AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಸಮೀಕ್ಷೆ: ನಾಳೆ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ: 12 ಜಿಲ್ಲೆಗಳಲ್ಲಿ ಅಧ್ಯಯನ

Drought survey: ರಾಜ್ಯದಲ್ಲಿ ಈ ಭಾರಿ ಮುಂಗಾರು ಮಳೆ ಇಲ್ಲದೇ ಬರಗಾಲ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಬರ ಸಮೀಕ್ಷೆಗಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಲಿದೆ. ನಾಳೆಯಿಂದ ಅ.9ರವರೆಗೆ ಒಟ್ಟು 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಆದರೆ ಪ್ರವಾಸಕ್ಕೂ ಮುನ್ನ ನಾಳೆ ಕೇಂದ್ರ ತಂಡದ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. 

ಬರ ಸಮೀಕ್ಷೆ: ನಾಳೆ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ: 12 ಜಿಲ್ಲೆಗಳಲ್ಲಿ ಅಧ್ಯಯನ
ಪ್ರಾತಿನಿಧಿಕ ಚಿತ್ರ
Anil Kalkere
| Edited By: |

Updated on:Oct 04, 2023 | 11:34 AM

Share

ಬೆಂಗಳೂರು, ಅಕ್ಟೋಬರ್​ 04: ರಾಜ್ಯದಲ್ಲಿ ಈ ಬಾರಿ ರೈತನ ಸಂಕಷ್ಟ ಹೇಳತೀರದಾಗಿದೆ. ಮುಂಗಾರು ಮಳೆ ಇಲ್ಲದೇ ಬರಗಾಲ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಬರ ಸಮೀಕ್ಷೆ (Drought survey) ಗಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಲಿದೆ. ನಾಳೆಯಿಂದ ಅ.9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಆದರೆ ಪ್ರವಾಸಕ್ಕೂ ಮುನ್ನ ನಾಳೆ ಕೇಂದ್ರ ತಂಡದ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದ್ದು, ಕೇಂದ್ರದ ಬಳಿ 6 ಸಾವಿರ ಕೋಟಿ ರೂ. ಪರಿಹಾರವನ್ನು ಕೇಳಿದೆ.

ಇದನ್ನೂ ಓದಿ: ಬರ ಪರಿಹಾರ, ಘೋಷಣೆ ಬಗ್ಗೆ ಮಾನದಂಡಗಳ ಸಮಸ್ಯೆ: ಕೇಂದ್ರದ ಬರ ನಿರ್ವಹಣೆ ಕೈಪಿಡಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್​​

161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು. ಬರ ಘೋಷಣೆ ಮನವಿಗೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದೇವೆ. ಎಲ್ಲ ಬರ ಪೀಡಿತ ತಾಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಈ ಮುಂಚೆ 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಲಾಗಿತ್ತು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಲಾಗಿತ್ತು.

ಬೆಳೆ ಬೆಳೆದು ಬದುಕು ಸಾಗಿಸಬೇಕಿದ್ದ ಅನ್ನದಾತ ಬರಡು ಭೂಮಿಯಲ್ಲಿ ಆಕಾಶ ನೋಡುತ್ತಾ ಕುಳಿತುಕೊಳ್ಳುವ ಭೀಕರ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆ ಜಿಲ್ಲೆಯಲ್ಲೂ ಬರದ ಆರ್ತನಾದ ಕೇಳಿಬರುತ್ತಿದೆ. ಸಾಲಸೋಲ ಮಾಡಿ ಬೆವರು ಸುರಿಸಿ ಬಿತ್ತನೆ ಮಾಡಿದ್ದ ಬೆಳೆಯನ್ನ ರೈತರೇ ತಮ್ಮ ಕೈಯಾರೆ ಕಿತ್ತು ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:33 am, Wed, 4 October 23

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ