AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಸಿ ನಗರ ಪೊಲೀಸರ ವಶದಲ್ಲಿದ್ದ ಡ್ರಗ್ಸ್ ಆರೋಪಿ, ವಿದೇಶಿ ಪ್ರಜೆ ಸಾವು

ಜೆಸಿ ನಗರ ಠಾಣೆ ಪೊಲೀಸರ ವಶದಲ್ಲಿದ್ದಾಗಲೇ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು, ದಾಳಿ ನಡೆಸಿ 5 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಆರೋಪಿಯನ್ನೂ ಅರೆಸ್ಟ್ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಾಗ ಆರೋಪಿ ನನಗೆ ಎದೆನೋವು ಮತ್ತು ಶೀತ ಇದೆ ಎಂದು ಹೇಳಿದ್ದ.

ಜೆಸಿ ನಗರ ಪೊಲೀಸರ ವಶದಲ್ಲಿದ್ದ ಡ್ರಗ್ಸ್ ಆರೋಪಿ, ವಿದೇಶಿ ಪ್ರಜೆ ಸಾವು
ಜೆಸಿ ನಗರ ಠಾಣೆ
TV9 Web
| Edited By: ಆಯೇಷಾ ಬಾನು|

Updated on: Aug 02, 2021 | 10:07 AM

Share

ಬೆಂಗಳೂರು: ಜೆಸಿ ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡ್ರಗ್ಸ್ ಕೇಸ್ ಸಂಬಂಧ ಆರೋಪಿಯನ್ನು ಪೊಲೀಸರು ಕರೆ ತಂದಿದ್ದರು. ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ವಿದೇಶಿ ಪ್ರಜೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ.

ಜೆಸಿ ನಗರ ಠಾಣೆ ಪೊಲೀಸರ ವಶದಲ್ಲಿದ್ದಾಗಲೇ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು, ದಾಳಿ ನಡೆಸಿ 5 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಆರೋಪಿಯನ್ನೂ ಅರೆಸ್ಟ್ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಾಗ ಆರೋಪಿ ನನಗೆ ಎದೆನೋವು ಮತ್ತು ಶೀತ ಇದೆ ಎಂದು ಹೇಳಿದ್ದ. ಹೀಗಾಗಿ ತಕ್ಷಣ ಚಿರಾಯು ಖಾಸಗಿ ಆಸ್ಪತ್ರೆಗೆ ಪೊಲೀಸರು ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ. ಇನ್ನೂ ಮೃತ ಆಫ್ರಿಕಾ ಪ್ರಜೆ ಗುರುತು ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಇದನ್ನೂ ಓದಿ: ವಿಕ್ಕಿ ಜೈನ್​ ತುಟಿಗೆ ಮುತ್ತಿಟ್ಟು ದುಬಾರಿ ಗಿಫ್ಟ್​ ನೀಡಿದ ಸುಶಾಂತ್ ಸಿಂಗ್​ ಮಾಜಿ ಪ್ರೇಯಸಿ ಅಂಕಿತಾ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ