AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 7 ಕೋಟಿ 80 ಲಕ್ಷ ಮೌಲ್ಯದ ಡ್ರಗ್ಸ್​​ ಜಪ್ತಿ, ಮಹಿಳೆಯರು ಸೇರಿ ಓರ್ವ ವಿದೇಶಿ ಪ್ರಜೆ ಅರೆಸ್ಟ್

ಸಿಸಿಬಿ ಪೊಲೀಸರು 1 ಕೆ.ಜಿ 4 ಗ್ರಾಂ MDMA, 8 ಕೆ.ಜಿ ಹ್ಯಾಶಿಸ್ ಆಯಿಲ್, 10 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ. ನಾಲ್ವರು ಮಹಿಳೆಯರು ಸೇರಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ 7 ಕೋಟಿ 80 ಲಕ್ಷ ಮೌಲ್ಯದ ಡ್ರಗ್ಸ್​​ ಜಪ್ತಿ, ಮಹಿಳೆಯರು ಸೇರಿ ಓರ್ವ ವಿದೇಶಿ ಪ್ರಜೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 27, 2022 | 12:50 PM

Share

ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ 80 ಲಕ್ಷ ಮೌಲ್ಯದ ಡ್ರಗ್ಸ್​​ ಜಪ್ತಿ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿ ನಾಲ್ವರು ಮಹಿಳೆಯರು ಸೇರಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು 1 ಕೆ.ಜಿ 4 ಗ್ರಾಂ MDMA, 8 ಕೆ.ಜಿ ಹ್ಯಾಶಿಸ್ ಆಯಿಲ್, 10 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ. ವಿವೇಕನಗರ ಪೊಲೀಸರು ಜೂನ್​ 24ರಂದು ಡಿಜೆಯೊಬ್ಬನನ್ನು ಬಂಧಿಸಿದ್ದರು. ಬಳಿಕ ಡ್ರಗ್ಸ್​​ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ಆಂಧ್ರದ ಚಿಂತಪಲ್ಲಿಯಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಪೆಡ್ಲರ್ಸ್​​ಗೆ ಆರೋಪಿಗಳು ಗಾಂಜಾ ನೀಡ್ತಿದ್ದರು. ಡ್ರಗ್ಸ್​ ನೀಡಿ ನಾಲ್ವರು ಮಹಿಳೆಯರು ವಾಪಾಸಾಗುತ್ತಿದ್ದರು. ಈ ವೇಳೆ ಸಿಸಿಬಿ ಪೊಲೀಸರು ನಾಲ್ವರು ಮಹಿಳೆಯರು ಸೇರಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ.

ಕಿಡ್ನ್ಯಾಪ್ ಮಾಡಿ ಹಣ ಪಡೆದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಸಂಪಿಗೇಹಳ್ಳಿಯಲ್ಲಿ ಉದ್ಯಮಿ ಪುತ್ರನನ್ನು ಅಪಹರಿಸಿ ಹಣ ಪಡೆದಿದ್ದ ಗ್ಯಾಂಗ್ ಅರೆಸ್ಟ್ ಮಾಡಲಾಗಿದೆ. ಸೆ.2ರಂದು ಬೆಳಗಿನ ಜಾವ ಉದ್ಯಮಿ ಮನೆಗೆ ನುಗ್ಗಿ 14 ವರ್ಷದ ಬಾಲಕನನ್ನು ಸುನಿಲ್ ಕುಮಾರ್ ಮತ್ತು ನಾಗೇಶ್ ಎಂಬುವವರು ಕಿಡ್ನ್ಯಾಪ್​ ಮಾಡಿ ಉದ್ಯಮಿಯ ಕಾರನ್ನೇ ಬಳಸಿ ಮಗು ಸಮೇತ ಎಸ್ಕೇಪ್ ಆಗಿದ್ದರು. ಬಳಿಕ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಇದಕ್ಕೆ ಒಪ್ಪಿದ ತಂದೆ ಅಪಹರಣಕಾರರಿಗೆ ₹15 ಲಕ್ಷ ನೀಡಿ ಸ್ಥಳದಲ್ಲೇ ಕಾರು ನಿಲ್ಲಿಸಿ ಮಗುವನ್ನು ಮನೆಗೆ ಕರೆ ತಂದಿದ್ದರು. ಬಳಿಕ ಟೆಕ್ನಿಕಲ್ ಮಾಹಿತಿ ಆಧರಿಸಿ ಪೊಲೀಸರು ಕಾರು ಪತ್ತೆ ಹಚ್ಚಿ ಖದೀಮರನ್ನು ಬಂಧಿಸಿದ್ದಾರೆ. ಬಂಧಿತರಿಂದ 9.69 ಲಕ್ಷ ನಗದು, ಕೆಟಿಎಂ ಬೈಕ್, ಕ್ಯಾಮರಾ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಈ ಗ್ರಾಮದಲ್ಲಿ ಪ್ರತಿದಿನ ಪ್ರತಿಯೊಬ್ಬರು ಒಂದೂವರೆ ಗಂಟೆ ಮೊಬೈಲ್ ಆಫ್ ಮಾಡ್ಬೇಕು, ಏನಿದು ಲಾಜಿಕ್..?

ಎಂಟು ತಿಂಗಳ ಹಿಂದೆ ಉದ್ಯಮಿ ಮನೆಯ ಕೆಲಸಕ್ಕೆ ಬಂದಿದ್ದ ಆರೋಪಿ, ಈ ವೇಳೆ ಮನೆಯ ಶ್ರೀಮಂತಿಕೆ ಕಂಡು ಕಿಡ್ನ್ಯಾಪ್ ಮಾಡಲು ಹೊಂಚು ಹಾಕಿದ್ದ. ಗೆಳೆಯನೊಂದಿಗೆ ಕೂಡಿ ಕಿಡ್ನಾಪ್ ಪ್ಲ್ಯಾನ್ ಮಾಡಿದ್ದ. ಮನೆ ಬಳಿ ಬಂದು ಹಲವು ದಿನ ವಾಚ್ ಮಾಡಿ ನಂತರ ಕೃತ್ಯ ಎಸಗಿದ್ದಾನೆ. ಬಿಕಾಂ ವ್ಯಾಸಂಗ ಮಾಡುತ್ತಿರುವ ಸುನೀಲ್ ಕಿಡ್ನಾಪ್ ನಿಂದ ಬಂದ ಹಣದಲ್ಲಿ 50 ಸಾವಿರ ಕಾಲೇಜು ಫೀಸ್ ಪೇ ಮಾಡಿದ್ದ. ಉಳಿದ ಹಣದಲ್ಲಿ ಶೋಕಿಗೆ ಬೈಕ್, ಕ್ಯಾಮರ ಖರೀದಿಸಿದ್ದ. ಕಿಡ್ನಾಪ್ ನಡೆದ 20 ದಿನದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ