AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೇಂಜರ್ಸ್ ದುಬೈಗಿಡ: ಕೋನೋ ಕಾರ್ಪಸ್ ಮನುಷ್ಯನಿಗೆ ಎಷ್ಟು ಡೇಂಜರ್ ಗೊತ್ತಾ?

ಸುಪ್ರೀಂಕೋರ್ಟ್ ಸೂಚನೆ ನೀಡಿದರೂ ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ನಿಷೇಧಿತ ಡೇಂಜರ್​​ ದುಬೈ ಗಿಡ ಬೆಳೆಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ನಡೆಗೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಗಿಡಗಳನ್ನ ತೆರವು ಮಾಡುವಂತೆ ಆಗ್ರಹಿಸಿದ್ದಾರೆ. ಹಾಗಾದರೆ ಈ ದುಬೈ ಗಿಡದಿಂದ ಮನುಷ್ಯರಿಗೆ ಹೇಗೆ ಹಾನಿ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಡೇಂಜರ್ಸ್ ದುಬೈಗಿಡ: ಕೋನೋ ಕಾರ್ಪಸ್ ಮನುಷ್ಯನಿಗೆ ಎಷ್ಟು ಡೇಂಜರ್ ಗೊತ್ತಾ?
ದುಬೈ ಗಿಡ
ಶಾಂತಮೂರ್ತಿ
| Edited By: |

Updated on:Oct 13, 2025 | 5:00 PM

Share

ಬೆಂಗಳೂರು, ಅಕ್ಟೋಬರ್​ 13: ರಾಜಧಾನಿಯ ರಸ್ತೆಗಳಲ್ಲಿ ನಿಷೇಧಿತ ಕೋನೋ ಕಾರ್ಪಸ್ (conocarpus plants) (ದುಬೈ ಗಿಡ) ಬೆಳೆಸಲಾಗುತ್ತಿದೆ. ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಈ ದುಬೈ ಗಿಡವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನೆಟ್ಟು ಪೋಷಿಸುತ್ತಿರುವ ಆರೋಪಗಳು ಕೇಳಿಬಂದಿವೆ. ಪರಿಸರ ಪ್ರಿಯರು ಕಳೆದ ವರ್ಷ ಈ ಗಿಡದ ಬಗ್ಗೆ ದೂರು ಸಲ್ಲಿಸಿದ್ದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೆಂಗಳೂರಿನ ರಸ್ತೆಗಳಲ್ಲಿ ನಿಷೇಧಿತ ದುಬೈ ಗಿಡವನ್ನು ಬೆಳೆಸಿ ಸೈಲೆಂಟ್​ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆಂಧ್ರ, ಗುಜರಾತ್, ತೆಲಂಗಾಣದಲ್ಲಿ ಈಗಾಗಲೇ ಈ ಡೇಂಜರ್​ ಗಿಡವನ್ನು ಬ್ಯಾನ್​ ಮಾಡಲಾಗಿದೆ. ಆದರೆ ವರ್ಷ ಕಳೆದರೂ ಬೆಂಗಳೂರಿನ ರಸ್ತೆಗಳಲ್ಲಿ ತೆರವಾಗಿಲ್ಲ. ಒಟ್ಟು 5500 ದುಬೈ ಗಿಡಗಳನ್ನ ತನ್ನ ವ್ಯಾಪ್ತಿಯಲ್ಲಿ ಜಿಬಿಎ ಬೆಳೆಸಿದೆ. ನಿರ್ವಹಣೆ ಸುಲಭ ಎಂದು ಇದೇ ಗಿಡಗಳ ಪೋಷಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: 4 ವರ್ಷಗಳ ಕಾಲ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ, ಅದರಿಂದ ಹೊರಬಂದದ್ದು ಹೇಗೆ ಗೊತ್ತಾ?

ಈಗಾಗಲೇ ಬೆಂಗಳೂರಿನ ರಸ್ತೆಗಳಲ್ಲಿ ದುಬೈ ಗಿಡ ಆಳೆತ್ತರ ಬೆಳೆದು ನಿಂತಿವೆ. ಈ ದುಬೈ ಗಿಡ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ ಎನ್ನಲಾಗುತ್ತಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಈ ಡೇಂಜರ್ ಟ್ರೀ ಆಕ್ಸಿಜನ್ ಬದಲು ಕಾರ್ಬನ್ ಡೈಆಕ್ಸೈಡ್ ರಿಲೀಸ್ ಮಾಡುತ್ತದೆ.

ಗಿಡ ತೆರವಿಗೆ ಪರಿಸರ ಪ್ರೇಮಿಗಳ ಆಗ್ರಹ

ಸದ್ಯ ರಾಜಧಾನಿಯ ರಸ್ತೆಗಳಲ್ಲಿ ಬೆಳೆಸಿರುವ ಈ ದುಬೈ ಗಿಡ ತೆರವಿಗೆ ಪರಿಸರ ಪ್ರೇಮಿಗಳಿಂದ ಆಗ್ರಹಿಸಲಾಗಿದೆ. ಇತ್ತ ದುಬೈ ಗಿಡ ಬೆಳೆಯದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೂ ರಾಜಧಾನಿಯಲ್ಲಿ ಈವರೆಗೆ  ತೆರವಾಗಿಲ್ಲ.

ಸೂಚನೆ ಬಂದ ಮೇಲೆ ಮುಂದಿನ ಕ್ರಮ

ಇನ್ನು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ, ಸರ್ಕಾರದ ಸೂಚನೆ ಬಂದ ಮೇಲೆ ಮುಂದಿನ ಕ್ರಮ ಎನ್ನುತ್ತಿದ್ದಾರೆ. ಸುಪ್ರೀಂಕೋರ್ಟ್ ಸೂಚನೆ ನೀಡಿದೆ, ಇಲ್ಲಿ ಸೂಚನೆ ಬಂದರೆ ಕ್ರಮಕೈಗೊಳ್ಳುತ್ತೇವೆ  ಎಂದು ಜಿಬಿಎ ಅಧಿಕಾರಿಗಳು ಹೇಳಿದ್ದಾರೆ.

ಕೋನೋಕಾರ್ಪಸ್ ಏಕೆ ಡೇಂಜರ್?

  • ಈ ಗಿಡ ಆಕ್ಸಿಜನ್ ಬದಲು ಕಾರ್ಬನ್ ಬಿಡುಗಡೆ ಮಾಡುತ್ತೆ
  • ಇದರ ಸುತ್ತಮುತ್ತ ವಾಸಿಸುವ ಜನರಿಗೆ ಅಸ್ತಮಾ, ಉಸಿರಾಟ ಸಮಸ್ಯೆ ಬರುತ್ತೆ
  • ಬೇರುಗಳಿಂದ ಪೈಪ್ ಲೈನ್​ಗಳಿಗೆ ಹಾನಿ ಮಾಡುತ್ತದೆ
  • ಅಂತರ್ಜಲ ಮಟ್ಟ ಕುಸಿಯುವಂತೆ ಮಾಡುವ ಸಾಧ್ಯತೆ
  • ಅತಿಹೆಚ್ಚು ಆಳದಲ್ಲಿ ಬೇರು ಬಿಡುವುದರಿಂದ ಅಕ್ಕಪಕ್ಕದ ಮರಗಿಡಗಳಿಗೆ ಸಮಸ್ಯೆ ಉಂಟು ಮಾಡುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:58 pm, Mon, 13 October 25

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ