AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕುಡಿಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಮನೆ ಬಳಿ ಬಂದ ಪೊಲೀಸರು ಮಾದೇವನಿಗೆ ಬುದ್ದಿ ಹೇಳಿ ತೆರಳಿದ್ದಾರೆ. ಇದಾದ ಬಳಿಕ ಮನೆಯಿಂದ ತೆರಳಿದ ಮಾದೇವ ಸಾರ್ವಜನಿಕ ಸ್ಥಳದಲ್ಲೇ ಜನ ಓಡಾಡುತ್ತಿರುವುದನ್ನೂ ಲೆಕ್ಕಿಸದೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಕುಡಿಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Feb 27, 2023 | 8:38 AM

ಬೆಂಗಳೂರು: ಕುಡಿಯಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಜನರ ಓಡಾಟದ ನಡುವೆಯೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಬಾವಿಯ ಪಾಪರೆಡ್ಡಿಪಾಳ್ಯ ಸರ್ಕಲ್ ಬಳಿ ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದ ಮಾದೇವ(40) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 11 ಗಂಟೆ ವೇಳೆ ನೇಣಿಗೆ ಶರಣಾಗಿದ್ದಾರೆ.

ಬುದ್ಧಿವಾದ ಹೇಳಿದ್ದೆ ತಪ್ಪಾಯ್ತಾ?

15 ವರ್ಷದ ಹಿಂದೆ ಯಶೋಧಮ್ಮ ಎಂಬಾಕೆ ಜೊತೆ ವಿವಾಹವಾಗಿದ್ದ ಮಾದೇವ, ಪ್ರತಿ ದಿನ ಕುಡಿದು ಕಿರಿಕ್ ಮಾಡುತ್ತಿದ್ದ. ಗಂಡನ ಕುಡಿತದ ಗಲಾಟೆಗೆ ಹಲವು ಬಾರಿ ಯಶೋಧಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ(ಫೆ.26) ಬೆಳಗ್ಗೆ ಯಶೋಧಮ್ಮ tನ್ನ ಗಂಡನಿಗೆ 150 ರೂಪಾಯಿ ನೀಡಿದ್ದಾರೆ. ಆದ್ರೆ ಮಾದೇವ ಹೆಂಡತಿ ನೀಡಿದ್ದ ಹಣಕ್ಕೆ ಕಂಠ ಪೂರ್ತಿ ಕುಡಿದು ಸಂಜೆ ಮತ್ತೆ ಪತ್ನಿ ಜೊತೆ ಜಗಳವಾಡಿದ್ದಾರೆ. ಹೀಗಾಗಿ ಯಶೋಧಮ್ಮ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಮನೆ ಬಳಿ ಬಂದ ಪೊಲೀಸರು ಮಾದೇವನಿಗೆ ಬುದ್ದಿ ಹೇಳಿ ತೆರಳಿದ್ದಾರೆ. ಇದಾದ ಬಳಿಕ ಮನೆಯಿಂದ ತೆರಳಿದ ಮಾದೇವ ಸಾರ್ವಜನಿಕ ಸ್ಥಳದಲ್ಲೇ ಜನ ಓಡಾಡುತ್ತಿರುವುದನ್ನೂ ಲೆಕ್ಕಿಸದೆ ನೇರವಾಗಿ ಪಾಪರೆಡ್ಡಿ ಪಾಳ್ಯ ಸರ್ಕಲ್ ಬಳಿ ಬಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಮನಗರ: ಅಪರಿಚಿತ ಯುವಕನ ಕತ್ತು ಕೊಯ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ತಾನು ಧರಿಸಿದ್ದ ಪಂಚೆಯಿಂದಲೇ ನೇಣಿಗೆ ಶರಣಾಗಿದ್ದಾರೆ. ನಂತರ ಶವವನ್ನ ನೋಡಿ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ಹಿಂದೆ ಎರಡು ಮದುವೆಯಾಗಿದ್ದ ಮಾದೇವ, ಬಳಿಕ ಯಶೋಧಮ್ಮ ಜೊತೆ ವಿವಾಹವಾಗಿದ್ರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.‌ ಮಕ್ಕಳು ಊರಿನಲ್ಲಿ ಓದಿಕೊಂಡಿದ್ದಾರೆ. ಹೋಟೆಲ್ ಕೆಲಸ ಮಾಡಿಕೊಂಡು ಯಶೋಧಮ್ಮ ತನ್ನ ಗಂಡನನ್ನು ಸಾಕುತ್ತಿದ್ದಳು. ಸ್ಥಳಕ್ಕೆ ಅನ್ನಪೂರ್ಣೇಶ್ವರಿನಗರ ಪೊಲೀಸರು ಆಗಮಿಸಿದ್ದು ಶವವನ್ನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ