AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್ ಕೀ ವಿಚಾರಕ್ಕೆ ಸಹೋದ್ಯೋಗಿಗಳ ಮಧ್ಯೆ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ

ಮಾಲೀಕ ನೀಡಿದ್ದ ಬೈಕ್​ಗಾಗಿ ಸಹೋದ್ಯೋಗಿಗಳ ನಡುವೆ ಗಲಾಟೆಯಾಗಿದ್ದು, ಕೊನೆಗೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

ಬೆಂಗಳೂರು: ಬೈಕ್ ಕೀ ವಿಚಾರಕ್ಕೆ ಸಹೋದ್ಯೋಗಿಗಳ ಮಧ್ಯೆ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Jul 31, 2023 | 12:22 PM

Share

ಬೆಂಗಳೂರು, (ಜುಲೈ 31): ಬೈಕ್ ಕೀ ವಿಚಾರಕ್ಕೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ (Murder) ಅಂತ್ಯವಾಗಿದೆ. ಬೆಂಗಳೂರಿನ (Bengaluru) ಹೊಸಕೆರೆಹಳ್ಳಿಯಲ್ಲಿ ನಿನ್ನೆ(ಜುಲೈ 31) ರಾತ್ರಿ ಈ ಘಟನೆ ನಡೆದಿದೆ. ಚಾಕುವಿನಿಂದ ಇರಿದು ನೇಪಾಳ‌ ಮೂಲದ ತಿಲಕ್ ಎಂಬಾತನನ್ನು ಸಹೋದ್ಯೋಗಿ ಸಿದ್ದರಾಜು ಹತ್ಯೆ ಮಾಡಿದ್ದಾನೆ.  ನೇಪಾಳ‌ ಮೂಲದ ತಿಲಕ್​ ಹಾಗೂ ಮಂಡ್ಯ ಮೂಲದ ಸಿದ್ದರಾಜು ಒಂದೇ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಓಡಾಡಲು ಅಂಗಡಿ ಮಾಲೀಕ ಬೈಕ್ ​ನೀಡಿದ್ದ. ಆದ್ರೆ, ನಿನ್ನೆ ರಾತ್ರಿ ರೂಮ್​ನಲ್ಲಿ ಇಬ್ಬರೂ ಮದ್ಯಪಾನ ಮಾಡಿ ಬೈಕ್​ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ಸಿದ್ದರಾಜು, ತಿಲಕ್​ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಮೆಡಿಕಲ್ ಕಾಲೇಜ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಅನಾಥ ಶವಗಳ ಮೇಲೆ ನಡೆಯುತ್ತಿದ್ಯಾ ಹಣ ಮಾಡುವ ದಂಧೆ?

ಬೈಕ್ ಕೀ ನೀಡುವಂತೆ ತಿಲಕ್​ ಬಳಿ ಸಿದ್ದರಾಜು ಕೇಳಿದ್ದಾನೆ. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದ ಗಲಾಟೆಯಾಗಿ ತಿಲಕ್​, ಸಿದ್ದರಾಜುಗೆ ಕುಕ್ಕರ್​ನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಸಿದ್ದರಾಜು, ತಿಲಕ್​ಗೆ ಚಾಕುವಿನಿಂದ ಚುಚ್ಚಿದ್ದಾನೆ. ಪರಿಣಾಮ ಸಿದ್ದರಾಜು ಮೃತಪಟ್ಟಿದ್ದು, ಬಳಿಕ ಸಿದ್ದರಾಜು ಗಿರಿನಗರ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿದ್ದಾನೆ. ಈ ಬಗ್ಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಲಾರಿ ಹಿಂಬದಿಗೆ ಬೈಕ್ ಡಿಕ್ಕಿ-ಇಬ್ಬರು ಸಾವು

ಬೆಂಗಳೂರು, (ಜುಲೈ 31):ಚಲಿಸುತ್ತಿದ್ದ ಲಾರಿ ಹಿಂಬದಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್​ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕುಣಿಗಲ್ ಬೈ‌ಪಾಸ್‌ನಲ್ಲಿ ನಡೆದಿದೆ. ಬೈಕ್​ ಸವಾರರಾದ ವಿನೋದ್(32), ಪ್ರಕಾಶ್(29) ಮೃತ ಯುವಕರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:14 pm, Mon, 31 July 23

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ