Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ

Siddhanth Kapoor: ಹಲಸೂರು ಇನ್ಸ್​ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರಿಂದ ಹೋಟೆಲ್ ಮೇಲೆ ದಾಳಿ ಮಾಡಲಾಗಿದೆ. ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು.

Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ
ಡ್ರಗ್ಸ್​ ಪಾರ್ಟಿ ಆಯೋಜನೆ ಮಾಡಿದ್ದ ಹೋಟೆಲ್ ಮೇಲೆ ದಾಳಿ ಮಾಡಿರುವ ಪೊಲೀಸ್
Follow us
| Updated By: Digi Tech Desk

Updated on:Jun 13, 2022 | 11:03 AM

ಬೆಂಗಳೂರು: ನಗರದ ಹೋಟೆಲ್​ನಲ್ಲಿ (bengaluru drug case) ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಡಿ ದಿ ಪಾರ್ಕ್​ ಫೈವ್​ಸ್ಟಾರ್​ ಹೋಟೆಲ್ (The Park Five Star Hotel)  ಮೇಲೆ ಹಲಸೂರು ಪೊಲೀಸರಿಂದ (Halasuru Police) ದಾಳಿ ಮಾಡಲಾಗಿದೆ. ಹಲಸೂರು ಬಳಿಯ GT ಮಾಲ್ ಬಳಿಯ ಪಾರ್ಕ್ ಹೋಟೆಲ್​ನ ಪಾರ್ಟಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್​ ಕಪೂರ್ (Bollywood Actor) ಭಾಗಿ ಶಂಕೆ ವ್ಯಕ್ತವಾಗಿದೆ. ರಾತ್ರಿ 12 ಗಂಟೆಗೆ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದು, ಹೋಟೆಲ್​ನಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್ ಪಾರ್ಟಿ (Drugs Party) ಆಯೋಜನೆ ಮಾಡಲಾಗಿತ್ತು ಎನ್ನಲಾಗುತ್ತಿದೆ. ಹಲಸೂರು ಇನ್ಸ್​ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರಿಂದ ಹೋಟೆಲ್ ಮೇಲೆ ದಾಳಿ ಮಾಡಲಾಗಿದೆ. ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು. ಪಾರ್ಟಿಯಲ್ಲಿ ಐವರು ಡ್ರಗ್ಸ್ ಸೇವನೆ ಮಾಡಿರುವುದು ಧೃಡಪಟ್ಟಿದ್ದು, ಐವರನ್ನ ವಶಕ್ಕೆ ಪಡೆದು ಎನ್‌ಡಿ ಪಿಎಸ್ ಆಕ್ಟ್ ಅಡಿ  ಹಲಸೂರು ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಡ್ರಗ್ಸ್ ಪಾರ್ಟಿಯಲ್ಲಿ ಬಾಲಿವುಡ್‌ ನಟ ಸಿದ್ಧಾಂತ್ ​​ಭಾಗಿ

ಬೆಂಗಳೂರಿನ ಹಲಸೂರಿನ ಹೋಟೆಲ್​​ವೊಂದರ ಡ್ರಗ್ಸ್​​​ ಪಾರ್ಟಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್​ ಕಪೂರ್​ ಭಾಗಿಯಾಗಿದ್ದು (siddhanth kapoor drug case), ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ. ಡಿಜೆಯಾಗಿರುವ ಸಿದ್ಧಾಂತ್​ ಕಪೂರ್​  ಸದ್ಯ ಹಲಸೂರು ಪೊಲೀಸರ ವಶದಲ್ಲಿದ್ದಾರೆ.

ಇದನ್ನೂ ಓದಿ: Palmistry: ನಿಮ್ಮ ಬೆರಳುಗಳಲ್ಲಿ ಮೂಡಿರುವ ಶಂಖ, ಚಕ್ರಗಳು ಹೇಳುತ್ತವೆ ನಿಮ್ಮ ಜೀವನದ ಭವಿಷ್ಯ

ಅರ್ಧ ಗಂಟೆ ಅಂತರದಲ್ಲಿ ಮೂರು ಕಡೆ ಸರಗಳ್ಳತನ

ಮೈಸೂರು: ನಗರದಲ್ಲಿ ಸರಗಳ್ಳತನ ಪ್ರಕರಣ ಹೆಚ್ಚಿದ್ದು, ಅರ್ಧ ಗಂಟೆ ಅಂತರದಲ್ಲಿ ಮೂರು ಕಡೆ ಸರಗಳ್ಳತನ ನಡೆದಿರುವಂತಹ ಘಟನೆ ನಡೆದಿದೆ. ನೆನ್ನೆ ಸಂಜೆ ಆರು ಗಂಟೆ ವೇಳೆಯಲ್ಲಿ ಕೃತ್ಯ ನಡೆದಿದ್ದು, ಮೊದಲ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೂಟಗಳ್ಳಿ ಫೈಓವರ್ ಬಳಿ, ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಳ್ಳತನವಾಗಿದೆ. ಮತ್ತೆರಡು ಘಟನೆಗಳು ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಧುವನ ಪಾರ್ಕ್ ಹಾಗೂ ನಾಡಿಗ ಭವನದ ಬಳಿ ನಡೆದಿದೆ. ಶಂಕಿತ ಸರಗಳ್ಳರು ಬೈಕ್​ನಲ್ಲಿ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:11 am, Mon, 13 June 22

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ