗಳಲ್ಲಿ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ. ಆದರೆ ಚೀನಾದ ಸಂಸ್ಥೆಯಾದ ಸಿಆರ್‌ಆರ್‌ಸಿ ನಾನ್‌ಜಿಂಗ್ ಪುಜೆನ್‌ನಿಂದ ಸಂವಹನ ಆಧಾರಿತ ರೈಲು ನಿಯಂತ್ರಣ (ಸಿಬಿಟಿಸಿ) ರೈಲುಗಳ ಪೂರೈಕೆಯಲ್ಲಿ ವಿಳಂಬದಿಂದಾಗಿ ಬಹುನಿರೀಕ್ಷಿತ ಚಾಲಕ ರಹಿತ ಮೆಟ್ರೋ ರೈಲು ಸಂಚಾರ ಆರಂಭ ಮುಂದೂಡಿಕೆಯಾಗುತ್ತಿದೆ.

ಆರಂಭಿಕ ಪರೀಕ್ಷೆಯೂ ಯಶಸ್ವಿ

ಬೊಮ್ಮಸಂದ್ರ ಮತ್ತು ಬೊಮ್ಮನಹಳ್ಳಿ ನಡುವೆ ಚಾಲಕ ರಹಿತ ರೈಲಿನ ಸರಳ ಪರೀಕ್ಷಾರ್ಥ ಸಂಚಾರವನ್ನು ರೈಲು ಬೆಂಗಳೂರಿಗೆ ಬಂದ ತಕ್ಷಣವೇ ನಡೆಸಲಾಗಿದೆ. ಬೊಮ್ಮನಹಳ್ಳಿ ಮತ್ತು ಆರ್‌ವಿ ರಸ್ತೆ ನಡುವಣ ಎನರ್ಜೈಸೇಷನ್ ಪ್ರಕ್ರಿಯೆ ಮೇ 20 ರಂದು ಪೂರ್ಣಗೊಂಡಿತು. ಈಗ ಪೂರ್ಣ ಸ್ಟ್ರೆಚ್‌ನಲ್ಲಿ ಮುಖ್ಯ ಪರೀಕ್ಷೆಯನ್ನು ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ಸಿಗ್ನಲ್ ಏಕೀಕರಣದ ಹೊರತಾಗಿ, ಮೂರನೇ ರೈಲು (ರೈಲು ಓಡಿಸಲು ವಿದ್ಯುತ್ ಪೂರೈಸುವ 750 ವೋಲ್ಟ್ ಟ್ರ್ಯಾಕ್) ಮತ್ತು ರೈಲು ಕಾರ್ಯಕ್ಷಮತೆ ಪರೀಕ್ಷೆಗಳನ್ನು ಕೂಡ ಮುಂದಿನ ದಿನಗಳಲ್ಲಿ ಮಾಡಲಾಗುತ್ತದೆ. ರೈಲನ್ನು ಆರಂಭದಲ್ಲಿ ನಿಧಾನಗತಿಯ ವೇಗದಲ್ಲಿ ಮತ್ತು ನಂತರ ಶಿಫಾರಸು ಮಾಡಿದ ವೇಗದಲ್ಲಿ ಓಡಿಸಲಾಗುತ್ತದೆ ಎಂದು ಮತ್ತೊಂದು ಮೂಲವು ತಿಳಿಸಿದೆ. ಬೆಂಗಳೂರು ಮೆಟ್ರೋಗೆ ರೈಲುಗಳನ್ನು ನಿಗದಿತ ರೀತಿಯಲ್ಲಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ರೋಬೋಟಿಕ್ ಆಟೊಮ್ಯಾಟಿಕ್ ಅಸೆಂಬ್ಲಿ ಲೈನ್​ಗಳನ್ನೂ ಸ್ಥಾಪಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಕೇರಳದ ಮಲಯಾಳಿ ಹುಡುಗರೀಗ ಚಾಲಕರು! ಕನ್ನಡ ಬಾರದವರ ಜತೆ ಕಂಡಕ್ಟರ್​ಗಳು ಕಂಗಾಲು

ಎರಡನೇ ಚಾಲಕ ರಹಿತ ರೈಲು ಆಗಸ್ಟ್‌ನಲ್ಲಿ, ಮುಂದಿನ ರೈಲು ಸೆಪ್ಟೆಂಬರ್‌ನಲ್ಲಿ ಮತ್ತು ಡಿಸೆಂಬರ್‌ನೊಳಗೆ ಒಟ್ಟು ಮೂರು ರೈಲುಗಳ ಆಗಮನವಾಗಲಿದೆ. ಒಟ್ಟು ಆರು ರೈಲುಗಳಲ್ಲಿ, ಐದರ ಸಂಚಾರ ಡಿಸೆಂಬರ್ ವೇಳೆಗೆ ಆರಂಭವಾಗಲಿದೆ. ಒಂದು ರೈಲನ್ನು ಬ್ಯಾಕಪ್ ಆಗಿ ಬಿಎಂಆರ್‌ಸಿಎಲ್ ಇರಿಸಿಕೊಳ್ಳಲಿದೆ ಎಂದು ಮತ್ತೊಂದು ಮೂಲವು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ