AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಬ್ಲೂ ಮತ್ತು ಪಿಂಕ್ ಲೈನ್​ನಲ್ಲಿ ಚಾಲಕ ರಹಿತ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ. ವಿಶೇಷ ಅಂದರೆ ಈ ಮೆಟ್ರೋ ಕೋಚ್​​ಗಳು ಬೆಂಗಳೂರಿನಲ್ಲೇ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಬರೋಬ್ಬರಿ 3400 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on: Sep 09, 2024 | 7:31 AM

Share

ಬೆಂಗಳೂರು, ಸೆಪ್ಟೆಂಬರ್ 9: ಬೆಂಗಳೂರಿನ ಬಹುನಿರೀಕ್ಷಿತ ಚಾಲಕ ರಹಿತ / ಡ್ರೈವರ್ ಲೆಸ್ ಮೆಟ್ರೋ ರೈಲುಗಳನ್ನು ಪಿಂಕ್ ಮತ್ತು ಬ್ಲೂ ಲೈನ್​ನಲ್ಲಿ ಟ್ರ್ಯಾಕ್​ಗಿಳಿಸಲು ಬಿಎಂಆರ್​​ಸಿಎಲ್ ಮುಂದಾಗಿದೆ. ಆದರೆ, ಈ ಬಾರಿ ವಿಶೇಷ ಅಂದರೆ ಈ ಎರಡು ಮಾರ್ಗಗಗಳಲ್ಲಿ ಸಂಚಾರ ಮಾಡಲಿರುವ ಮೆಟ್ರೋ ರೈಲುಗಳನ್ನು ಕೇಂದ್ರ ಸರ್ಕಾರ, ಬೆಂಗಳೂರಿನ ಬೆಮಲ್​ನಲ್ಲಿ ತಯಾರು ಮಾಡಿಸುತ್ತಿದೆ. ಈಗಾಗಲೇ ಈ ಒಪ್ಪಂದಕ್ಕೆ ಬಿಎಂಆರ್​​ಸಿಎಲ್ ಮತ್ತು ಬೆಮಲ್ ಮುಖ್ಯಸ್ಥರು ಸಹಿ ಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಡ್ರೈವರ್ ​​ಲೆಸ್ ರೈಲು ಕೋಚ್​ಗಳು ತಯಾರಾಗಲಿವೆ. 3177 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡ್ರೈವರ್ ಲೆಸ್ ರೈಲುಗಳು ನಿರ್ಮಾಣವಾಗುತ್ತಿದ್ದು, 53 ಟ್ರೈನ್ ಸೆಟ್​ಗಳು ಸೇರಿದಂತೆ 318 ಕೋಚ್​ಗಳನ್ನು ಬೆಮಲ್ ತಯಾರು ಮಾಡಲಿದೆ. ಕಾಳೇನ ಅಗ್ರಹಾರದಿಂದ ನಾಗವಾರ ( ಪಿಂಕ್‌ ಲೈನ್ ) 21 ಕಿಮೀ ಹಾಗೂ ಸಿಲ್ಕ್ ಬೋರ್ಡ್​​ನಿಂದ ವಿಮಾನ ನಿಲ್ದಾಣ (ಬ್ಲೂ ಲೈನ್) 55 ಕಿ.ಮೀ ಎರಡು ಮಾರ್ಗದಲ್ಲೂ ಡ್ರೈವರ್ ಲೆಸ್ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ ಎಂದು ಬಿಎಂಆರ್​​ಸಿಎಲ್ ಎಂಡಿ ಮಹೇಶ್ವರ ರಾವ್ ತಿಳಿಸಿದ್ದಾರೆ.

ಬೆಮೆಲ್​ನಲ್ಲೇ ಚಾಲಕರಹಿತ ಮೆಟ್ರೋ ತಯಾರಿಸಲು ಕಾರಣವೇನು?

ಈಗಾಗಲೇ ಆರ್​​ವಿ ರಸ್ತೆಯಿಂದ ಬೊಮ್ಮಸಂದ್ರ (ಹಳದಿ ಮಾರ್ಗಕ್ಕೆ) ಚೀನಾದಿಂದ ಡ್ರೈವರ್ ಲೆಸ್ ರೈಲುಗಳನ್ನು ತರಿಸಿಕೊಳ್ಳಲಾಗಿದೆ. ಚೀನಾದಿಂದ ಸರಿಯಾದ ಸಮಯಕ್ಕೆ ಆ ರೈಲುಗಳು ಬರಲಿಲ್ಲ, ಸಾಗಾಟ ತುಂಬಾ ವಿಳಂಬವಾಗಿತ್ತು. ಇನ್ನೂ ಆ ರೈಲುಗಳು ಟ್ರಯಲ್ ರನ್ ನಡೆಸುತ್ತಿವೆ. ಈ ವರ್ಷ ಅಥವಾ ಮುಂದಿನ ವರ್ಷ ಈ ಮಾರ್ಗಕ್ಕೆ ಚಾಲನೆ ಸಿಗಲಿದ್ದು, ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಕ್ಕೆ‌ ಮೆಟ್ರೋ ಕೋಚ್​ಗಳು ವಿಳಂಬವಾಗಬಾರದು ಎಂದು ಬೆಂಗಳೂರಿನ ಬೆಮಲ್​​ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಮ್ಮ ಬೆಂಗಳೂರಿನ ಬೆಮಲ್​​ನಲ್ಲಿ ಡ್ರೈವರ್ಲೆಸ್ ರೈಲುಗಳು ತಯಾರಾಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ