AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಬ್ಲೂ ಮತ್ತು ಪಿಂಕ್ ಲೈನ್​ನಲ್ಲಿ ಚಾಲಕ ರಹಿತ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ. ವಿಶೇಷ ಅಂದರೆ ಈ ಮೆಟ್ರೋ ಕೋಚ್​​ಗಳು ಬೆಂಗಳೂರಿನಲ್ಲೇ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಬರೋಬ್ಬರಿ 3400 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on: Sep 09, 2024 | 7:31 AM

Share

ಬೆಂಗಳೂರು, ಸೆಪ್ಟೆಂಬರ್ 9: ಬೆಂಗಳೂರಿನ ಬಹುನಿರೀಕ್ಷಿತ ಚಾಲಕ ರಹಿತ / ಡ್ರೈವರ್ ಲೆಸ್ ಮೆಟ್ರೋ ರೈಲುಗಳನ್ನು ಪಿಂಕ್ ಮತ್ತು ಬ್ಲೂ ಲೈನ್​ನಲ್ಲಿ ಟ್ರ್ಯಾಕ್​ಗಿಳಿಸಲು ಬಿಎಂಆರ್​​ಸಿಎಲ್ ಮುಂದಾಗಿದೆ. ಆದರೆ, ಈ ಬಾರಿ ವಿಶೇಷ ಅಂದರೆ ಈ ಎರಡು ಮಾರ್ಗಗಗಳಲ್ಲಿ ಸಂಚಾರ ಮಾಡಲಿರುವ ಮೆಟ್ರೋ ರೈಲುಗಳನ್ನು ಕೇಂದ್ರ ಸರ್ಕಾರ, ಬೆಂಗಳೂರಿನ ಬೆಮಲ್​ನಲ್ಲಿ ತಯಾರು ಮಾಡಿಸುತ್ತಿದೆ. ಈಗಾಗಲೇ ಈ ಒಪ್ಪಂದಕ್ಕೆ ಬಿಎಂಆರ್​​ಸಿಎಲ್ ಮತ್ತು ಬೆಮಲ್ ಮುಖ್ಯಸ್ಥರು ಸಹಿ ಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಡ್ರೈವರ್ ​​ಲೆಸ್ ರೈಲು ಕೋಚ್​ಗಳು ತಯಾರಾಗಲಿವೆ. 3177 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡ್ರೈವರ್ ಲೆಸ್ ರೈಲುಗಳು ನಿರ್ಮಾಣವಾಗುತ್ತಿದ್ದು, 53 ಟ್ರೈನ್ ಸೆಟ್​ಗಳು ಸೇರಿದಂತೆ 318 ಕೋಚ್​ಗಳನ್ನು ಬೆಮಲ್ ತಯಾರು ಮಾಡಲಿದೆ. ಕಾಳೇನ ಅಗ್ರಹಾರದಿಂದ ನಾಗವಾರ ( ಪಿಂಕ್‌ ಲೈನ್ ) 21 ಕಿಮೀ ಹಾಗೂ ಸಿಲ್ಕ್ ಬೋರ್ಡ್​​ನಿಂದ ವಿಮಾನ ನಿಲ್ದಾಣ (ಬ್ಲೂ ಲೈನ್) 55 ಕಿ.ಮೀ ಎರಡು ಮಾರ್ಗದಲ್ಲೂ ಡ್ರೈವರ್ ಲೆಸ್ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ ಎಂದು ಬಿಎಂಆರ್​​ಸಿಎಲ್ ಎಂಡಿ ಮಹೇಶ್ವರ ರಾವ್ ತಿಳಿಸಿದ್ದಾರೆ.

ಬೆಮೆಲ್​ನಲ್ಲೇ ಚಾಲಕರಹಿತ ಮೆಟ್ರೋ ತಯಾರಿಸಲು ಕಾರಣವೇನು?

ಈಗಾಗಲೇ ಆರ್​​ವಿ ರಸ್ತೆಯಿಂದ ಬೊಮ್ಮಸಂದ್ರ (ಹಳದಿ ಮಾರ್ಗಕ್ಕೆ) ಚೀನಾದಿಂದ ಡ್ರೈವರ್ ಲೆಸ್ ರೈಲುಗಳನ್ನು ತರಿಸಿಕೊಳ್ಳಲಾಗಿದೆ. ಚೀನಾದಿಂದ ಸರಿಯಾದ ಸಮಯಕ್ಕೆ ಆ ರೈಲುಗಳು ಬರಲಿಲ್ಲ, ಸಾಗಾಟ ತುಂಬಾ ವಿಳಂಬವಾಗಿತ್ತು. ಇನ್ನೂ ಆ ರೈಲುಗಳು ಟ್ರಯಲ್ ರನ್ ನಡೆಸುತ್ತಿವೆ. ಈ ವರ್ಷ ಅಥವಾ ಮುಂದಿನ ವರ್ಷ ಈ ಮಾರ್ಗಕ್ಕೆ ಚಾಲನೆ ಸಿಗಲಿದ್ದು, ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಕ್ಕೆ‌ ಮೆಟ್ರೋ ಕೋಚ್​ಗಳು ವಿಳಂಬವಾಗಬಾರದು ಎಂದು ಬೆಂಗಳೂರಿನ ಬೆಮಲ್​​ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಮ್ಮ ಬೆಂಗಳೂರಿನ ಬೆಮಲ್​​ನಲ್ಲಿ ಡ್ರೈವರ್ಲೆಸ್ ರೈಲುಗಳು ತಯಾರಾಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು