AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dry Fruit Price Hike: ಇಸ್ರೇಲ್-ಇರಾನ್ ಸಂಘರ್ಷ, ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಡ್ರೈ ಫ್ರೂಟ್ಸ್

ಇಸ್ರೇಲ್-ಇರಾನ್ ಸಂಘರ್ಷದಿಂದ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಪೂರೈಕೆ ಸಮಸ್ಯೆ ಉಂಟಾಗುವ ಸಾಧ್ಯತೆಯಿದ್ದು, ಬೆಲೆ ಏರಿಕೆಯಾಗಲಿದೆ. ನಗರಕ್ಕೆ ಬರುವ ಹೆಚ್ಚಿನ ಡ್ರೈ ಫ್ರೂಟ್ಸ್‌ಗಳು, ವಿಶೇಷವಾಗಿ ಅಂಜೂರ, ಪಿಸ್ತಾ ಮತ್ತು ಖರ್ಜೂರ ಇರಾನ್‌ನಿಂದ ಆಮದಾಗುವುದೇ ಇದಕ್ಕೆ ಕಾರಣ. ರಂಜಾನ್ ಹಬ್ಬದ ಸಮಯದಲ್ಲಿ ಖರ್ಜೂರಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಸದ್ಯಕ್ಕೆ ದಾಸ್ತಾನು ಇವೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

Dry Fruit Price Hike: ಇಸ್ರೇಲ್-ಇರಾನ್ ಸಂಘರ್ಷ, ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಡ್ರೈ ಫ್ರೂಟ್ಸ್
ಸಾಂದರ್ಬಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on:Mar 03, 2026 | 9:26 AM

Share

ಬೆಂಗಳೂರು, ಮಾರ್ಚ್ 3: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ (Israel-Iran Conflict) ಪರಿಣಾಮ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ (Dry Fruit Price) ಏರಿಕೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ಪೂರೈಕೆ ಸಮಸ್ಯೆಯೂ ಎದುರಾಗಬಹುದು ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ. ನಗರಕ್ಕೆ ಆಮದಾಗುವ ಡ್ರೈ ಫ್ರೂಟ್ಸ್‌ಗಳಲ್ಲಿ ಹೆಚ್ಚಿನ ಪ್ರಮಾಣದ ವಸ್ತುಗಳು ಇರಾನ್‌ನಿಂದ ಬರುತ್ತವೆ. ಅಂಜೂರ, ಮಾಮ್ರಾ ಬಾದಾಮಿ, ಪಿಸ್ತಾ, ಪೈನ್ ಬೀಜಗಳ ಜೊತೆಗೆ ಮಜಾಫತಿ ಖರ್ಜೂರಗಳು ವಿಶೇಷವಾಗಿ ಹೆಚ್ಚು ಬೇಡಿಕೆಯಲ್ಲಿವೆ. ರಂಜಾನ್ ಸಮಯದಲ್ಲಿ ಮಜಫತಿ ಖರ್ಜೂರಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ ಎಂದು ಅವರು ಹೇಳಿದ್ದಾರೆ.

ಮಜಫತಿ ಖರ್ಜೂರಗಳು ಸಾಮಾನ್ಯವಾಗಿ ಪ್ರತಿ ಕೆಜಿಗೆ ಸುಮಾರು 300 ರೂ.ಗಳಂತೆ ಮಾರಾಟವಾಗುತ್ತವೆ. ರಂಜಾನ್ ವೇಳೆ ಇವುಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲಾಗುತ್ತದೆ ಎಂದು ರಸೆಲ್ ಮಾರುಕಟ್ಟೆ ಹಣ್ಣು ಮತ್ತು ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇದ್ರೀಸ್ ಚೌಧರಿ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ರಂಜಾನ್ ಹಬ್ಬದ ಹಿನ್ನೆಲೆ ನಗರದಲ್ಲಿ ಬಹುತೇಕ ವ್ಯಾಪಾರಿಗಳು ಈಗಾಗಲೇ ಸಾಕಷ್ಟು ಡ್ರೈ ಫ್ರೂಟ್ಸ್ ಸ್ಟಾಕ್ ಮಾಡಿಕೊಂಡಿದ್ದಾರೆ. ಹಬ್ಬದ ಕಾಲದಲ್ಲಿ ಮಾರಾಟ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ನಾವು ಮುಂಚಿತವಾಗಿ ಡ್ರೈ ಫ್ರೂಟ್ಸ್ ಸಂಗ್ರಹಿಸಿಡುತ್ತೇವೆ. ಆದ್ದರಿಂದ ಈದ್ ತನಕ ಯಾವುದೇ ಕೊರತೆ ಎದುರಾಗುವುದಿಲ್ಲ. ಆದರೆ ಯುದ್ಧ ಪರಿಸ್ಥಿತಿ ಮುಂದುವರಿದರೆ ಬಳಿಕ ಸಮಸ್ಯೆ ಗಂಭೀರವಾಗಬಹುದು ಎಂದು ಅವರು ಎಚ್ಚರಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.

ಬೆಂಗಳೂರಿನ ಹಲವೆಡೆ ಡ್ರೈ ಫ್ರೂಟ್ಸ್ ಬೆಲೆ ಏರಿಕೆ

ಬೆಂಗಳೂರಿನ ಕೆಲವು ವ್ಯಾಪಾರಿಗಳು ಈಗಾಗಲೇ ಬೆಲೆ ಏರಿಕೆ ಮಾಡಿದ್ದಾರೆ. ಪಿಸ್ತಾ ಬೆಲೆಯಲ್ಲಿ ಈಗಾಗಲೇ ಸುಮಾರು 200 ರೂ. ಏರಿಕೆಯಾಗಿದೆ. ಬೇಡಿಕೆ ಹೆಚ್ಚಿದ್ದು, ಸ್ಟಾಕ್ ಕಡಿಮೆ ಇರುವ ಕಾರಣ ದರ ಹೆಚ್ಚಿಸಬೇಕಾಯಿತು ಎಂದು ಶಿವಾಜಿನಗರದ ಕೆಎಚ್ ಮೇವಾ ಅಂಗಡಿಯ ಮಾಲೀಕ ಅಬ್ದುಲ್ ಹಮೀದ್ ತಿಳಿಸಿದ್ದಾಗಿಯೂ ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ಈಗ ಹೇಗಿದೆ ಡ್ರೈ ಫ್ರೂಟ್ಸ್ ದರ?

ಪ್ರಸ್ತುತ ಬೆಂಗಳೂರಿನ ಮಾರುಕಟ್ಟೆಯಲ್ಲಿ ಇರಾನ್‌ನಿಂದ ಆಮದು ಆಗುವ ಪಿಸ್ತಾ ಕೆಜಿಗೆ 1,800 ರೂ.ನಿಂದ 2,100 ರೂ.ಗಳವರೆಗೆ ಮಾರಾಟವಾಗುತ್ತಿದೆ. ಅಂಜೂರ ಸುಮಾರು 1,600 ರೂ., ಮಾಮ್ರಾ ಬಾದಾಮಿ 2,500 ರೂ., ಪೈನ್ ಬೀಜಗಳು 8,000 ರೂ.ಗಳ ದರದಲ್ಲಿ ಮಾರಾಟವಾಗುತ್ತಿವೆ.

ಇರಾನ್ ಕೇಸರಿಗೂ ಭಾರೀ ಬೇಡಿಕೆ

ಇರಾನಿನ ಕೇಸರಿಗೆ ಕೂಡ ಭಾರೀ ಬೇಡಿಕೆ ಇದೆ. ಜಗತ್ತಿನಲ್ಲೇ ಉತ್ತಮ ತಳಿಯ ಕೇಸರಿ ಎಂದು ಪರಿಗಣಿಸಲ್ಪಡುವ ಇರಾನಿನ ಕೇಸರಿ ಪ್ರಸ್ತುತ ಕೆಜಿಗೆ 2.5 ಲಕ್ಷ ರೂ.ನಿಂದ 3 ಲಕ್ಷ ರೂ. ದರ ಹೊಂದಿದೆ. ಮುಂದಿನ ಎರಡು ವಾರಗಳಲ್ಲಿ ಇದು 4 ಲಕ್ಷ ರೂ. ತಲುಪುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ.

ಡ್ರೈ ಫ್ರೂಟ್ಸ್ ಮಾತ್ರವಲ್ಲದೆ ಜಾಯಿಕಾಯಿ, ದಾಲ್ಚಿನ್ನಿ, ಸ್ಟಾರ್ ಸೋಂಪು ಸೇರಿದಂತೆ ಕೆಲವು ಮಸಾಲೆಗಳು ಕೂಡ ಇರಾನ್‌ನಿಂದಲೇ ಆಮದಾಗುತ್ತವೆ. ಇರಾನ್‌ನಲ್ಲಿ ವ್ಯಾಪಾರ ಮತ್ತು ಬಂದರುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾದರೆ, ಅಫ್ಘಾನಿಸ್ತಾನದಿಂದ ಬರುವ ಸರಕುಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೊಲ್ಲಿ ರಾಷ್ಟ್ರಗಳು, ಇರಾನ್​​ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು

ಒಟ್ಟಿನಲ್ಲಿ, ಇರಾನ್ ಇಸ್ರೇಲ್ ಸಂಘರ್ಷ ಬೆಂಗಳೂರಿನ ಡ್ರೈ ಫ್ರೂಟ್ಸ್ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಸೂಚನೆಗಳು ಕಾಣಿಸುತ್ತಿದ್ದು, ಮುಂದಿನ ವಾರಗಳಲ್ಲಿ ಬೆಲೆ ಏರಿಕೆಯ ಬಿಸಿ ಎದುರಿಸಬೇಕಾಗಬಹುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 am, Tue, 3 March 26

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ