AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಂಭವಿಸಿದ ಕೆಲ ಅಪಘಾತ ಪ್ರಕರಣಗಳಲ್ಲಿ ಡ್ರಗ್ಸ್ ಕರಿನೆರಳು!

ಬೆಂಗಳೂರು ನಗರದಲ್ಲಿ ಇತ್ತಿಚೇಗಿನ ಕೆಲ ಅಪಘಾತ ಪ್ರಕರಣಗಳಲ್ಲಿ ಡ್ರಗ್ಸ್ ಕರಿನೆರಳು ಬಿದ್ದಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು, ಚಾಲಕರ ರಕ್ತ ಪರೀಕ್ಷೆ ಮಾಡಿಸುತ್ತಿದ್ದಾರೆ. ಒಂದು ವೇಳೆ ಡ್ರಗ್ಸ್ ಸೇವಿಸಿ ಅಪಘಾತ ಮಾಡಿದ್ದರೆ ಉದ್ದೇಶಪೂರ್ವಕವಲ್ಲದ ಕೊಲೆ ಎಂದು ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಕೇಸ್ ದಾಖಲಾಗುತ್ತದೆ.

ಬೆಂಗಳೂರಿನಲ್ಲಿ ಸಂಭವಿಸಿದ ಕೆಲ ಅಪಘಾತ ಪ್ರಕರಣಗಳಲ್ಲಿ ಡ್ರಗ್ಸ್ ಕರಿನೆರಳು!
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on: Dec 27, 2023 | 8:35 AM

Share

ಬೆಂಗಳೂರು, (ಡಿಸೆಂಬರ್ 27): ಪೊಲೀಸರು ಎಷ್ಟೇ ಜಾಗೃತಿ ಹಾಗೂ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದರೂ ಸಹ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಡ್ರಗ್ಸ್ (Drugs) ಜಾಲ ದೊಡ್ಡದಾಗಿ ಬೆಳೆಯುತ್ತಿದೆ. ವಿದೇಶ, ದೆಹಲಿ, ಮುಂಬೈ ಸೇರಿದಂತೆ ಇತರೆ ರಾಜ್ಯಗಳಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಆಗುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನೂ ಈ ಡ್ರಗ್ಸ್​ ಸೇವಿಸಿ ಅಪಘಾತಗಳು ಸಂಭವಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಬೆಂಗಳೂರು ನಗರದಲ್ಲಿ ಇತ್ತಿಚೇಗಿನ ಕೆಲ ಅಪಘಾತ ಪ್ರಕರಣಗಳಲ್ಲಿ ಡ್ರಗ್ಸ್ ಕರಿನೆರಳು ಬಿದ್ದಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು, ಚಾಲಕರ ರಕ್ತ ಪರೀಕ್ಷೆ ಮಾಡಿಸುತ್ತಿದ್ದಾರೆ. ಡ್ರಗ್ ಸೇವನೆ ಮಾಡಿ ಅಪಘಾತ ಮಾಡುತ್ತಿರುವ ಪ್ರಕರಣಗಳು ಹೆಚ್ಚಳವಾಗಿದೆ. ಇದರಿಂದ ಅಪಘಾತಕ್ಕೆ ಒಳಗಾದವರು ಹಾಗೂ ಅಪಘಾತ ಮಾಡಿದವರಿಬ್ಬರಿಗೂ ರಕ್ತ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.

ಇದನ್ನೂ ಓದಿ: ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, 30 ಜನರಿಗೆ ಗಾಯ

ಇಷ್ಟು ದಿನ ಅಪಘಾತ ಪ್ರಕರಣಗಳಲ್ಲಿ ಅಜಾಗರೂಕ ಹಾಗೂ ನಿರ್ಲಕ್ಷ್ಯ ಎಂದು ಐಪಿಸಿ ಸೆಕ್ಷನ್ 304(a) ಅಡಿಯಲ್ಲಿ ಪ್ರಕರಣ ದಾಖಲಾಗುತಿತ್ತು. ಆದ್ರೆ, ಇದೀಗ ರಕ್ತ ಪರೀಕ್ಷೆ ಮಾಡಿದಾಗ ಡ್ರಗ್ಸ್ ಸೇವಿಸಿರುವುದು ಕಂಡು ಬಂದ್ರೆ ಉದ್ದೇಶಪೂರ್ವಕವಲ್ಲದ ಕೊಲೆ ಎಂದು ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಕೇಸ್ ದಾಖಲಾಗುತ್ತದೆ.

ಇನ್ನು ವೀಲ್ಹಿಂಗ್ ಮಾಡಿ ಅದರಿಂದ ಯಾರಾದ್ರೂ ಸಾವನ್ನಪಿದರೆ 304 ಅಡಿಯಲ್ಲಿ ಪ್ರಕರಣ ದಾಖಲಾಗುತ್ತದೆ. ಈಗಾಗಲೇ ಒಟ್ಟು ಐಪಿಸಿ ಸೆಕ್ಷನ್ 304 ರ ಅಡಿಯಲ್ಲಿ 8 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ