ನಾಗಾಲ್ಯಾಂಡ್​ನಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ, ಯುವತಿ ರಕ್ಷಣೆ ಮಾಡಲು ಹೋಗಿ ಯುವಕ ನೀರುಪಾಲು

ಫೆಬ್ರವರಿ‌ 8 ರಂದು ಜೆ.ಪಿ. ನಗರ ನೈವೇದ್ಯಂ‌ ಹೋಟೆಲ್ ನಲ್ಲಿ ಕಳ್ಳತನ ಮಾಡಿದ್ದರು. ರಾತ್ರಿ‌ ಹೊತ್ತು ಬಂದು 75 ಸಾವಿರ ಹಣ ದೋಚಿದ್ದರು. ಬಂಧಿತರಿಂದ 20 ಸಾವಿರ ನಗದು ಹಾಗೂ ಬೆಳ್ಳಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ.

ನಾಗಾಲ್ಯಾಂಡ್​ನಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ, ಯುವತಿ ರಕ್ಷಣೆ ಮಾಡಲು ಹೋಗಿ ಯುವಕ ನೀರುಪಾಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Feb 16, 2022 | 11:40 PM

ಬೆಂಗಳೂರು: ನಗರದ ದಕ್ಷಿಣ ವಿಭಾಗದಲ್ಲಿ ಕಳ್ಳತನ ಮಾಡಿ ಹಾವಳಿ ಮಾಡಿದ್ದ ಆಸಾಮಿ ಬಂಧಿಸಲಾಗಿದೆ. ಸುಬ್ರಹ್ಮಣ್ಯಪುರ ಪೊಲೀಸರಿಂದ ಆರೋಪಿ ಬಂಧನ ಮಾಡಲಾಗಿದೆ. ಕಾರ್ತಿಕ್ ಬಂಧಿತ ಆರೋಪಿ ಆಗಿದ್ದು, ಮತ್ತೋರ್ವ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಸದ್ಯ ಕಾರ್ತಿಕ್ ಆರೋಪಿ ಎಂಬಾತನನ್ನು ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಕೋಣನಕುಂಟೆ, ಜೆಪಿ ನಗರ, ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಆಸಾಮಿ ಬಂಧಿಸಲಾಗಿದೆ.

ಆರೋಪಿಗಳು ನಂದಿನಿ ಪಾರ್ಲರ್, ಹೋಟೆಲ್ ಗಳಲ್ಲಿ ಕಳ್ಳತನ ಮಾಡಿದ್ದರು. ಕದ್ದ ಬೈಕ್ ನಲ್ಲಿ ಬಂದು ಕಳ್ಳತನ ಮಾಡಿ ಪರಾರಿಯಾಗ್ತಿದ್ದರು. ಕುಡಿತದ ಚಟಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದರು. ಕುಡಿಯಲು ಹಣ ಮಾಡಲು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಫೆಬ್ರವರಿ‌ 8 ರಂದು ಜೆ.ಪಿ. ನಗರ ನೈವೇದ್ಯಂ‌ ಹೋಟೆಲ್ ನಲ್ಲಿ ಕಳ್ಳತನ ಮಾಡಿದ್ದರು. ರಾತ್ರಿ‌ ಹೊತ್ತು ಬಂದು 75 ಸಾವಿರ ಹಣ ದೋಚಿದ್ದರು. ಬಂಧಿತರಿಂದ 20 ಸಾವಿರ ನಗದು ಹಾಗೂ ಬೆಳ್ಳಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಕೂಡ ಕಳ್ಳತನ ಕೇಸ್ ನಲ್ಲಿ ಜೈಲು ಸೇರಿದ್ದ ಕಾರ್ತಿಕ್ ಇದೀಗ ಮತ್ತೆ ಬಂಧನವಾಗಿದೆ.

ನಾಗಾಲ್ಯಾಂಡ್: ಸುಮಾರು 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಸುಮಾರು 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ ಘಟನೆ ನಾಗಾಲ್ಯಾಂಡ್​ನ ದಿಮಾಪುರ ಎಂಬಲ್ಲಿ ನಡೆದಿದೆ. 5 ಕೋಟಿ ಮೌಲ್ಯದ ಯಾಬಾ ಮಾತ್ರೆಯನ್ನು ಜಪ್ತಿ ಮಾಡಲಾಗಿದೆ. ನಾಗಾಲ್ಯಾಂಡ್​ನ ದಿಮಾಪುರ ಪೊಲೀಸರ ಕಾರ್ಯಾಚರಣೆಯಲ್ಲಿ ಬೃಹತ್ ಮೊತ್ತದ ಮಾದಕ ವಸ್ತು ಜಪ್ತಿ ಮಾಡಲಾಗಿದೆ.

ಇತರ ಅಪರಾಧ, ಅಪಘಾತ ಸುದ್ದಿಗಳು

ಬೆಳಗಾವಿ: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಪ್ರಶಾಂತ್ (22), ಅಥಣಿ ಮೂಲದ ಶ್ರದ್ಧಾ ತೆಲಸಂಗಮಠ (20) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯನಗರ: ಸಾಲದ ಸುಳಿಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಜಮೀನಿನಲ್ಲಿ ಮರಕ್ಕೆ‌ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗರಗದ ನಾಗರಾಜ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದ ನಾಗರಾಜ, ಸಾಲಕ್ಕೆ ಸೋತು ಸಾವಿಗೆ ಶರಣಾಗಿದ್ದಾರೆ. ಕೂಟ್ಟೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಳ್ಳಾರಿ: ಕೆರೆ ನೋಡಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದ ಯುವತಿ ರಕ್ಷಣೆ ಮಾಡಲು ಹೋಗಿ ಯುವಕ ನೀರುಪಾಲು ಆದ ದುರ್ಘಟನೆ ನಡೆದಿದೆ. ಸಂಡೂರು ತಾಲೂಕಿನ ಹೊಸದರೋಜಿ ಕೆರೆಯಲ್ಲಿ ಮುಳುಗಿ ಬಿಬಿಎ ವಿದ್ಯಾರ್ಥಿ ಸಂದೀಪ್ ಸಾವನ್ನಪ್ಪಿದ್ದಾರೆ. ಯುವತಿಯನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರ್ಡೇಶ್ವರ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರಾದ ಮಾರುತಿ, ಸಾಗರದ ಅನಿಲ್ ಕುಮಾರ್, ರಾಮನಗರದ ಪುರುಷೋತ್ತಮ್​ನನ್ನು ಲೈಫ್​ ಗಾರ್ಡ್​ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ.

ಬೆಳಗಾವಿ: ಜಲಾಶಯದಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಸಂಭವಿಸಿದೆ. ಇಲ್ಲಿನ ಹಿಡಕಲ್ ಜಲಾಶಯದಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲಾಗಿದ್ದಾರೆ. ಯಮಕನಮರಡಿಯ ಜಿಹಾದ್​ ಶರೀಫ್​ (20) ದುರ್ಮರಣವನ್ನಪ್ಪಿದ್ದಾರೆ. ಫ್ರೆಂಡ್ಸ್ ಜೊತೆ ಫೋಟೋಶೂಟ್ ಮಾಡಲು ಬಂದಿದ್ದ ವಿದ್ಯಾರ್ಥಿ ನೀರುಪಾಲಾಗಿದ್ದಾರೆ. ಯಮಕನಮರಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime Updates: ಸೈನಿಕನ ತಾಯಿ ಕೊಲೆ ಪ್ರಕರಣದಲ್ಲಿ 18 ಜನರ ವಿರುದ್ಧ ಎಫ್​ಐಆರ್, ಬೆಂಗಳೂರಿನಲ್ಲಿ ಬ್ಯಾಟರಿ ಕದಿಯುತ್ತಿದ್ದ ದಂಪತಿ ಬಂಧನ

ಇದನ್ನೂ ಓದಿ: Crime Updates: ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಬಳಿ 1 ಕೆಜಿ ಗಾಂಜಾ ಪತ್ತೆ; ಆರೋಪಿಗಳ ಬಂಧನ

Published On - 11:35 pm, Wed, 16 February 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ