AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Police: ಪೊಲೀಸರೇ ಮದ್ಯ ಸೇವನೆ ಮಾಡಿದ್ದಾರೆಂದು ಮದ್ಯ ಸೇವಿಸಿದ್ದ ಇಬ್ಬರು ಯುವಕರಿಂದ ರಾದ್ಧಾಂತ

ಡ್ರಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಮಾಡಲು ಮುಂದಾದ ಕುಡುಕರು ಟ್ರಾಫಿಕ್ ಪೊಲೀಸರಿಗೇ ಟೆಸ್ಟಿಂಗ್ ಮಾಡಲು ಮುಂದಾದ ಘಟನೆ ಬೆಂಗಳೂರಿನ ಟ್ರಿನಿಟಿ ಸರ್ಕಲ್‌ನಲ್ಲಿ ಬುಧವಾರ ತಡರಾತ್ರಿ ನಡೆದಿದೆ.

Bangalore Police: ಪೊಲೀಸರೇ ಮದ್ಯ ಸೇವನೆ ಮಾಡಿದ್ದಾರೆಂದು ಮದ್ಯ ಸೇವಿಸಿದ್ದ ಇಬ್ಬರು ಯುವಕರಿಂದ ರಾದ್ಧಾಂತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 30, 2021 | 8:09 AM

Share

ಬೆಂಗಳೂರು: ಪೊಲೀಸರೇ ಮದ್ಯ ಸೇವಿಸಿದ್ದಾರೆಂದು ರಾದ್ಧಾಂತ ಮಾಡಿದ ಸ್ವತಃ ಮದ್ಯ ಸೇವಿಸಿದ್ದ ಇಬ್ಬರು ಯುವಕರನ್ನು ಬೆಂಗಳೂರಿನ ಟ್ರಿನಿಟಿ ಸರ್ಕಲ್‌ನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡ್ರಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಮಾಡಲು ಮುಂದಾದ ಕುಡುಕರು ಟ್ರಾಫಿಕ್ ಪೊಲೀಸರಿಗೇ ಟೆಸ್ಟಿಂಗ್ ಮಾಡಲು ಮುಂದಾದ ಘಟನೆ ಬೆಂಗಳೂರಿನ ಟ್ರಿನಿಟಿ ಸರ್ಕಲ್‌ನಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮದ್ಯ ಸೇವಿಸಿ ರಾದ್ಧಾಂತ ಮಾಡುತ್ತಿದ್ದ ಇಬ್ಬರು ಯುವಕರು ಪೊಲೀಸರೇ ಮದ್ಯ ಸೇವನೆ ಮಾಡಿದ್ದಾರೆಂದು ಗೋಳಾಡಿದ್ದಾರೆ. ಮತ್ತೊಬ್ಬ ವ್ಯಕ್ತಿ ಮದ್ಯ ಸೇವನೆ ಮಾಡಿ ಕಾರು ಚಾಲನೆ ಮಾಡುತ್ತಿದ್ದ. ಆತ ಪೊಲೀಸ್ ತಪಾಸಣೆ ವೇಳೆ ಸಹಕರಿಸದೆ 1 ಗಂಟೆ ರಾದ್ಧಾಂತ ಮಾಡಿದ್ದಾನೆ. ಡ್ರಂಕ್ ಆ್ಯಂಡ್ ಡ್ರೈವ್ ಟೆಸ್ಟ್‌ನಲ್ಲಿ ಮದ್ಯ ಸೇವಿಸಿರುವುದು ಪತ್ತೆಯಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಕರೆದೊಯ್ದಿದ್ದಾರೆ.

ಘಟನೆಯ ವೃತ್ತಾಂತ ಹೀಗಿದೆ: ಬೆಂಗಳೂರಲ್ಲಿ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಪೊಲೀಸರಿಂದ ವಾಹನಗಳ ತಪಾಸಣೆ ನಡೆದಿತ್ತು. ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡುತ್ತಿರುವ ಪೊಲೀಸರು ಮದ್ಯಪಾನ ಮಾಡಿ ಬೈಕ್ ಓಡಿಸ್ತಿದ್ದವನ ಬೈಕ್ ಸೀಜ್ ಮಾಡಿದ್ದರು. ಅದಾದ ಬಳಿಕ ಒಂದು ಹಂತದಲ್ಲಿ ಟ್ರಾಫಿಕ್ ಪೊಲೀಸರಿಗೆ ಡ್ರಂಕ್ ಅಂಡ್ ಡ್ರೈವ್ ಟೆಸ್ಟ್ ಮಾಡಿಸಿದ ಕುಡುಕರು ಸ್ವತಃ ಪೊಲೀಸರಿಂದಲೇ ಆಲ್ಕೋಮೀಟರ್ ಊದಿಸಿದ್ದಾರೆ.

ಕುಡುಕರು ನಾವು ಕುಡಿದಿಲ್ಲ, ನೀವೇ ಕುಡಿದು ನಮಗೆ ಫೈನ್ ಹಾಕ್ತಿದ್ದಿರಾ ಎಂದು ರಂಪಾಟ ಮಾಡಿದ್ದಾರೆ. ಮೊದಲು ನೀವು ಆಲ್ಕೋಮೀಟರ್ ನಲ್ಲಿ ಊದಿ. ಊದಿದ ನಂತರ ನಮಗೆ ತೋರಿಸಿ ಎಂದು ರಂಪಾಟ ಮಾಡಿದ್ದಾರೆ. ಪೊಲೀಸರ ಆಲ್ಕೋಮೀಟರ್ ಅನ್ನೇ ಪಡೆದು ತಪಾಸಣೆ ಮಾಡಿದ್ದಾರೆ. ಪೊಲೀಸರೇ ಕುಡಿದುಕೊಂಡು ಬಂದು ಬೇರೆಯವರಿಗೆ ಅಡ್ಡ ಹಾಕ್ತಾರೆ ಎಂದೂ ಧಿಮಾಕು ಮಾಡಿದ್ದಾರೆ. ಡಿಡಿ ಕೇಸ್ ಹಾಕಿದ್ದಕ್ಕೆ ಪೊಲೀಸರ ಜೊತೆಗೆ ಪುಂಡಾಟ ಮಾಡಿದ್ದಾರೆ. ಕೊನೆಗೆ ಸವಾರರನ್ನು ಹೊಯ್ಸಳ ಕಾರಿನಲ್ಲಿ ಪೊಲೀಸರು ಕರೆದೊಯ್ದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೇಗೂರು ಬಳಿ ಸರಣಿ ಅಪಘಾತ, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮ ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತಗಳು ಸಂಭವಿಸಿವೆ. ಘಟನೆಯಲ್ಲಿ ಒಂದು ಎರಡು ಬಸ್, ಎರಡು ಲಾರಿ, ಒಂದು ಬುಲೆರೋ ನಡುವೆ ಅಪಘಾತಗಳಾಗಿವೆ. ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ. ಸರಣಿ ಅಪಘಾತ ಹಿನ್ನೆಲೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಶುಸಂಗೋಪನೆ ವೈದ್ಯಾಧಿಕಾರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ: ತುಮಕೂರು: ಮೃತಪಟ್ಟಿದ್ದ ಹಸುವಿಗೆ ಇನ್ಶುರೆನ್ಸ್ ಕ್ಲೈಮ್ ಮಾಡಲು ₹3,000 ಲಂಚ ಪಡೆದಿದ್ದ ಹಿನ್ನೆಲೆ ಪಶು ವಿಭಾಗದ ಉಪ ವ್ಯವಸ್ಥಾಪಕ ಡಾ.ವೈ.ಎಲ್ ದೇವರಾಜುಗೆ 4 ವರ್ಷ ಜೈಲು, 20,000 ರೂಪಾಯಿ ದಂಡ ವಿಧಿಸಿ, ತುಮಕೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ಸುಧೀಂದ್ರ ನಾಥ್ ಆದೇಶ ನೀಡಿದ್ದಾರೆ. ಮೃತ ಪಟ್ಟಿದ್ದ ಹಸುವಿಗೆ ಇನ್ಶುರೆನ್ಸ್ ಕ್ಲೈಮ್ ಮಾಡಲು 3000 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸರ್ಕಾರಿ ವಕೀಲ ಎನ್. ಬಸವರಾಜು ವಾದ ಮಂಡಿಸಿದ್ದರು.

Published On - 7:22 am, Thu, 30 December 21

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ