AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಂಧಿತ ಶಂಕಿತ ಐವರು ಉಗ್ರರಲ್ಲಿ ಓರ್ವನ ಪ್ರಿಯತಮೆಯಿಂದ ಡ್ರಗ್ಸ್​ ಸಪ್ಲೈ

ಬೆಂಗಳೂರಲ್ಲಿ ಬಂಧಿತ ಶಂಕಿತ ಐವರು ಉಗ್ರರ ಬಂಧನ ಪ್ರಕರಣ ಮೊತ್ತೊಂದು ತಿರುವು ಪಡೆದುಕೊಂಡಿದೆ. ಶಂಕಿತ ಉಗ್ರರು ನಗರದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದಲ್ಲದೇ ಡ್ರಗ್ಸ್ ಕೂಡ ಸಪ್ಲೈ ಮಾಡುತ್ತಿದ್ದರು ಎಂಬ ಅಂಶ ಸಿಸಿಬಿ ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರು: ಬಂಧಿತ ಶಂಕಿತ ಐವರು ಉಗ್ರರಲ್ಲಿ ಓರ್ವನ ಪ್ರಿಯತಮೆಯಿಂದ ಡ್ರಗ್ಸ್​ ಸಪ್ಲೈ
ಸಾಂದರ್ಭಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 26, 2023 | 11:29 AM

Share

ಬೆಂಗಳೂರು: ನಗರದಲ್ಲಿ ಬಂಧಿತ ಶಂಕಿತ ಐವರು ಉಗ್ರರ (Suspected Terrorists) ಬಂಧನ ಪ್ರಕರಣ ಮೊತ್ತೊಂದು ತಿರುವು ಪಡೆದುಕೊಂಡಿದೆ. ಶಂಕಿತ ಉಗ್ರರು ನಗರದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದಲ್ಲದೆ, ಡ್ರಗ್ಸ್ (Drugs) ಕೂಡ ಸಪ್ಲೈ ಮಾಡುತ್ತಿದ್ದರು ಎಂಬ ಅಂಶ ಸಿಸಿಬಿ (CCB) ತನಿಖೆ ವೇಳೆ ಬಯಲಾಗಿದೆ. ಬಂಧಿತರ ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಹಾಗೂ ಉಮರ್​ ಇಬ್ಬರು ಶಂಕಿತ ಉಗ್ರರರು ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು.

ಸಿಸಿಬಿ ಪೊಲೀಸರು ಶಂಕತಿ ಉಗ್ರ ಮುದಾಸಿರ್​​​ ಪ್ರಿಯತಮೆಯನ್ನು ವಿಚಾರಣೆಗೆ ಒಳಪಡಿಸಿದಾಗ ಈ ಅಂಶ ಬಯಲಾಗಿದೆ. ಹೌದು ಮುದಾಸಿರ್​ ಪ್ರಿಯತಮೆ ಕೈಯಲ್ಲಿ ಡ್ರಗ್ಸ್ ಇಟ್ಟು ನಾನು ಹೇಳಿದವರಿಗೆ ಇದನ್ನು ಕೊಡು ಎಂದು ಹೇಳಿ ಹೋಗುತ್ತಿದ್ದನಂತೆ. ಇದರಂತೆ ಪ್ರಿಯತಮ ಮುದಾಸಿರ್​ ಹೇಳಿದವರಿಗೆ ಗೆಳತಿ ಡ್ರಗ್ಸ್​ ಕೊಡುತ್ತಿದ್ದಳು. ಇನ್ನು ಮುದಾಸಿರ್​ ತಾನು ಬಂಧನವಾದ ದಿನವೂ ಗೆಳತಿಗೆ ಡ್ರಗ್ಸ್​​ ಕೊಟ್ಟು ಸಪ್ಲೈ ಮಾಡು ಎಂದಿದ್ದನಂತೆ.

ಇದನ್ನೂ ಓದಿ: ವಿದೇಶದಲ್ಲಿ ತಲೆಮರಿಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಗರ್ಲ್​ ಫ್ರೆಂಡ್ ಪತ್ತೆ ಹಚ್ಚಿ ಸಿಸಿಬಿ ಪೊಲೀಸರು

ಇನ್ನು ಐವರು ಶಂಕಿತ ಉಗ್ರರ ಕಸ್ಟಡಿ ಅವಧಿ ಇಂದು (ಜು.26) ಮುಕ್ತಾಯವಾಗುವ ಹಿನ್ನೆಲೆ ಸಿಸಿಬಿ ಪೊಲೀಸರು ಆರೋಪಿಗಳನ್ನು ಕೋರ್ಟ್​​ಗೆ ಹಾಜರು ಪಡಿಸಲಿದ್ದಾರೆ. ನ್ಯಾಯಾಲಯದ ಮುಂದೆ ಪ್ರಕರಣದ ಗಂಭೀರತೆಯನ್ನು ವಿವರಿಸಿ ಮತ್ತೆ 7 ದಿನ ಕಸ್ಟಡಿಗೆ ಕೇಳಲು ಸಿದ್ದತೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Wed, 26 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ