AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಬ್ಲೂ ಮತ್ತು ಪಿಂಕ್ ಲೈನ್​ನಲ್ಲಿ ಚಾಲಕ ರಹಿತ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ. ವಿಶೇಷ ಅಂದರೆ ಈ ಮೆಟ್ರೋ ಕೋಚ್​​ಗಳು ಬೆಂಗಳೂರಿನಲ್ಲೇ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಬರೋಬ್ಬರಿ 3400 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!
ನಮ್ಮ ಮೆಟ್ರೋ
Kiran Surya
| Edited By: |

Updated on: Sep 09, 2024 | 7:31 AM

Share

ಬೆಂಗಳೂರು, ಸೆಪ್ಟೆಂಬರ್ 9: ಬೆಂಗಳೂರಿನ ಬಹುನಿರೀಕ್ಷಿತ ಚಾಲಕ ರಹಿತ / ಡ್ರೈವರ್ ಲೆಸ್ ಮೆಟ್ರೋ ರೈಲುಗಳನ್ನು ಪಿಂಕ್ ಮತ್ತು ಬ್ಲೂ ಲೈನ್​ನಲ್ಲಿ ಟ್ರ್ಯಾಕ್​ಗಿಳಿಸಲು ಬಿಎಂಆರ್​​ಸಿಎಲ್ ಮುಂದಾಗಿದೆ. ಆದರೆ, ಈ ಬಾರಿ ವಿಶೇಷ ಅಂದರೆ ಈ ಎರಡು ಮಾರ್ಗಗಗಳಲ್ಲಿ ಸಂಚಾರ ಮಾಡಲಿರುವ ಮೆಟ್ರೋ ರೈಲುಗಳನ್ನು ಕೇಂದ್ರ ಸರ್ಕಾರ, ಬೆಂಗಳೂರಿನ ಬೆಮಲ್​ನಲ್ಲಿ ತಯಾರು ಮಾಡಿಸುತ್ತಿದೆ. ಈಗಾಗಲೇ ಈ ಒಪ್ಪಂದಕ್ಕೆ ಬಿಎಂಆರ್​​ಸಿಎಲ್ ಮತ್ತು ಬೆಮಲ್ ಮುಖ್ಯಸ್ಥರು ಸಹಿ ಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಡ್ರೈವರ್ ​​ಲೆಸ್ ರೈಲು ಕೋಚ್​ಗಳು ತಯಾರಾಗಲಿವೆ. 3177 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡ್ರೈವರ್ ಲೆಸ್ ರೈಲುಗಳು ನಿರ್ಮಾಣವಾಗುತ್ತಿದ್ದು, 53 ಟ್ರೈನ್ ಸೆಟ್​ಗಳು ಸೇರಿದಂತೆ 318 ಕೋಚ್​ಗಳನ್ನು ಬೆಮಲ್ ತಯಾರು ಮಾಡಲಿದೆ. ಕಾಳೇನ ಅಗ್ರಹಾರದಿಂದ ನಾಗವಾರ ( ಪಿಂಕ್‌ ಲೈನ್ ) 21 ಕಿಮೀ ಹಾಗೂ ಸಿಲ್ಕ್ ಬೋರ್ಡ್​​ನಿಂದ ವಿಮಾನ ನಿಲ್ದಾಣ (ಬ್ಲೂ ಲೈನ್) 55 ಕಿ.ಮೀ ಎರಡು ಮಾರ್ಗದಲ್ಲೂ ಡ್ರೈವರ್ ಲೆಸ್ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ ಎಂದು ಬಿಎಂಆರ್​​ಸಿಎಲ್ ಎಂಡಿ ಮಹೇಶ್ವರ ರಾವ್ ತಿಳಿಸಿದ್ದಾರೆ.

ಬೆಮೆಲ್​ನಲ್ಲೇ ಚಾಲಕರಹಿತ ಮೆಟ್ರೋ ತಯಾರಿಸಲು ಕಾರಣವೇನು?

ಈಗಾಗಲೇ ಆರ್​​ವಿ ರಸ್ತೆಯಿಂದ ಬೊಮ್ಮಸಂದ್ರ (ಹಳದಿ ಮಾರ್ಗಕ್ಕೆ) ಚೀನಾದಿಂದ ಡ್ರೈವರ್ ಲೆಸ್ ರೈಲುಗಳನ್ನು ತರಿಸಿಕೊಳ್ಳಲಾಗಿದೆ. ಚೀನಾದಿಂದ ಸರಿಯಾದ ಸಮಯಕ್ಕೆ ಆ ರೈಲುಗಳು ಬರಲಿಲ್ಲ, ಸಾಗಾಟ ತುಂಬಾ ವಿಳಂಬವಾಗಿತ್ತು. ಇನ್ನೂ ಆ ರೈಲುಗಳು ಟ್ರಯಲ್ ರನ್ ನಡೆಸುತ್ತಿವೆ. ಈ ವರ್ಷ ಅಥವಾ ಮುಂದಿನ ವರ್ಷ ಈ ಮಾರ್ಗಕ್ಕೆ ಚಾಲನೆ ಸಿಗಲಿದ್ದು, ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಕ್ಕೆ‌ ಮೆಟ್ರೋ ಕೋಚ್​ಗಳು ವಿಳಂಬವಾಗಬಾರದು ಎಂದು ಬೆಂಗಳೂರಿನ ಬೆಮಲ್​​ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಮ್ಮ ಬೆಂಗಳೂರಿನ ಬೆಮಲ್​​ನಲ್ಲಿ ಡ್ರೈವರ್ಲೆಸ್ ರೈಲುಗಳು ತಯಾರಾಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್
56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್