AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನೊಳಗೆ ಡ್ರಗ್ ಪೆಡ್ಲಿಂಗ್​, ವಿದ್ಯಾರ್ಥಿಯಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಡ್ರಗ್ ಭೇಟೆಗೆ ಇಳಿದ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಶಾಕ್​ ಆಗಿದ್ದು, ಪ್ರತಿಷ್ಠಿತ ಕಾಲೇಜುಗಳ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಂಧಿಸಲಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನೊಳಗೆ ಡ್ರಗ್ ಪೆಡ್ಲಿಂಗ್​, ವಿದ್ಯಾರ್ಥಿಯಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಆರೋಪಿ
Jagadisha B
| Edited By: |

Updated on: Jul 26, 2023 | 7:26 AM

Share

ಬೆಂಗಳೂರು,ಜು.26: ರಾಜ್ಯಾದ್ಯಂತ ಮಾದಕ ವಸ್ತು ಮಾರಾಟ ಹೆಚ್ಚಾಗಿರುವ ಹಿನ್ನಲೆ ಇತ್ತೀಚೆಗಷ್ಟೇ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇದರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಾಕೀತು ಮಾಡಿದ್ದರು. ಅದರ ಬೆನ್ನಲ್ಲೆ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಅಕ್ರಮಕ್ಕೆ ಬ್ರೇಕ್​ ಹಾಕಲು ಮುಂದಾಗಿದ್ದಾರೆ. ಅದರಂತೆ ಇದೀಗ ಡ್ರಗ್(Drug) ಭೇಟೆಗೆ ಇಳಿದ ಬೆಂಗಳೂರು(Bengaluru) ದಕ್ಷಿಣ ವಿಭಾಗದ ಪೊಲೀಸರು ಶಾಕ್​ ಆಗಿದ್ದಾರೆ. ಹೌದು ಪ್ರತಿಷ್ಠಿತ ಕಾಲೇಜುಗಳ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಂಧಿಸಲಾಗಿದೆ.

ಡ್ರಗ್ ಪೆಡ್ಲಿಂಗ್​ನಲ್ಲಿ ಭಾಗಿಯಾದ ಕೆಲ ಕಾಲೇಜಿನ ವಿದ್ಯಾರ್ಥಿಗಳು

ಮೈಸೂರು ರಸ್ತೆಯ ಕೆಲ ಕಾಲೇಜುಗಳಲ್ಲಿ ಡ್ರಗ್​ ಮಾರಾಟ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನಲೆ ದಾಳಿ ಮಾಡಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಯಿಂದಲೇ ಇತರ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟವಾಗುತ್ತಿರುವುದು ತಿಳಿದು ಬಂದಿದೆ. ಅದರಂತೆ ಕೇರಳ ಮೂಲದ ಪೆಡ್ಲರ್ ಆಗಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿ ಬಿಸ್ಟೀನ್ ರಾಯ್ ಎಂಬಾತ ಬಸವನಗುಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಇನ್ನು ಆರೋಪಿ ಬಂಧನದ ವೇಳೆ 20 ಲಕ್ಷ ರೂ ಮೌಲ್ಯದ ಡ್ರಗ್ ಪತ್ತೆಯಾಗಿದೆ.

ಇದನ್ನೂ ಓದಿ:ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು

ಎಂಡಿಎಂಎ ಡ್ರಗ್ ಮಾರಾಟ ಮಾಡುತಿದ್ದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು

ಇನ್ನು ತಮ್ಮದೇ ಟೀಮ್ ಹೊಂದಿದ್ದ ಬಂಧಿತ ಆರೋಪಿಯ ಗುಂಪು. ಪ್ರತಿಷ್ಠಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಹೊರಗಿನಿಂದ ಡ್ರಗ್ ತರಿಸಿಕೊಂಡು, ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಓರ್ವನನ್ನ ಬಂಧಿಸಿದ ಬಸವನಗುಡಿ ಪೊಲೀಸರು. ಆತನ ಬಂಧನದ ಬಳಿಕ ಉಳಿದ ಏಳು ಮಂದಿ ನಾಪತ್ತೆಯಾಗಿದ್ದು, ಇದೀಗ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ