Sign In

By signing in or creating an account, you agree with Associated Broadcasting Company's Terms & Conditions and Privacy Policy.

Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ

Siddhanth Kapoor: ಹಲಸೂರು ಇನ್ಸ್​ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರಿಂದ ಹೋಟೆಲ್ ಮೇಲೆ ದಾಳಿ ಮಾಡಲಾಗಿದೆ. ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು.

Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ
ಡ್ರಗ್ಸ್​ ಪಾರ್ಟಿ ಆಯೋಜನೆ ಮಾಡಿದ್ದ ಹೋಟೆಲ್ ಮೇಲೆ ದಾಳಿ ಮಾಡಿರುವ ಪೊಲೀಸ್
Follow us
TV9 Web
| Updated By: Digi Tech Desk

Updated on:Jun 13, 2022 | 11:03 AM

ಬೆಂಗಳೂರು: ನಗರದ ಹೋಟೆಲ್​ನಲ್ಲಿ (bengaluru drug case) ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಡಿ ದಿ ಪಾರ್ಕ್​ ಫೈವ್​ಸ್ಟಾರ್​ ಹೋಟೆಲ್ (The Park Five Star Hotel)  ಮೇಲೆ ಹಲಸೂರು ಪೊಲೀಸರಿಂದ (Halasuru Police) ದಾಳಿ ಮಾಡಲಾಗಿದೆ. ಹಲಸೂರು ಬಳಿಯ GT ಮಾಲ್ ಬಳಿಯ ಪಾರ್ಕ್ ಹೋಟೆಲ್​ನ ಪಾರ್ಟಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್​ ಕಪೂರ್ (Bollywood Actor) ಭಾಗಿ ಶಂಕೆ ವ್ಯಕ್ತವಾಗಿದೆ. ರಾತ್ರಿ 12 ಗಂಟೆಗೆ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದು, ಹೋಟೆಲ್​ನಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್ ಪಾರ್ಟಿ (Drugs Party) ಆಯೋಜನೆ ಮಾಡಲಾಗಿತ್ತು ಎನ್ನಲಾಗುತ್ತಿದೆ. ಹಲಸೂರು ಇನ್ಸ್​ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರಿಂದ ಹೋಟೆಲ್ ಮೇಲೆ ದಾಳಿ ಮಾಡಲಾಗಿದೆ. ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು. ಪಾರ್ಟಿಯಲ್ಲಿ ಐವರು ಡ್ರಗ್ಸ್ ಸೇವನೆ ಮಾಡಿರುವುದು ಧೃಡಪಟ್ಟಿದ್ದು, ಐವರನ್ನ ವಶಕ್ಕೆ ಪಡೆದು ಎನ್‌ಡಿ ಪಿಎಸ್ ಆಕ್ಟ್ ಅಡಿ  ಹಲಸೂರು ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಡ್ರಗ್ಸ್ ಪಾರ್ಟಿಯಲ್ಲಿ ಬಾಲಿವುಡ್‌ ನಟ ಸಿದ್ಧಾಂತ್ ​​ಭಾಗಿ

ಬೆಂಗಳೂರಿನ ಹಲಸೂರಿನ ಹೋಟೆಲ್​​ವೊಂದರ ಡ್ರಗ್ಸ್​​​ ಪಾರ್ಟಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್​ ಕಪೂರ್​ ಭಾಗಿಯಾಗಿದ್ದು (siddhanth kapoor drug case), ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ. ಡಿಜೆಯಾಗಿರುವ ಸಿದ್ಧಾಂತ್​ ಕಪೂರ್​  ಸದ್ಯ ಹಲಸೂರು ಪೊಲೀಸರ ವಶದಲ್ಲಿದ್ದಾರೆ.

ಇದನ್ನೂ ಓದಿ: Palmistry: ನಿಮ್ಮ ಬೆರಳುಗಳಲ್ಲಿ ಮೂಡಿರುವ ಶಂಖ, ಚಕ್ರಗಳು ಹೇಳುತ್ತವೆ ನಿಮ್ಮ ಜೀವನದ ಭವಿಷ್ಯ

ಅರ್ಧ ಗಂಟೆ ಅಂತರದಲ್ಲಿ ಮೂರು ಕಡೆ ಸರಗಳ್ಳತನ

ಮೈಸೂರು: ನಗರದಲ್ಲಿ ಸರಗಳ್ಳತನ ಪ್ರಕರಣ ಹೆಚ್ಚಿದ್ದು, ಅರ್ಧ ಗಂಟೆ ಅಂತರದಲ್ಲಿ ಮೂರು ಕಡೆ ಸರಗಳ್ಳತನ ನಡೆದಿರುವಂತಹ ಘಟನೆ ನಡೆದಿದೆ. ನೆನ್ನೆ ಸಂಜೆ ಆರು ಗಂಟೆ ವೇಳೆಯಲ್ಲಿ ಕೃತ್ಯ ನಡೆದಿದ್ದು, ಮೊದಲ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೂಟಗಳ್ಳಿ ಫೈಓವರ್ ಬಳಿ, ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಳ್ಳತನವಾಗಿದೆ. ಮತ್ತೆರಡು ಘಟನೆಗಳು ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಧುವನ ಪಾರ್ಕ್ ಹಾಗೂ ನಾಡಿಗ ಭವನದ ಬಳಿ ನಡೆದಿದೆ. ಶಂಕಿತ ಸರಗಳ್ಳರು ಬೈಕ್​ನಲ್ಲಿ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:11 am, Mon, 13 June 22

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ