AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕುಡಿಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಮನೆ ಬಳಿ ಬಂದ ಪೊಲೀಸರು ಮಾದೇವನಿಗೆ ಬುದ್ದಿ ಹೇಳಿ ತೆರಳಿದ್ದಾರೆ. ಇದಾದ ಬಳಿಕ ಮನೆಯಿಂದ ತೆರಳಿದ ಮಾದೇವ ಸಾರ್ವಜನಿಕ ಸ್ಥಳದಲ್ಲೇ ಜನ ಓಡಾಡುತ್ತಿರುವುದನ್ನೂ ಲೆಕ್ಕಿಸದೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಕುಡಿಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 27, 2023 | 8:38 AM

Share

ಬೆಂಗಳೂರು: ಕುಡಿಯಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಜನರ ಓಡಾಟದ ನಡುವೆಯೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಬಾವಿಯ ಪಾಪರೆಡ್ಡಿಪಾಳ್ಯ ಸರ್ಕಲ್ ಬಳಿ ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದ ಮಾದೇವ(40) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 11 ಗಂಟೆ ವೇಳೆ ನೇಣಿಗೆ ಶರಣಾಗಿದ್ದಾರೆ.

ಬುದ್ಧಿವಾದ ಹೇಳಿದ್ದೆ ತಪ್ಪಾಯ್ತಾ?

15 ವರ್ಷದ ಹಿಂದೆ ಯಶೋಧಮ್ಮ ಎಂಬಾಕೆ ಜೊತೆ ವಿವಾಹವಾಗಿದ್ದ ಮಾದೇವ, ಪ್ರತಿ ದಿನ ಕುಡಿದು ಕಿರಿಕ್ ಮಾಡುತ್ತಿದ್ದ. ಗಂಡನ ಕುಡಿತದ ಗಲಾಟೆಗೆ ಹಲವು ಬಾರಿ ಯಶೋಧಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ(ಫೆ.26) ಬೆಳಗ್ಗೆ ಯಶೋಧಮ್ಮ tನ್ನ ಗಂಡನಿಗೆ 150 ರೂಪಾಯಿ ನೀಡಿದ್ದಾರೆ. ಆದ್ರೆ ಮಾದೇವ ಹೆಂಡತಿ ನೀಡಿದ್ದ ಹಣಕ್ಕೆ ಕಂಠ ಪೂರ್ತಿ ಕುಡಿದು ಸಂಜೆ ಮತ್ತೆ ಪತ್ನಿ ಜೊತೆ ಜಗಳವಾಡಿದ್ದಾರೆ. ಹೀಗಾಗಿ ಯಶೋಧಮ್ಮ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಮನೆ ಬಳಿ ಬಂದ ಪೊಲೀಸರು ಮಾದೇವನಿಗೆ ಬುದ್ದಿ ಹೇಳಿ ತೆರಳಿದ್ದಾರೆ. ಇದಾದ ಬಳಿಕ ಮನೆಯಿಂದ ತೆರಳಿದ ಮಾದೇವ ಸಾರ್ವಜನಿಕ ಸ್ಥಳದಲ್ಲೇ ಜನ ಓಡಾಡುತ್ತಿರುವುದನ್ನೂ ಲೆಕ್ಕಿಸದೆ ನೇರವಾಗಿ ಪಾಪರೆಡ್ಡಿ ಪಾಳ್ಯ ಸರ್ಕಲ್ ಬಳಿ ಬಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಮನಗರ: ಅಪರಿಚಿತ ಯುವಕನ ಕತ್ತು ಕೊಯ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ತಾನು ಧರಿಸಿದ್ದ ಪಂಚೆಯಿಂದಲೇ ನೇಣಿಗೆ ಶರಣಾಗಿದ್ದಾರೆ. ನಂತರ ಶವವನ್ನ ನೋಡಿ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ಹಿಂದೆ ಎರಡು ಮದುವೆಯಾಗಿದ್ದ ಮಾದೇವ, ಬಳಿಕ ಯಶೋಧಮ್ಮ ಜೊತೆ ವಿವಾಹವಾಗಿದ್ರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.‌ ಮಕ್ಕಳು ಊರಿನಲ್ಲಿ ಓದಿಕೊಂಡಿದ್ದಾರೆ. ಹೋಟೆಲ್ ಕೆಲಸ ಮಾಡಿಕೊಂಡು ಯಶೋಧಮ್ಮ ತನ್ನ ಗಂಡನನ್ನು ಸಾಕುತ್ತಿದ್ದಳು. ಸ್ಥಳಕ್ಕೆ ಅನ್ನಪೂರ್ಣೇಶ್ವರಿನಗರ ಪೊಲೀಸರು ಆಗಮಿಸಿದ್ದು ಶವವನ್ನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ