AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನೊಳಗೆ ಡ್ರಗ್ ಪೆಡ್ಲಿಂಗ್​, ವಿದ್ಯಾರ್ಥಿಯಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಡ್ರಗ್ ಭೇಟೆಗೆ ಇಳಿದ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಶಾಕ್​ ಆಗಿದ್ದು, ಪ್ರತಿಷ್ಠಿತ ಕಾಲೇಜುಗಳ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಂಧಿಸಲಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನೊಳಗೆ ಡ್ರಗ್ ಪೆಡ್ಲಿಂಗ್​, ವಿದ್ಯಾರ್ಥಿಯಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಆರೋಪಿ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 26, 2023 | 7:26 AM

Share

ಬೆಂಗಳೂರು,ಜು.26: ರಾಜ್ಯಾದ್ಯಂತ ಮಾದಕ ವಸ್ತು ಮಾರಾಟ ಹೆಚ್ಚಾಗಿರುವ ಹಿನ್ನಲೆ ಇತ್ತೀಚೆಗಷ್ಟೇ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇದರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಾಕೀತು ಮಾಡಿದ್ದರು. ಅದರ ಬೆನ್ನಲ್ಲೆ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಅಕ್ರಮಕ್ಕೆ ಬ್ರೇಕ್​ ಹಾಕಲು ಮುಂದಾಗಿದ್ದಾರೆ. ಅದರಂತೆ ಇದೀಗ ಡ್ರಗ್(Drug) ಭೇಟೆಗೆ ಇಳಿದ ಬೆಂಗಳೂರು(Bengaluru) ದಕ್ಷಿಣ ವಿಭಾಗದ ಪೊಲೀಸರು ಶಾಕ್​ ಆಗಿದ್ದಾರೆ. ಹೌದು ಪ್ರತಿಷ್ಠಿತ ಕಾಲೇಜುಗಳ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಂಧಿಸಲಾಗಿದೆ.

ಡ್ರಗ್ ಪೆಡ್ಲಿಂಗ್​ನಲ್ಲಿ ಭಾಗಿಯಾದ ಕೆಲ ಕಾಲೇಜಿನ ವಿದ್ಯಾರ್ಥಿಗಳು

ಮೈಸೂರು ರಸ್ತೆಯ ಕೆಲ ಕಾಲೇಜುಗಳಲ್ಲಿ ಡ್ರಗ್​ ಮಾರಾಟ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನಲೆ ದಾಳಿ ಮಾಡಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಯಿಂದಲೇ ಇತರ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟವಾಗುತ್ತಿರುವುದು ತಿಳಿದು ಬಂದಿದೆ. ಅದರಂತೆ ಕೇರಳ ಮೂಲದ ಪೆಡ್ಲರ್ ಆಗಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿ ಬಿಸ್ಟೀನ್ ರಾಯ್ ಎಂಬಾತ ಬಸವನಗುಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಇನ್ನು ಆರೋಪಿ ಬಂಧನದ ವೇಳೆ 20 ಲಕ್ಷ ರೂ ಮೌಲ್ಯದ ಡ್ರಗ್ ಪತ್ತೆಯಾಗಿದೆ.

ಇದನ್ನೂ ಓದಿ:ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು

ಎಂಡಿಎಂಎ ಡ್ರಗ್ ಮಾರಾಟ ಮಾಡುತಿದ್ದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು

ಇನ್ನು ತಮ್ಮದೇ ಟೀಮ್ ಹೊಂದಿದ್ದ ಬಂಧಿತ ಆರೋಪಿಯ ಗುಂಪು. ಪ್ರತಿಷ್ಠಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಹೊರಗಿನಿಂದ ಡ್ರಗ್ ತರಿಸಿಕೊಂಡು, ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಓರ್ವನನ್ನ ಬಂಧಿಸಿದ ಬಸವನಗುಡಿ ಪೊಲೀಸರು. ಆತನ ಬಂಧನದ ಬಳಿಕ ಉಳಿದ ಏಳು ಮಂದಿ ನಾಪತ್ತೆಯಾಗಿದ್ದು, ಇದೀಗ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ