AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ​​ವಿರುದ್ಧ ಸಮರ: ಬೆಂಗಳೂರಿನ ಅಂಚೆ ಕಚೇರಿ, ಕೋರಿಯರ್ ಏಜೆನ್ಸಿಯಲ್ಲಿ ಸಿಸಿಬಿ ​​ತಪಾಸಣೆ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ನಗರದಲ್ಲಿನ ಕೊರಿಯರ್ ಸೇವೆ ಮತ್ತು ಅಂಚೆ ಕಚೇರಿಗಳ ಮೇಲೆ ದಾಳಿ ಮಾಡಿದರು. ಸಂಪಂಗಿ ರಾಮನಗರದ ಕೊರಿಯರ್​ ಏಜೆನ್ಸಿಯಲ್ಲಿ ಸಿಸಿಬಿ ಮತ್ತು ಶ್ವಾನದಳ ಪಾರ್ಸೆಲ್​ಗಳ ಪರಿಶೀಲನೆ ನಡೆಸಿತು.

ಡ್ರಗ್ ​​ವಿರುದ್ಧ ಸಮರ: ಬೆಂಗಳೂರಿನ ಅಂಚೆ ಕಚೇರಿ, ಕೋರಿಯರ್ ಏಜೆನ್ಸಿಯಲ್ಲಿ ಸಿಸಿಬಿ ​​ತಪಾಸಣೆ
ಶ್ವಾನದಳ ಪರಿಶೀಲನೆ
Jagadisha B
| Updated By: ವಿವೇಕ ಬಿರಾದಾರ|

Updated on: Dec 07, 2024 | 3:07 PM

Share

ಬೆಂಗಳೂರು, ಡಿಸೆಂಬರ್​ 07: ಹೊಸ ವರ್ಷಾಚರಣೆ (New Year) ಹಿನ್ನೆಲೆಯಲ್ಲಿ ಡ್ರಗ್ (Drug)​ ಜಾಲದ ಮೇಲೆ ಬೆಂಗಳೂರು ನಗರ ಪೊಲೀಸರು (Bengaluru City Police) ಮತ್ತು ಸಿಸಿಬಿ (CCB) ಪೊಲೀಸರು ಕಣ್ಣಿಟ್ಟಿದ್ದಾರೆ. ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ಈಗಾಗಲೆ ಕೋಟ್ಯಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಶನಿವಾರ (ಡಿಸೆಂಬರ್​ 07) ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿದರು. ಬೆಂಗಳೂರಿನ ಕೊರಿಯರ್​ ಏಜೆನ್ಸಿ ಮತ್ತು ಅಂಚೆ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಂಪಂಗಿ ರಾಮನಗರದ ಕೊರಿಯರ್​ ಏಜೆನ್ಸಿಯಲ್ಲಿ ಸಿಸಿಬಿ ಮತ್ತು ಶ್ವಾನದಳ ಪಾರ್ಸೆಲ್​ಗಳ ಪರಿಶೀಲನೆ ನಡೆಸಿತು.

ಈ ವಿಚಾರವಾಗಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾತನಾಡಿ, ವಿದೇಶದಿಂದ ಬರುತ್ತಿದ್ದ ಪಾರ್ಸಲ್‌ಗಳಲ್ಲಿ ಡ್ರಗ್ಸ್​ ಪತ್ತೆಯಾಗಿತ್ತು. ಹೀಗಾಗಿ, ಒಟ್ಟು ಏಳು ಕಡೆ ಪರಿಶೀಲನೆ ನಡೆಸಲಾಗಿದೆ. ಹೊಸ ವರ್ಷ ಹಿನ್ನೆಲೆ ಡ್ರಗ್ಸ್ ಹೆಚ್ಚಾಗಿ ಪೂರೈಸುತ್ತಿರುವ ಮಾಹಿತಿ ಇದೆ. ತಪ್ಪು ವಿಳಾಸ ಕೊಟ್ಟು ಕೊರಿಯರ್​ಗಳಲ್ಲಿ ಸರಬರಾಜು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊರಿಯರ್​ ಕಚೇರಿ, ಅಂಚೆ ಕಚೇರಿಗಳಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿದರು.

10 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

ಮಂಗಳೂರು ಸಿಸಿಬಿ ಪೊಲೀಸರು ಕೂಡ ಶನಿವಾರ ಕಾರ್ಯಾಚರಣೆ ನಡೆಸಿದ್ದು, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಮ್​ಡಿಎಮ್​ಎ ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ದರ್ಶನ್ ಕೆ.ಜಿ (25), ನೈಜೀರಿಯಾ ಮೂಲದ ಚಿಕ ಜೋಸೇಫ್ ಇಝಿ (26) ಬಂಧಿತ ಆರೋಪಿಗಳು.

ಇತ್ತಿಚೆಗೆ ಮಾದಕವಸ್ತು ಮಾರಾಟ ಆರೋಪದಲ್ಲಿ ಬಜ್ಪೆ ಪೊಲೀಸರು ಇಕ್ಬಾಲ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಡ್ರಗ್ ಪೆಡ್ಲರ್​ಗಳ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಪಡೆದಿದ್ದರು. ಖಚಿತ ಮಾಹಿತಿ ಆಧರಿಸಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಬೆಂಗಳೂರಿನಲ್ಲಿದ್ದುಕೊಂಡು ಡ್ರಗ್ ಮಾರಾಟ, ಸಾಗಾಟ ಮಾಡುತ್ತಿದ್ದರು.

ಆರೋಪಿ ಚಿಕ ಜೋಸೆಫ್ ಇಝಿ 2023ರಲ್ಲಿ ಉದ್ಯೋಗ ವೀಸಾದಲ್ಲಿ ಭಾರತಕ್ಕೆ ಬಂದಿದ್ದನು. ಚಿಕ ಜೋಸೆಫ್ ಬೆಂಗಳೂರಿನ ಯಲಹಂಕದಲ್ಲಿ ಹೇರ್ ಕಟ್ಟಿಂಗ್ ಉದ್ಯೋಗ ಮಾಡಿಕೊಂಡಿದ್ದನು. ಈಗಾಗಲೇ ಈತನ ವಿರುದ್ಧ ಬೆಂಗಳೂರು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿ, ಬಂಧಿತನಾಗಿದ್ದನು. ನಾಲ್ಕು ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದನು. ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

ಸಿಸಿಬಿ ಪೊಲೀಸರು ಎಮ್​ಡಿಎಮ್​ಎ ಜೊತೆಗೆ ಕಾರು, 5 ಮೊಬೈಲ್ ಫೋನ್, ಡೆಬಿಟ್ ಕಾರ್ಡ್, ಏಳು ಸಿಮ್ ಕಾರ್ಡ್​​ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಒಟ್ಟು 18 ಲಕ್ಷ 25 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ