AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಬ್ಲೂ ಮತ್ತು ಪಿಂಕ್ ಲೈನ್​ನಲ್ಲಿ ಚಾಲಕ ರಹಿತ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ. ವಿಶೇಷ ಅಂದರೆ ಈ ಮೆಟ್ರೋ ಕೋಚ್​​ಗಳು ಬೆಂಗಳೂರಿನಲ್ಲೇ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಬರೋಬ್ಬರಿ 3400 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!
ನಮ್ಮ ಮೆಟ್ರೋ
Kiran Surya
| Edited By: |

Updated on: Sep 09, 2024 | 7:31 AM

Share

ಬೆಂಗಳೂರು, ಸೆಪ್ಟೆಂಬರ್ 9: ಬೆಂಗಳೂರಿನ ಬಹುನಿರೀಕ್ಷಿತ ಚಾಲಕ ರಹಿತ / ಡ್ರೈವರ್ ಲೆಸ್ ಮೆಟ್ರೋ ರೈಲುಗಳನ್ನು ಪಿಂಕ್ ಮತ್ತು ಬ್ಲೂ ಲೈನ್​ನಲ್ಲಿ ಟ್ರ್ಯಾಕ್​ಗಿಳಿಸಲು ಬಿಎಂಆರ್​​ಸಿಎಲ್ ಮುಂದಾಗಿದೆ. ಆದರೆ, ಈ ಬಾರಿ ವಿಶೇಷ ಅಂದರೆ ಈ ಎರಡು ಮಾರ್ಗಗಗಳಲ್ಲಿ ಸಂಚಾರ ಮಾಡಲಿರುವ ಮೆಟ್ರೋ ರೈಲುಗಳನ್ನು ಕೇಂದ್ರ ಸರ್ಕಾರ, ಬೆಂಗಳೂರಿನ ಬೆಮಲ್​ನಲ್ಲಿ ತಯಾರು ಮಾಡಿಸುತ್ತಿದೆ. ಈಗಾಗಲೇ ಈ ಒಪ್ಪಂದಕ್ಕೆ ಬಿಎಂಆರ್​​ಸಿಎಲ್ ಮತ್ತು ಬೆಮಲ್ ಮುಖ್ಯಸ್ಥರು ಸಹಿ ಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಡ್ರೈವರ್ ​​ಲೆಸ್ ರೈಲು ಕೋಚ್​ಗಳು ತಯಾರಾಗಲಿವೆ. 3177 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡ್ರೈವರ್ ಲೆಸ್ ರೈಲುಗಳು ನಿರ್ಮಾಣವಾಗುತ್ತಿದ್ದು, 53 ಟ್ರೈನ್ ಸೆಟ್​ಗಳು ಸೇರಿದಂತೆ 318 ಕೋಚ್​ಗಳನ್ನು ಬೆಮಲ್ ತಯಾರು ಮಾಡಲಿದೆ. ಕಾಳೇನ ಅಗ್ರಹಾರದಿಂದ ನಾಗವಾರ ( ಪಿಂಕ್‌ ಲೈನ್ ) 21 ಕಿಮೀ ಹಾಗೂ ಸಿಲ್ಕ್ ಬೋರ್ಡ್​​ನಿಂದ ವಿಮಾನ ನಿಲ್ದಾಣ (ಬ್ಲೂ ಲೈನ್) 55 ಕಿ.ಮೀ ಎರಡು ಮಾರ್ಗದಲ್ಲೂ ಡ್ರೈವರ್ ಲೆಸ್ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ ಎಂದು ಬಿಎಂಆರ್​​ಸಿಎಲ್ ಎಂಡಿ ಮಹೇಶ್ವರ ರಾವ್ ತಿಳಿಸಿದ್ದಾರೆ.

ಬೆಮೆಲ್​ನಲ್ಲೇ ಚಾಲಕರಹಿತ ಮೆಟ್ರೋ ತಯಾರಿಸಲು ಕಾರಣವೇನು?

ಈಗಾಗಲೇ ಆರ್​​ವಿ ರಸ್ತೆಯಿಂದ ಬೊಮ್ಮಸಂದ್ರ (ಹಳದಿ ಮಾರ್ಗಕ್ಕೆ) ಚೀನಾದಿಂದ ಡ್ರೈವರ್ ಲೆಸ್ ರೈಲುಗಳನ್ನು ತರಿಸಿಕೊಳ್ಳಲಾಗಿದೆ. ಚೀನಾದಿಂದ ಸರಿಯಾದ ಸಮಯಕ್ಕೆ ಆ ರೈಲುಗಳು ಬರಲಿಲ್ಲ, ಸಾಗಾಟ ತುಂಬಾ ವಿಳಂಬವಾಗಿತ್ತು. ಇನ್ನೂ ಆ ರೈಲುಗಳು ಟ್ರಯಲ್ ರನ್ ನಡೆಸುತ್ತಿವೆ. ಈ ವರ್ಷ ಅಥವಾ ಮುಂದಿನ ವರ್ಷ ಈ ಮಾರ್ಗಕ್ಕೆ ಚಾಲನೆ ಸಿಗಲಿದ್ದು, ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಕ್ಕೆ‌ ಮೆಟ್ರೋ ಕೋಚ್​ಗಳು ವಿಳಂಬವಾಗಬಾರದು ಎಂದು ಬೆಂಗಳೂರಿನ ಬೆಮಲ್​​ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಮ್ಮ ಬೆಂಗಳೂರಿನ ಬೆಮಲ್​​ನಲ್ಲಿ ಡ್ರೈವರ್ಲೆಸ್ ರೈಲುಗಳು ತಯಾರಾಗುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?