AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಸಿಎಂ ಸಿದ್ದರಾಮಯ್ಯಗೆ ಶಿಫಾರಸು: ಕೃಷ್ಣ ಬೈರೇಗೌಡ

161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಸಿಎಂ ಸಿದ್ದರಾಮಯ್ಯಗೆ ಶಿಫಾರಸು: ಕೃಷ್ಣ ಬೈರೇಗೌಡ
ಕೃಷ್ಣ ಭೈರೇಗೌಡ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 13, 2023 | 2:52 PM

Share

ಬೆಂಗಳೂರು ಸೆ.13: ರಾಜ್ಯದ 195 ತಾಲೂಕುಗಳಲ್ಲಿ ಬರ (Drought) ಪರಿಸ್ಥಿತಿ ಇದ್ದು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಶಿಫಾರಸು ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದರು. ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದಾರೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಗೆ ಅಧಿಸೂಚನೆ ಹೊರಡಿಸುತ್ತೇವೆ. ಬಳಿಕ 10 ದಿನದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.

ಮೊದಲ ಬರ ಘೋಷಣೆ ಮಾಡಬೇಕು, ಬಳಿಕ ಪರಿಹಾರ ಘೋಷಣೆ ಮಾಡಲಾಗುವುದು. ಮೊದಲು 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಿದ್ದೇವು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಿದ್ದೇವು ಎಂದು ತಿಳಿಸಿದರು.

ಈಗ ಎಲ್ಲ ಜಿಲ್ಲೆಗಳಿಂದ ಬೆಳೆ ಸಮೀಕ್ಷೆ ವರದಿ ಬಂದಿದೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ತನ್ನ ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಬರ ಘೋಷಣೆ ಮನವಿಗೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದೇವೆ. ಎಲ್ಲ ಬರ ಪೀಡಿತ ತಾಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದೇವೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೆಚ್ಚಿನ ಉದ್ಯೋಗ ನೀಡಬೇಕು ಅಂತ ಸೂಚನೆ ನೀಡಿದ್ದೇವೆ. ಮಲೆನಾಡು ಭಾಗದಲ್ಲಿ ಶೇ 40ಕ್ಕಿಂತ ಹೆಚ್ಚು ಮಳೆ ಕೊರತೆ ಇದೆ. ಕಾವೇರಿ ಜಲಾಯನ ಪ್ರದೇಶದಲ್ಲೂ ನೀರಿನ ಕೊರತೆ ಆಗಿದೆ. ದಕ್ಷಿಣ ಒಳನಾಡಿನಲ್ಲೂ ಸಾಕಷ್ಟು ಮಳೆ ಕೊರತೆ ಇದೆ. ಇನ್ನು ಬರ ಘೋಷಣೆ ಶಿಫಾರಸು ಪಟ್ಟಿ ಇದೇ ಅಂತಿಮ ಅಲ್ಲ. ಬಾಕಿ ಉಳಿದ 40 ತಾಲೂಕುಗಳಲ್ಲಿ ಕೂಡ 15 ದಿನಗಳ ಬಳಿಕ ಬೆಳೆ ಸಮೀಕ್ಷೆ ಮಾಡುತ್ತೇವೆ. ಅವು ಕೂಡ ಮಾರ್ಗಸೂಚಿಗಳ ಒಳಪಟ್ಟರೆ ಅವುಗಳನ್ನು ಮತ್ತೆ ಬರ ಪೀಡಿತ ತಾಲೂಕು ಅಂತ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:28 pm, Wed, 13 September 23

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More